ತಂತ್ರಾಂಶ ಬದಲಿಸಲು 3 ತಿಂಗಳು ಬೇಕೇ?


Team Udayavani, Jan 11, 2018, 12:56 PM IST

bng.jpg

ಯಲಹಂಕ: ಭೂಮಿಯ ದಾಖಲೆಗಳನ್ನು ತಿದ್ದು ಪಡಿ ಮಾಡುವುದೂ ಸೇರಿದಂತೆ ವಿವಿಧ ಕಾರಣ ಗಳಿಂದ ಸಲ್ಲಿಸಿದ ಅರ್ಜಿಗಳು ವಿಲೇವಾರಿ ಯಾಗದ ಕಾರಣ ಬೇಸತ್ತ ರೈತರು ಭೂದಾಖಲೆ ವಿಭಾಗದ ಕಚೇರಿ ಎದುರು ಬುಧವಾರ ದಿಢೀರ್‌ ಧರಣಿ ನಡೆಸಿದರು.

ಮಿನಿ ವಿಧಾನಸೌಧದಲ್ಲಿರುವ ಕಂದಾಯ ಇಲಾಖೆಯ ಭೂಮಿ ವಿಭಾಗದಲ್ಲಿ ಕಳೆದ ಮೂರು ತಿಂಗಳಿನಿಂದ ವಿವಿಧ ಉದ್ದೇಶಗಳಿಂದ ಸಲ್ಲಿಸಿದ್ದ ಅರ್ಜಿಗಳು ಈವರೆಗೂ ವಿಲೇವಾರಿಯಾಗಿಲ್ಲ. ಕಂಪ್ಯೂಟರ್‌ ತಂತ್ರಾಂಶ ಬದಲಾವಣೆ ಮಾಡ ಲಾಗುತ್ತಿದೆ ಎಂಬ ನೆಪ ಹೇಳಿ ಅಲೆಸುತ್ತಿದ್ದಾರೆ.

ತಂತ್ರಾಂಶ ಬದಲಿಸಲು ಮೂರು ತಿಂಗಳು ಬೇಕೇ? ಎಂದು ಪ್ರಶ್ನಿಸಿದ ಪ್ರತಿಭಟನಾನಿರತ ರೈತರು, ಅರ್ಜಿ ವಿಲೇವಾರಿಯಾಗದ ಕಾರಣ ಹಲವು ಕೆಲಸ ಕಾರ್ಯಗಳಿಗೆ ತೊಡಕಾಗಿದೆ. ಸಮಸ್ಯೆ ಪರಿಹರಿಸು ವವರೆಗೂ ಧರಣಿ ನಿಲ್ಲಿಸುವುದಿಲ್ಲ ಎಂದು ಕಚೇರಿ ಬಾಗಿಲಲ್ಲೇ ಕುಳಿತರು.

ಈ ವೇಳೆ ಮಾತನಾಡಿದ ರೈತ ವೀರಭದ್ರೇಗೌಡ, ತಾಲೂಕಿನಲ್ಲಿ ಜಮೀನು ಖರೀದಿ, ಮಾರಾಟ ಪಾಲು ವಿಭಾಗ, ಪವತಿ ವಿರಾಸತ್‌, ಪಹಣಿ ತಿದ್ದುಪಡಿ, ಸೇರಿ ವಿವಿಧ ಕಾರ್ಯಗಳಿಗಾಗಿ ಸಲ್ಲಿಸಿದ ಅರ್ಜಿಗಳ ವಿಲೇವಾರಿ ಕಾರ್ಯ ಕಳೆದ ಮೂರು ತಿಂಗಳಿನಿಂದ ವಿಳಂಬವಾಗುತ್ತಿದೆ. ಕೇಳಿದರೆ ಕಂಪ್ಯೂಟರ್‌ ತಂತ್ರಾಂಶ ಬದಲಾವಣೆ ಮಾಡುತ್ತಿದ್ದೇವೆ.
ನಾಳೆ ಬನ್ನಿ, ನಾಡಿದ್ದು ಬನ್ನಿ ಎಂದು ಅಲೆದಾಡಿಸುತ್ತಿದ್ದಾರೆ. ಹೀಗಾಗಿ ಕೋರ್ಟು, ಕಚೇರಿಗಳಿಗೆ ದಾಖಲೆ ನೀಡಲಾಗುತ್ತಿಲ್ಲ ಎಂದು ದೂರಿದರು.

“ಕಚೇರಿಗೆ ಬರುವ ಸಾರ್ವಜನಿಕರಿಗೆ ಇಲ್ಲಿನ ಸಿಬ್ಬಂದಿ, ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡುವುದಿಲ್ಲ. ನಮ್ಮ ಸಮಸ್ಯೆಗಳ ಬಗ್ಗೆ ಯಾರ ಬಳಿ ಹೇಳಿಕೊಳ್ಳಬೇಕು ಎಂದೇ ತಿಳಿಯುವುದಿಲ್ಲ. ತಹಶೀಲ್ದಾರ್‌ಗೆ ಹೇಳ್ಳೋಣವೆಂದು ಹೋದರೆ ಅವರು ಕಚೇರಿಯಲ್ಲಿಲ್ಲ ಎಂದು ಹೇಳುತ್ತಾರೆ.

ರೆಕಾರ್ಡ್‌ ವಿಭಾಗಕ್ಕೆ ಅರ್ಜಿ ಸಲ್ಲಿಸಿ ತಿಂಗಳುಗಳು ಕಳೆದರೂ ದಾಖಲೆ ನೀಡುವುದಿಲ್ಲ. ಈ ಬಗ್ಗೆ ಅಧಿಕಾರಿಗಳು ಕೂಡಲೇ ಕ್ರಮ ತೆಗೆದುಕೊಳ್ಳ ಬೇಕು,’ ಎಂದು ಅರ್ಜಿದಾರ ನಾಗೇಂದ್ರಪ್ಪ ಎಂಬುವವರು ದೂರಿದರು.

ಸ್ಥಳಕ್ಕೆ ಬಂದ ವಿಶೇಷ ತಹಸೀಲ್ದಾರ್‌ ಅನಿಲ್‌, “17 ವರ್ಷಗಳ ನಂತರ ಕಂದಾಯ ಇಲಾಖೆಯಲ್ಲಿ ತಂತ್ರಾಂಶ ಬದಲಾವಣೆ ನಡೆಯುತ್ತಿದ್ದು, ಇದರಿಂದ ತೊಂದರೆಯಾಗಿದೆ. ಬಹುತೇಕ ಕಾರ್ಯಮುಗಿದಿದ್ದು, ಎರಡು ದಿನ ಕಾಲಾವಕಾಶ ನೀಡಿ,’ ಎಂದರು. ರೈತರು ಪ್ರತಿಭಟನೆ ಹಿಂಪಡೆದು ಕಚೇರಿ ಕೆಲಸಗಳಿಗೆ ಅನುವು ಮಾಡಿಕೊಟ್ಟರು. 

ಟಾಪ್ ನ್ಯೂಸ್

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.