ಎತ್ತಿನಹೊಳೆ ಬೇಕೇ ಬೇಕು: ಎಸ್.ರವಿ
Team Udayavani, Feb 8, 2018, 6:10 AM IST
ವಿಧಾನಪರಿಷತ್ತು: ಯಾರು ಏನೇ ಟೀಕೆ ಮಾಡಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳ ಜನತೆಗೆ ಎತ್ತಿನಹೊಳೆ ಬೇಕೇ ಬೇಕು ಎಂದು ಕಾಂಗ್ರೆಸ್ ಸದಸ್ಯ ಎಸ್.ರವಿ ಹೇಳಿದರು.
ಒಬ್ಬ ರೈತನಾಗಿ ಆ ಭಾಗದ ಜನರ ಕಷ್ಟ ಏನೆಂಬುದು ನನಗೆ ಗೊತ್ತು. ಕುಡಿಯಲು, ಬೆಳೆಯಲು ನೀರಿಲ್ಲ. ಇರುವ ನೀರಿನಿಂದ ಕಾಯಿಲೆಗಳು ಬರುತ್ತಿವೆ. ಹಾಗಾಗಿ, ಎತ್ತಿನಹೊಳೆ ಯೋಜನೆ ಜಾರಿಯಾಗಲೇಬೇಕು. ಇದಕ್ಕಾಗಿ ಈವರೆಗೆ 2,560 ಕೋಟಿ ರೂ. ವೆಚ್ಚ ಮಾಡಿದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಪ್ರಸ್ತಾವನೆಯನ್ನು ಅನುಮೋದಿಸಿ ಮಾತನಾಡಿದ ಜಯಮಾಲ, ಹಿಂದೂಪರ, ಮುಸ್ಲಿಂ ಪರ ಎಂದು ಹೇಳಲಾಗುತ್ತದೆ. ಆದರೆ, ನಮ್ಮ ಸರ್ಕಾರ ಮನುಷ್ಯ ಪರ. ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕಾದರೆ ಮಾತೃ ಹೃದಯ ಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾತೃ ಹೃದಯ ಇರುವುದರಿಂದಲೇ ಇಷ್ಟೊಂದು ಜನಪರ ಕಾರ್ಯಕ್ರಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ