ಆಪರೇಷನ್ ಕಮಲಕ್ಕೆ ಮೋದಿ, ಶಾ ಕುಮ್ಮಕ್ಕು:ದಿನೇಶ್ ಗುಂಡೂರಾವ್
Team Udayavani, Sep 23, 2018, 6:30 AM IST
ಬೆಂಗಳೂರು: ಬಿಜೆಪಿಯವರು ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಶಾಸಕರ ಖರೀದಿಗೆ ಮುಂದಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕುಮ್ಮಕ್ಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಇಷ್ಟು ದಿನ ಯಡಿಯೂರಪ್ಪ ಬೇರೆ ಶಾಸಕರ ಮೂಲಕ ಆಮಿಷ ಒಡ್ಡುತ್ತಿದ್ದರು. ಆದರೆ, ಈಗ ಅವರೇ ನೇರವಾಗಿ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿದ್ದಾರೆ. ಅಲ್ಲದೇ ಇನ್ನೆರೆಡು ದಿನದಲ್ಲಿ 18 ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂದು ಹೇಳಿದ್ದಾರೆ. ಬಿಲ್ಡರ್ಗಳು, ರಿಯಲ್ ಎಸ್ಟೇಟ್ ಏಜೆಂಟರ್ಗಳ ಮೂಲಕ ಹಣ ಸಂಗ್ರಹಿಸಿ ಶಾಸಕರ ಖರೀದಿ ಮಾಡಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಎಲ್ಲ ಶಾಸಕರೂ ನಮ್ಮ ಸಂಪರ್ಕದಲ್ಲಿದ್ದಾರೆ ಯಾರೂ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಆದರೂ ಬಿಜೆಪಿಯವರು ಗೊಂದಲ ಸೃಷ್ಠಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಸುಧಾಕರ್ ಹಾಗೂ ಎಂ.ಟಿ.ಬಿ. ನಾಗರಾಜ್ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುತ್ತಿದ್ದಾರೆ. ಬಿ.ಸಿ. ಪಾಟೀಲ್ ಕೂಡ ದೇವಸ್ಥಾನಕ್ಕೆ ತೆರಳಿ ವಾಪಸ್ ಬಂದಿದ್ದಾರೆ.
ಸೆಪ್ಟಂಬರ್ 25 ರಂದು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಕಾಂಗ್ರೆಸ್ನ ಎಲ್ಲ ಶಾಸಕರು ಹಾಜರಾಗಲಿದ್ದು, ಅಕ್ಟೋಬರ್ 4 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ನ ಮೂವರು ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ