ಬೆಂಗಳೂರಿನಿಂದ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ನೇಪಾಳದ ಮಾಜಿ ಪೊಲೀಸ್ ಸಿಬ್ಬಂದಿ ಬಂಧನ


Team Udayavani, Jan 21, 2021, 1:21 PM IST

ಬೆಂಗಳೂರಿನಿಂದ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ನೇಪಾಳದ ಮಾಜಿ ಪೊಲೀಸ್ ಸಿಬ್ಬಂದಿ ಬಂಧನ

ಬೆಂಗಳೂರು: ಕೆಲಸಕ್ಕಿದ್ದ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿ ನೇಪಾಳಕ್ಕೆ ಪರಾರಿಯಾಗಿದ್ದ ಮಾಜಿ ಪೊಲೀಸ್‌ ಸಿಬ್ಬಂದಿಯಿಂದ ಚಾಮರಾಜಪೇಟೆ ಪೊಲೀಸರು ಚಿನ್ನದ ಬೆಸ್ಕೆಟ್‌ ಮತ್ತು ಚಿನ್ನಾಭರಣ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ನೇಪಾಳ ಮೂಲದ ತಾಪಾ ಸೂರ್ಯ ಬಹದ್ದೂರ್‌ (30) ಎಂಬಾತನಿಂದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಉದ್ಯಮಿ ಟಿ. ಸೆಲ್ವರಾಜ್‌ ಎಂಬುವರು ಪತ್ನಿ ಮತ್ತು ಪುತ್ರನೊಂದಿಗೆ ಚಾಮರಾಜಪೇಟೆಯ ಮನೆಯಲ್ಲಿ ವಾಸವಾಗಿದ್ದರು. ಈ ಮನೆಗೆ ಸಂಬಂಧಿಸಿದಂತೆ ಸೆಲ್ವರಾಜ್‌ ಮತ್ತು ಅವರ ಸಂಬಂಧಿ ನಡುವೆ ಕೋರ್ಟ್ ನಲ್ಲಿ ವ್ಯಾಜ್ಯವಿದ್ದು, ವಿಚಾರಣೆ ನಡೆಯುತ್ತಿತ್ತು.

ಇದನ್ನೂ ಓದಿ:ಸ್ನೇಹಿತರಿಂದಲೇ ಯುವತಿಗೆ ಬ್ಲ್ಯಾಕ್‌ಮೇಲ್‌: ಮಾಂಗಲ್ಯ ಸರ ನೀಡಿದರೂ ಬಿಡದ ದುರುಳರು

ಆರೋಪಿ ತಾಪಾ ಸೂರ್ಯ ಬಹದ್ದೂರ್‌ ಹತ್ತು ತಿಂಗಳ ಹಿಂದೆ ಅವರ ಮನೆಯಲ್ಲಿ ಸೆಕ್ಯೂ ರಿಟಿ ಗಾರ್ಡ್‌ ಆಗಿ ನೇಮಕಗೊಂಡಿದ್ದ. ನಂತರ ಮನೆಯವರ ವಿಶ್ವಾಸ ಗಳಿಸಿದ್ದರಿಂದ ಆತನಿಗೆ ಮನೆಯ ಎಲ್ಲೆಡೆ ಹೋಗಲು ಅವಕಾಶವಿತ್ತು. ಇದನ್ನೇ ದುರುಪಯೋಗಪಡಿಸಿಕೊಂಡಿರುವ ಆರೋಪಿಯು ಮನೆಯ ಬೀರುವಿನಲ್ಲಿದ್ದ ಸುಮಾರು 62 ಲಕ್ಷ ರೂ. ಮೌಲ್ಯ ದ 1192 ಗ್ರಾಂ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದಾನೆ.

ಡಿ.25ರಂದು ನ್ಯಾಯಾಲಯದ ಸೂಚನೆ ಮೇರೆಗೆ ಮನೆ ಖಾಲಿ ಮಾಡುವಾಗ ಬೀರುವಿನಲ್ಲಿದ್ದ ಚಿನ್ನಾಭರಣ ಕಳವಾಗಿರುವುದು ಸೆಲ್ವರಾಜ್‌ ಕುಟುಂಬಕ್ಕೆ ಗೊತ್ತಾಯಿತು. ಅದರಿಂದ ಅನಮಾನಗೊಂಡು ಸೆಕ್ಯೂರಿಟಿ ಗಾರ್ಡ್‌ ವಿಚಾರಿಸಲು ಹೋದಾಗ ಆತ ನಾಪತ್ತೆಯಾಗಿದ್ದ. ಈ ಸಂಬಂಧ ಸೆಲ್ವರಾಜ್‌ ದೂರು ನೀಡಿದ್ದರು ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ದ್ವಿವೇದಿಗೆ ಜಾಮೀನು ನೀಡಿದ ಸುಪ್ರೀಂ

ನೇಪಾಳದಲ್ಲಿ ಸೆರೆ: ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗಾಗಿ ಚಾಮರಾಜಪೇಟೆ ಠಾಣಾಧಿಕಾರಿ ಬಿ.ಎಸ್‌.ಲೋಕಾಪುರ ನೇತೃತ್ವದಲ್ಲಿ ತಂಡ ರಚನೆಯಾಗಿತ್ತು. ಆರೋಪಿ ನೇಪಾಳದ ಕಠ್ಮಂಡುಗೆ ಹೋಗಿರುವ ಮಾಹಿತಿ ಪಡೆಯಲಾಗಿತ್ತು. ಅಷ್ಟರಲ್ಲಿ ರಾಮೇಛಾಪ್‌ ಪೊಲೀಸರು ಪ್ರಕರಣವೊಂದರಲ್ಲಿ ಬಂಧಿಸಿದ್ದರು. ಈ ಮಾಹಿತಿ ಮೇರೆಗೆ ನೇಪಾಳದ ರಾಯಭಾರ ಕಚೇರಿ ಮತ್ತು ಇಂಟರ್‌ಪೋಲ್‌ ಅಧಿಕಾರಿಗಳ ಜತೆ ಪತ್ರ ವ್ಯವಹಾರ ನಡೆಸಿದ್ದರು. ಅಲ್ಲದೆ, ರಾಮೇ ಭಾಫ್ ಪೊಲೀಸ್‌ ಠಾಣೆಗೂ ಮಾಹಿತಿ ನೀಡಲಾಗಿತ್ತು. ಬಳಿಕ ನೇಪಾಳಕ್ಕೆ ತೆರಳಿದ ಪೊಲೀಸರು ಆರೋಪಿಯಿಂದ ಚಿನ್ನದ ಬೆಸ್ಕೆಟ್ ಗಳು ಮತ್ತು ಚಿನ್ನಾಭರಣಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದರು ಎಂದು ಹಿರಿಯ ಪೊಲೀಸರು ಮಾಹಿತಿ ನೀಡಿದರು.

ಪೊಲೀಸ್‌ ಸಿಬ್ಬಂದಿಯಾಗಿದ್ದ ಆರೋಪಿ ತಾಪಾ ಸೂರ್ಯ:  ಆರೋಪಿ ತಾಪಾ ಸೂರ್ಯ ಬಹದ್ದೂರು ಈ ಮೊದಲು ನೇಪಾಳ ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸು ತ್ತಿದ್ದ. ಈ ವೇಳೆ ಕರ್ತವ್ಯ ಲೋಪ ಹಾಗೂ ಇತರೆ ಪ್ರಕರಣವೊಂದರಲ್ಲಿ ಅಮಾನತು ಮಾಡಲಾಗಿತ್ತು. ಆ ಬಳಿಕ ಆರೋಪಿ ತಪ್ಪಿಸಿಕೊಂಡು ಬೆಂಗಳೂರಿಗೆ ಬಂದಿದ್ದ. ಕಳೆದ ತಿಂಗಳು ನೇಪಾಳಕ್ಕೆ ಹೋಗುತ್ತಿದ್ದಂತೆ ಆರೋಪಿಯನ್ನು ರಾಮೇ ಭಾಫ್ ಪೊಲೀಸರು ಬಂಧಿಸಿದ್ದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.