ಹೊಸ ಮೊಬೈಲ್‌ ಟವರ್‌ ನೀತಿ ಜಾರಿ: ಖಾದರ್‌


Team Udayavani, Jun 4, 2019, 3:06 AM IST

hosa

ಬೆಂಗಳೂರು: ರಾಜ್ಯದಲ್ಲಿ ಮೊಬೈಲ್ ಟವರ್‌ಗಳ ಹಾವಳಿ ನಿಯಂತ್ರಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಇಲಾಖೆ ಹೊಸ ಮೊಬೈಲ್‌ ಟವರ್‌ ನೀತಿಯನ್ನು ಜಾರಿಗೆ ತಂದಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌ ಹೇಳಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಟವರ್‌ ಅಳವಡಿಕೆ ನೀತಿ ಬಗ್ಗೆ ಅಧಿಸೂಚನೆ ಹೊರಡಿಸಿರುವ ನಗರಾಭಿವೃದ್ಧಿ ಇಲಾಖೆ, ಮೊಬೈಲ್‌ ಟವರ್‌ ಅಳವಡಿಕೆಗೆ ಹಲವು ಷರತ್ತುಗಳನ್ನು ಹೇರಿದೆ. ಅಧಿಸೂಚನೆಯಂತೆ ಮೊಬೈಲ್ ಟವರ್‌ ಅಳವಡಿಕೆಗೆ ಆಯಾ ಪ್ರದೇಶದ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ಪಾಲಿಕೆಗಳ ಅನುಮತಿ ಕಡ್ಡಾಯವಾಗಿದೆ ಎಂದು ತಿಳಿಸಿದರು.

ಹೊಸ ನೀತಿ ಪ್ರಕಾರ ವಸತಿ ಪ್ರದೇಶಗಳಲ್ಲಿ ಟವರ್‌ ಅಳವಡಿಕೆಗೆ ನಿರ್ಬಂಧ ಹೇರಲಾಗಿದೆ. ವಸತಿ ಪ್ರದೇಶದಲ್ಲಿ ಟವರ್‌ ಅಳವಡಿಕೆಯನ್ನು ತಪ್ಪಿಸಲು ಸಾಧ್ಯವಾಗದೆ ಹೋದರೆ, ಸಂಬಂಧಿತ ಮಂಜೂರಾತಿ ಪ್ರಾಧಿಕಾರದ ಅನುಮತಿ ಪಡೆಯಬೇಕಾಗಿದೆ. ವಾಣಿಜ್ಯ ಪ್ರದೇಶ ಅಥವಾ ಸಾರ್ವಜನಿಕ ಪ್ರದೇಶಗಳಲ್ಲಿ ಟವರ್‌ ಅಳವಡಿಕೆಗೆ ಮೊದಲ ಆದ್ಯತೆ ನೀಡಬೇಕು ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ತಿಳಿಸಿದರು.

ಟವರ್‌ ನೀತಿಯಲ್ಲಿ ಏನಿದೆ?: ಟವರ್‌ ಅಳವಡಿಕೆಗೆ ಅನುಮತಿ ಪಡೆಯಲು ಯೋಜನಾ ನಕ್ಷೆ ಹಾಗೂ ದಾಖಲಾತಿಗಳನ್ನು ಸಂಬಂಧ ಪಟ್ಟ ಪ್ರಾಧಿಕಾರಕ್ಕೆ ಸಲ್ಲಿಕೆ ಮಾಡಬೇಕು.ದಾಖಲಾತಿಗಳು ಕ್ರಮಬದ್ಧವಾಗಿದ್ದರೆ 30 ದಿನಗಳಲ್ಲಿ ಟವರ್‌ ಅಳವಡಿಕೆಗೆ ಅನುಮತಿ ನೀಡಬೇಕು. ಈಗಾಗಲೇ ಅಳವಡಿಕೆಯಾಗಿರುವ ಟವರ್‌ಗಳು ಮೂರು ತಿಂಗಳಲ್ಲಿ ನೋಂದಣಿ ಮಾಡಬೇಕು. ಇಲ್ಲವಾದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನದಿಯ 6 ಮೀಟರ್‌, ಕೆರೆಯ 5 ಮೀಟರ್‌, ನಾಲೆ ಹಾಗೂ ಕಾಲುವೆಯ 5 ಮೀಟರ್‌ ವ್ಯಾಪ್ತಿಯೊಳಗೆ ಟವರ್‌ ಅಳವಡಿಕೆ ಮಾಡುವಂತಿಲ್ಲ ಎಂದು ಹೇಳಿದರು.

ಶಾಲೆ, ಆಸ್ಪತ್ರೆ, ದೇವಾಲಯಗಳ 50 ಮೀಟರ್‌ ವ್ಯಾಪ್ತಿಯೊಳಗೆ ಟವರ್‌ ಅಳವಡಿಕೆಗೆ ನಿರ್ಬಂಧ ಹೇರಲಾಗಿದೆ. ಪುರಾತತ್ವ, ಧಾರ್ಮಿಕ ಕಟ್ಟಡಗಳ 100 ಮೀಟರ್‌ ವ್ಯಾಪ್ತಿಯೊಳಗೆ ಟವರ್‌ ಅಳವಡಿಕೆ ಮಾಡುವಂತಿಲ್ಲ. ಸಾರ್ವಜನಿಕರ ದೂರುಗಳ ಬಗ್ಗೆ ಕ್ರಮ ಕೈಗೊಳ್ಳಲು ಜಿÇÉಾ, ರಾಜ್ಯ ಮಟ್ಟದ ಸಮಿತಿ ಹಾಗೂ ಕೇಂದ್ರ ಸರ್ಕಾರದ ನಾಮನಿರ್ದೇಶಿತರನ್ನು ನೇಮಿಸಲಾಗುವುದು ಎಂದು ತಿಳಿಸಿದರು.

ಟವರ್‌ ಅಳವಡಿಕೆಗೆ ಶುಲ್ಕ ನಿಗದಿ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 1 ಲಕ್ಷ ರೂ. ಇತರೆ ಪಾಲಿಕೆಗಳಲ್ಲಿ 50 ಸಾವಿರ ರೂ. ನಗರ ಸಭೆಗಳಲ್ಲಿ 35 ಸಾವಿರ ರೂ. ಪುರಸಭೆಗಳಲ್ಲಿ 25 ಸಾವಿರ ರೂ. ಪಟ್ಟಣ ಪಂಚಾಯ್ತಿಗಳಲ್ಲಿ 20 ಸಾವಿರ ರೂ. ಗ್ರಾಮ ಪಂಚಾಯತಿಗಳಲ್ಲಿ 15 ಸಾವಿರ ರೂ. ಪಾವತಿ ಮಾಡಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.