ಎನ್‌ಇಪಿ ಜಾರಿಯಿಂದ ಶೈಕ್ಷಣಿಕ ಕ್ರಾಂತಿ

ತಾಂತ್ರಿಕ ಶಿಕ್ಷಣಕ್ಕಾಗಿ ಕರ್ನಾಟಕ ನೆಚ್ಚಿನ ತಾಣ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ

Team Udayavani, Oct 13, 2021, 10:40 AM IST

ಎನ್‌ಇಪಿ ಜಾರಿಯಿಂದ ಶೈಕ್ಷಣಿಕ ಕ್ರಾಂತಿ

ಬೆಂಗಳೂರು: ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಿಂದ ರಾಜ್ಯದಲ್ಲಿ ತಾಂತ್ರಿಕ ಶಿಕ್ಷಣದಲ್ಲಿ ದೊಡ್ಡ ಪ್ರಮಾಣದ ಕ್ರಾಂತಿ ಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಕರ್ನಾಟಕ ಖಾಸಗಿ ಅನುದಾನರಹಿತ ಎಂಜಿನಿಯರಿಂಗ್‌ ಕಾಲೇಜುಗಳ ಸಂಘದಿಂದ ವಿಧಾನಸೌಧದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಭಾಗವಾಗಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಕನ್ನಡ ಮಾಧ್ಯಮ, ಬಿ.ಎಸ್ಸಿ ಆನರ್ಸ್‌ ಕೋರ್ಸ್‌, ಪಠ್ಯಕ್ರಮ, ತಾಂತ್ರಿಕ ಶಿಕ್ಷಣಕ್ಕಾಗಿ ಕರ್ನಾಟಕ ನೆಚ್ಚಿನ ತಾಣ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಎಷ್ಟೇ ಉತ್ತಮ ತಂತ್ರಜ್ಞಾನ ಬಂದರೂ, ಅದರ ದುರುಪಯೋಗ ಮಾಡಿಕೊಳ್ಳುವವರು ಇದ್ದಾರೆ. ಹ್ಯಾಕರ್‌ ಗಳಿಂದ ವ್ಯವಸ್ಥೆ ಹಾಳಾಗುತ್ತದೆ.

ಹೀಗಾಗಿ ನಮ್ಮ ಡಿಜಿಟಲ್‌ ಮಾಹಿತಿಯನ್ನು ಸುಳಿಸುವ ಸುರಕ್ಷಿತ ತಂತ್ರಜ್ಞಾನ ಬರ ಬೇಕು ಮತ್ತು ನೈತಿಕ ತಾಂತ್ರಿಕತೆಯನ್ನು ಉಳಿಸಿ, ಬೆಳೆಸ ಬೇಕು. ತಂತ್ರಜ್ಞಾನ ಆಧಾರಿತ ಸಮಾಜ ನಿರ್ಮಾಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರಬೇಕು ಎಂದರು.ಎಂಜಿನಿಯರಿಂಗ್‌ ಶಿಕ್ಷಣದಲ್ಲಿ ಎನ್‌ಇಪಿ ಅನುಷ್ಠಾನಕ್ಕೆ ಬೇಕಾದ ಎಲ್ಲ ಸಹಕಾರವನ್ನು ಸರ್ಕಾರ ನೀಡಲಿದೆ. ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳು ಜತೆಯಾಗಿ ಕೆಲಸ ಮಾಡಿದಾಗ ಮಾತ್ರ ಎನ್‌ಇಪಿ ಯಶಸ್ವಿ ಅನುಷ್ಠಾನ ಸಾಧ್ಯವಿದೆ. ಎನ್‌ಇಪಿ ಅನುಷ್ಠಾನದಿಂದ ಶಿಕ್ಷಣದ ಎಲ್ಲ ಹಂತದಲ್ಲೂ ಬದಲಾವಣೆ ಆಗಲಿದೆ.

ಇದನ್ನೂ ಓದಿ:- ಮಹಾಲಕ್ಷ್ಮಿ ಲೇಔಟ್ :  ಭಾರೀ ಮಳೆಗೆ ಕುಸಿಯುವ ಹಂತದಲ್ಲಿ 3 ಅಂತಸ್ತಿನ ಮಹಡಿ : ಗೋಪಾಲಯ್ಯ ಭೇಟಿ

ಇದರ ಮೊದಲ ಭಾಗವಾಗಿ ಶಿಕ್ಷಕರ ಅಥವಾ ಉಪನ್ಯಾಸಕರ ಮಾನಸಿಕತೆಯಲ್ಲಿ ಬದಲಾವಣೆ ಆಗಬೇಕು. ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಚಿಂತನೆಯನ್ನು ತುಂಬುವ ಕಾರ್ಯ ಆರಂಭವಾಗಬೇಕು ಎಂದರು. ನಮ್ಮಲ್ಲಿ ಪರ್ಸೆಂಟೇಜ್‌ ನೀಡುವ ವ್ಯವಸ್ಥೆಯಿದೆ.

ಇದು ಬದಲಾಗಿ ಪರ್ಸೆಂಟೈಲ್‌ ನೀಡುವ ವ್ಯವಸ್ಥೆ ಬರಬೇಕು. ಬದಲಾವಣೆಗೆ ಒಗ್ಗಿಕೊಳ್ಳಬೇಕು. ಇಲ್ಲವಾದರೆ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ. ಈಗ ಆ್ಯಪ್‌ ಮತ್ತು ತರಗತಿ ಕೊಠಡಿಗಳ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ತರಗತಿ ಕೊಠಡಿಯಲ್ಲಿ ಸಿಗುವ ಶಿಕ್ಷಣ ಆ್ಯಪ್‌ ಮೂಲಕ ಸಿಗುತ್ತಿದೆ. ಈ ನಿಟ್ಟಿನಲ್ಲಿ ತರಗತಿ ಕೊಠಡಿಗಳನ್ನು ಉನ್ನತೀಕರಿಸುವ ವ್ಯವಸ್ಥೆಯೂ ಆಗಬೇಕು. ದೇಶದ ಏಳ್ಗೆಗೆ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಮಾತನಾಡಿ, ಶಿಕ್ಷಣ ಗುಣಮಟ್ಟ ಸುಧಾರಣೆಯ ನಿಟ್ಟಿನಲ್ಲಿ ಹಾಗೂ ಉದ್ಯೋಗಾವಕಾಶ ಕಲ್ಪಿಸಲು ಶಿಕ್ಷಣ ಸಂಸ್ಥೆಗಳ ಜತೆಗೆ ಕೈಗಾರಿಕೆಗಳನ್ನು ಜೋಡಿಸುವ ಕಾರ್ಯ ಆಗುತ್ತಿದೆ. ತಾಂತ್ರಿಕ ಶಿಕ್ಷಣದ ಪಠ್ಯಕ್ರಮವನ್ನು ಉನ್ನತೀಕರಿಸುವ ಕಾರ್ಯ ನಡೆಯುತ್ತಿದೆ.

ಉನ್ನತ ಶಿಕ್ಷಣದಲ್ಲಿ ದಾಖಲಾತಿ ಪ್ರಮಾಣವನ್ನು ಶೇ.50ಕ್ಕೆ ಹೆಚ್ಚಿಸಲು ಬೇಕಾದ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲ ಪತಿ ಡಾ.ಕರಿಸಿದ್ಧಪ್ಪ, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚು ವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್‌ ನಾಯಕ್‌, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್‌, ಬಾಷ್‌ ಕಂಪನಿಯ ಜನರಲ್‌ ಮ್ಯಾನೇಜರ್‌ ದತ್ತಾತ್ರೇಯ ಸಾಲಗಾಮೆ, ಕರ್ನಾಟಕ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಸಂಘದ ಪಾಂಡುರಂಗ ಶೆಟ್ಟಿ, ಮಂಜುನಾಥ ಭಂಡಾರಿ, ವಿಧಾನ ಪರಿಷತ್‌ ಸದಸ್ಯ ಸಶೀಲ್‌ ನಮೋಸಿ ಇದ್ದರು.

ಎನ್‌ಇಪಿ ಗೀತೆ ಬಿಡುಗಡೆ ರಾಷ್ಟ್ರೀಯ ಶಿಕ್ಷಣ ನೀತಿ ಗೀತೆಯಾದ “ಜಯ ವಾಗಲಿ ಶಿಕ್ಷಣಕೆ’ಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿ ದರು. ಧಾರವಾಡದ ಉನ್ನತ ಶಿಕ್ಷಣ ಪರಿಷತ್ತಿನ ನಿರ್ದೇಶಕ ಪ್ರೊ.ಎಸ್‌.ಎಂ.ಶಿವಪ್ರಸಾದ್‌ ರಚಿಸಿರುವ ಈ ಗೀತೆಗೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಎನ್‌ಇಪಿ ಆಶಯಗಳನ್ನು ಸಾರುವ ಈ ಗೀತೆಯನ್ನು ಹೊಂಬಾಳೆ ಫಿಲಂಸ್‌ ಸಂಸ್ಥೆಯ ಮಾಲೀಕ ವಿಜಯ್‌ ಕಿರಗಂದೂರು ಅವರು ಉಚಿತವಾಗಿ ನಿರ್ಮಿಸಿ ಕೊಟ್ಟಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.