ನಾನೂ ನಕ್ಸಲ್: ಕಾರ್ನಾಡ್ ವಿರುದ್ಧ ದೂರು
Team Udayavani, Sep 8, 2018, 12:14 PM IST
ಬೆಂಗಳೂರು: ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ದೇಶದಲ್ಲಿ ನಕ್ಸಲ್ ಕೇಂದ್ರಿತ ಕ್ರಿಮಿನಲ್ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿ ವಕೀಲ ಅಮೃತೇಶ್ ವಿಧಾನಸೌಧ ಪೊಲೀಸ್ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ನಡೆದ ಗೌರಿ ದಿನ ಕಾರ್ಯಕ್ರಮದಲ್ಲಿ ಗಿರೀಶ್ ಕಾರ್ನಾಡ್ “ನಾನು ನಗರ ನಕ್ಸಲ್’ ಎಂಬ ಬೋರ್ಡ್ನ್ನು ಕುತ್ತಿಗೆಗೆ ಹಾಕಿಕೊಂಡಿದ್ದರು.
ಆ ಮೂಲಕ ನಕ್ಸಲ್ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ನಕ್ಸಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಾಗೂ ಭೀಮಾಕೊರೆಗಾಂವ್ ಹಿಂಸಾ ಕೃತ್ಯದ ಘಟನೆ ಸಂಬಂಧ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಕೋರಿದ್ದಾರೆ.
ಅಲ್ಲದೆ, ಸ್ವಾಮಿ ಅಗ್ನಿವೇಶ್ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ನಟ ಪ್ರಕಾಶ್ ರೈ, ಉಮರ್ ಖಾಲೀದ್, ಕನ್ನಯ್ಯ ಕುಮಾರ್, ಕೆ.ಎಸ್.ಭಗವಾನ್ ಕೂಡ ಈ ರೀತಿಯ ನಕ್ಸಲ್ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಬಗ್ಗೆ ತನಿಖೆ ನಡೆಸಿ ಎಂದೂ ದೂರಿನಲ್ಲಿ ಕೋರಿದ್ದಾರೆ.
ಈ ಬಗ್ಗೆ ದೂರು ಸ್ವೀಕರಿಸಿರುವ ವಿಧಾನಸೌಧ ಠಾಣೆ ಪೊಲೀಸರು, ಘಟನೆ ನಡೆದ ಸ್ಥಳ ಹಲಸೂರು ಗೇಟ್ ಠಾಣೆ ವ್ಯಾಪ್ತಿಗೆ ಬರುವುದರಿಂದ ದೂರನ್ನು ವರ್ಗಾಯಿಸಲಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಜೂನಿಯರ್ ಮೇಲೆ ರ್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು
ಹೊಸ ಸೇರ್ಪಡೆ
75ನೇ ಸ್ವಾತಂತ್ರ್ಯೋತ್ಸವ ಸಮಿತಿಯಲ್ಲಿ ಹಲವು ಕನ್ನಡಿಗರಿಗೆ ಸ್ಥಾನ
5 ಕೋ. ರೂ.ಡೀಲ್ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್ ಕಲ್ಲಹಳ್ಳಿ ಪ್ರಶ್ನೆ
ರಾಮಮಂದಿರ ನಿರ್ಮಾಣಕ್ಕಾಗಿ 2,500 ಕೋ.ರೂ. ನಿಧಿ ಸಂಗ್ರಹ : ದೇಣಿಗೆ ಸಂಗ್ರಹ ಅಂತ್ಯ
ಪ್ರತಿಭಟನೆಗೆ 100 ದಿನ : ರೈತರಿಂದ 5 ಗಂಟೆ ಕಾಲ ಹೆದ್ದಾರಿ ತಡೆ
ಎಪ್ರಿಲ್ 9ರಿಂದ ಐಪಿಎಲ್ ಆರಂಭ ? ಪಂದ್ಯಾಟ ಭಾರತದಲ್ಲೇ ನಡೆಯುವುದು ಬಹುತೇಕ ಖಚಿತ