ರಾಷ್ಟ್ರೀಯತೆಯನ್ನು ಪಕ್ಷಗಳು ಗುತ್ತಿಗೆ ಪಡೆದುಕೊಂಡಿಲ್ಲ


Team Udayavani, Jun 16, 2019, 3:05 AM IST

rashtriyata

ಬೆಂಗಳೂರು: ರಾಷ್ಟ್ರೀಯತೆಯನ್ನು ಯಾವುದೇ ಒಂದು ಪಕ್ಷ ಅಥವಾ ವ್ಯಕ್ತಿ ಗುತ್ತಿಗೆ ಪಡೆದುಕೊಂಡಿಲ್ಲ. ಪ್ರತಿಯೊಬ್ಬರೂ ತಮಗೆ ಅನಿಸಿದ ರೀತಿಯಲ್ಲಿ ಅದನ್ನು ವ್ಯಕ್ತಪಡಿಸಬಹುದು ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಧ್ವನಿ ಪ್ರಬುದ್ಧ ಭಾರತ ಸಂಘದಿಂದ ಶನಿವಾರ ಗಾಂಧಿಭವನದಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯತೆ ಮತ್ತು ನಿರುದ್ಯೋಗ’ ವಿಷಯ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯತೆ ಎಂಬುದು ಯಾರೋ ಒಬ್ಬರು ಹೀಗೆ ಮಾಡಿ ಎಂದು ಹೇಳುವುದಲ್ಲ. ಪ್ರತಿಯೊಬ್ಬರೂ ತಮಗೆ ಅನಿಸಿದ ರೀತಿಯಲ್ಲಿ ವ್ಯಕ್ತಪಡಿಸುವುದು. ಅದನ್ನು ಯಾವುದೇ ಪಕ್ಷ ಗುತ್ತಿಗೆ ಪಡೆದುಕೊಂಡಿಲ್ಲ ಎಂದು ಹೇಳಿದರು.

ಉದ್ಯೋಗ ವಿಚಾರದಲ್ಲಿ ನಿರಂತರವಾಗಿ ಕನ್ನಡಿಗರಿಗೆ ಅನ್ಯಾಯವಾಗುತ್ತಿರುವುದು ಸತ್ಯದ ಸಂಗತಿ. ಆಗಂತ ಇಲ್ಲಿರುವ ಬೇರೆ ರಾಜ್ಯವನ್ನು ಓಡಿಸಬೇಕು ಎಂದು ಸರಿಯಲ್ಲ. ಅಂತಹ ಹೋರಾಟಗಳಿಗೆ ನನ್ನ ಬೆಂಬಲವಿಲ್ಲ. ಆದರೆ, ಮುಂದೆ ನಡೆಯುವ ನೇಮಕಾತಿಗಳಲ್ಲಿ ಕನ್ನಡಿಗರಿಗೆ ಅದ್ಯತೆ ನೀಡಬೇಕು ಹಾಗೂ ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಸಂಪೂರ್ಣವಾಗಿ ಕನ್ನಡಿಗರಿಗೆ ದೊರೆಯುವಂತೆ ಮಾಡಲು ಸರ್ಕಾರದ ಮೇಲೆ ಒತ್ತಡ ಹಾಕಬೇಕಿದೆ ಎಂದು ಹೇಳಿದರು.

ಕನ್ನಡಿಗರಿಗೆ ಉದ್ಯೋಗ ದೊರೆಯಬೇಕೆಂಬ ಉದ್ದೇಶದಿಂದ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಲು ವಿಧಾನಮಂಡಲ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಆದರೆ, ಅದನ್ನು ಅನುಷ್ಠಾನಗೊಳಿಸಲು ಯಾವುದೇ ರಾಜಕೀಯ ಪಕ್ಷಗಳಿಗೆ ಇಚ್ಛಾಶಕ್ತಿಯಿಲ್ಲ. ಆ ನಿಟ್ಟಿನಲ್ಲಿ ಆಯಾ ರಾಜ್ಯಗಳಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಆಯಾ ರಾಜ್ಯದವರಿಗೆ ನೀಡುವಂತೆ ಕಾನೂನನ್ನು ಸರ್ಕಾರದ ಜಾರಿಗೊಳಿಸಬೇಕಿದೆ.

ನ್ಯಾಯವಾದಿ ಸುಧೀರ್‌ ಕುಮಾರ್‌ ಮುರೊಳ್ಳಿ ಮಾತನಾಡಿ, ಸದ್ಯ ದೇಶದಲ್ಲಿರುವ ರಾಷ್ಟ್ರೀಯತೆ ನಿರಂತರವಾಗಿ ಸೈನಿಕರ ಬಲಿಯನ್ನು ಕೋರುತ್ತಿದೆ. ಜತೆಗೆ ಅರಣ್ಯ ಪ್ರದೇಶಗಳಿÉರುವ ಆದಿವಾಸಿ ಸಮುದಾಯಗಳನ್ನು ಎತ್ತಂಗಡಿ ಮಾಡಿಸುತ್ತಿದ್ದು, ಗ್ರಾಮಸ್ವರಾಜ್ಯದ ಬದಲಿಗೆ, ಜಾಗತಿಕರಣದ ಹುಸಿ ಪೆಪ್ಪರಮೆಂಟ್‌ನ್ನು ಜನರಿಗೆ ತಿನ್ನಿಸುತ್ತಿದೆ. ಇವತ್ತಿನ ರಾಷ್ಟ್ರೀಯತೆ ರೈತರು, ಕಾರ್ಮಿಕರ ಕಷ್ಟಗಳನ್ನು ನೆನಪು ಮಾಡಲು ಬಿಡುತ್ತಿಲ್ಲ ಎಂದು ದೂರಿದರು.

ಎಸ್‌ಬಿಎಂ ಇದ್ದಾಗ ಸರ್‌ ಎಂ.ವಿಶ್ವೇಶ್ವರಯ್ಯ ಅವರ ಫೋಟೋ ತೆಗೆದರೆ ಅದು ಕನ್ನಡಕ್ಕೆ ದ್ರೋಹ, ಅದೇ ಎಸ್‌ಬಿಐ ಮಾಡಿದಾಗ ಅವರ ಫೋಟೋ ತೆಗೆದರೆ ರಾಷ್ಟ್ರೀಯತೆ ಎಂದು ಬಿಂಬಿಸಲಾಗುತ್ತಿದೆ ಎಂದ ಅವರು, ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಇರುವಂತೆ ಖಾಸಗಿ ಉದ್ಯಮಗಳಲ್ಲಿಯೂ ಮೀಸಲಾತಿ ನೀಡುವ ಮಹಷಿ ವರದಿಯನ್ನು ಸರ್ಕಾರ ಅನುಷ್ಠಾನಗೊಳಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು. ಸಂವಾದದಲ್ಲಿ ರಕ್ಷಣಾ ವೇದಿಕೆಯ ಪ್ರವೀಣ್‌ ಕುಮಾರ್‌ ಶೆಟ್ಟಿ, ಚಿಂತಕಿ ರಾಜಲಕ್ಷ್ಮಿ, ರಣಧೀರ ಪಡೆಯ ಹರೀಶ್‌ ಕುಮಾರ್‌ ಸೇರಿದಂತೆ ಪ್ರಮುಖರು ಹಾಜರಿದ್ದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.