“ತುರ್ತು ಸ್ಪಂದನ ದಳ’ರಚನೆ
Team Udayavani, Aug 19, 2018, 6:05 AM IST
ಬೆಂಗಳೂರು: ಭಾರೀ ಮಳೆ ಮತ್ತು ಗುಡ್ಡಗಳ ಕುಸಿತದಿಂದ ಅಲ್ಲಲ್ಲಿ ದಾರಿ ಮಧ್ಯೆ ಸಿಲುಕಿರುವ ಪ್ರಯಾಣಿಕರ ರಕ್ಷಣೆಗಾಗಿ ಕೆಎಸ್ಆರ್ಟಿಸಿ “ತುರ್ತು ಸ್ಪಂದನ ದಳ’ ರಚಿಸಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಈ ದಳ ಕಾರ್ಯಾಚರಣೆ ಮಾಡಲಿದೆ. ಈ ಕಾರ್ಯಕ್ಕಾಗಿ ಪ್ರತಿ ಘಟಕದಿಂದ ತಲಾ ಎರಡು ಬಸ್ಗಳು, ಇಬ್ಬರು ಚಾಲಕರು ಹಾಗೂ ಇಬ್ಬರು ನಿರ್ವಾಹಕರನ್ನು ನಿಯೋಜಿಸಿದ್ದು, ಇವುಗಳನ್ನು ಬಳಸಿಕೊಂಡು ಆಯಾ ಜಿಲ್ಲಾಡಳಿತ ಪರಿಹಾರ ಕ್ರಮ ಕೈಗೊಳ್ಳಬಹುದು.
ಮಂಗಳೂರು, ಪುತ್ತೂರು, ಚಿಕ್ಕಮಗಳೂರು, ಹಾಸನ, ಮೈಸೂರು, ಶಿವಮೊಗ್ಗದಿಂದ ಒಟ್ಟಾರೆ 21 ಘಟಕಗಳಿಂದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಬಸ್ಗಳಲ್ಲಿ ಪರಿಹಾರ ಸಾಮಗ್ರಿಗಳನ್ನು ಉಚಿತವಾಗಿ ಸಾಗಿಸಬಹುದು. ದಾರಿ ಮಧ್ಯೆ ಸಿಲುಕಿದ ಪ್ರಯಾಣಿಕರನ್ನೂ ಕೊಂಡೊಯ್ಯಬಹುದು. ಪರಿಹಾರ ಕಾರ್ಯಕ್ಕೆ ಅಧಿಕಾರಿಗಳ ತಂಡವನ್ನು ರಚಿಸಿದ್ದು, ಇದರಲ್ಲಿ ಆರೂ ವಿಭಾಗಗಳ ವಿಭಾಗೀಯ ನಿಯಂತ್ರಣಾಧಿಕಾರಿ,ಯಾಂತ್ರಿಕ ಶಿಲ್ಪಿ, ಸಂಚಲನಾಧಿಕಾರಿಗಳು ಇರುತ್ತಾರೆ. ಜತೆಗೆ, ನಿಯಂತ್ರಣ ಕೊಠಡಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದೆ. ಮಾಹಿತಿಗೆ ಮೊ: 77609 90034/ 77609 90035 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್