ಜಾಹೀರಾತುಗಳಿಗೆ ಹೊಸ ಉಪನಿಯಮ


Team Udayavani, Aug 5, 2018, 3:20 PM IST

bbmp.jpg

ಬೆಂಗಳೂರು: ಅನಧಿಕೃತ ಜಾಹೀರಾತು ಫ‌ಲಕಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಬಿಬಿಎಂಪಿ ಹೊಸ ಜಾಹೀರಾತು ಉಪವಿಧಿಗಳನ್ನು (ಬೈಲಾ) ತರಲು ಯೋಜನೆ ರೂಪಿಸಿದೆ. 

ಜಾಹೀರಾತು ಫ‌ಲಕಗಳ ಅಳವಡಿಕೆ ಹಾಗೂ ನವೀಕರಣದ ಅನುಮತಿಯನ್ನು ಕೆಎಂಸಿ ಕಾಯ್ದೆ ವ್ಯಾಪ್ತಿಗೆ ಬರುವ ಜಾಹೀರಾತು ಬೈಲಾ 2006ರ ಪ್ರಕಾರ ನೀಡಲಾಗುತ್ತಿದೆ. ಕಳೆದ ಹನ್ನೆರಡು ವರ್ಷಗಳಲ್ಲಿ ಜಾಹೀರಾತು ಪ್ರದರ್ಶನ ಮಾದರಿಯಲ್ಲಿ ಪರಿಣಾಮಕಾರಿ ಬದಲಾವಣೆಗಳಾಗಿವೆ. ಆ ಹಿನ್ನೆಲೆಯಲ್ಲಿ ಹೊಸ ಬೈಲಾ ಜಾರಿಗೆ ಪಾಲಿಕೆಯ ಅಧಿಕಾರಿಗಳು ನಿರ್ಧರಿಸಿದ್ದಾರೆ.

ದೊಡ್ಡ ಹೋರ್ಡಿಂಗ್ಸ್‌, ತಾತ್ಕಾಲೀಕ ಜಾಹೀರಾತು, ವಾಣಿಜ್ಯ ಮಳಿಗೆಗಳಲ್ಲಿ ಪ್ರದರ್ಶನ ಜಾಹೀರಾತು, ಕೇಬಲ್‌ ಆ್ಯಡ್‌ ಸೇರಿ 19 ರೀತಿಯ ಜಾಹೀರಾತುಗಳನ್ನು ಹೊಸ ಬೈಲಾ ಅಡಿಯಲ್ಲಿ ಸೇರಿಸಿದ್ದು, ಜಾಹೀರಾತು ಪ್ರಕಟಿಸಲು ಪಾಲಿಕೆ ಅನುಮತಿ ಕಡ್ಡಾಯವಾಗಿರುತ್ತದೆ.

ವಲಯಗಳ ಬದಲಾವಣೆ: ಹಳೆಯ ಬೈಲಾಗಳ ಪ್ರಕಾರ ಜಾಹೀರಾತು ಅಳವಡಿಕೆಗೆ ಎ, ಬಿ, ಸಿ ಮತ್ತು ಡಿ ಎಂಬ ನಾಲ್ಕು ವಲಯಗಳನ್ನು ಮಾಡಲಾಗಿತ್ತು. ಅದರಂತೆ ಎ ವಲಯ ವ್ಯಾಫ್ತಿಯ ಕುಮಾರ ಕೃಪಾ ರಸ್ತೆ, ರಾಜಭವನ ರಸ್ತೆ ಸೇರಿ 10 ರಸ್ತೆಗಳಲ್ಲಿ ಜಾಹೀರಾತು ಅಳವಡಿಕೆ ನಿರ್ಬಂಧಿಸಲಾಗಿದೆ. ಉಳಿದಂತೆ ಬಿ ವಲಯದಲ್ಲಿ 24, ಸಿ ವಲಯದಲ್ಲಿ 99 ಹಾಗೂ ಡಿ ವಲಯದಲ್ಲಿ 97 ರಸ್ತೆಗಳಲ್ಲಿ ಜಾಹೀರಾತು ಅಳವಡಿಕೆಗೆ ಅನುಮತಿ ನೀಡಲಾಗಿದೆ. 

ಇದರೊಂದಿಗೆ ಹಳೆಯ ವಲಯಗಳಲ್ಲಿ ಜಾಹೀರಾತು ಅಳವಡಿಕೆ ಅಳತೆಯಲ್ಲಿ ಬದಲಾವಣೆ ಮಾಡಬೇಕಿದ್ದು, ಕಳೆದ 12 ವರ್ಷಗಳಲ್ಲಿ ವಲಯಗಳು ಹೆಚ್ಚು ಅಭಿವೃದ್ಧಿಯಾದ ಹಿನ್ನೆಲೆಯಲ್ಲಿ ಜಾಹೀರಾತು ತೆರಿಗೆ ಹೆಚ್ಚಿಸಬೇಕಿದೆ. ಜತೆಗೆ ಹಲವು ರಸ್ತೆಗಳ ವಲಯಗಳನ್ನು ಬದಲಿಸಬೇಕಿದ್ದು, ಹೊಸದಾಗಿ ಕೆಲ ರಸ್ತೆಗಳನ್ನು ಜಾಹೀರಾತು ವಲಯ ವ್ಯಾಪ್ತಿಗೆ ತರಲಾಗುತ್ತಿದೆ. 

ಅಳತೆ ಮೀರಿದರೆ ಕ್ರಮ: ಪಾಲಿಕೆಯ ಬಿ ವಲಯದಲ್ಲಿ ಗರಿಷ್ಠ 30*15, ಸಿ ಮತ್ತು ಡಿ ವಲಯದಲ್ಲಿ ಗರಿಷ್ಠ 40*20 ಅಳತೆಯ ಜಾಹೀರಾತು ಫ‌ಲಕಗಳನ್ನು ಅಳವಡಿಸಲು ಅವಕಾಶವಿದೆ. ಆದರೆ, ಏಜೆನ್ಸಿಗಳು ನಿಯಮಬಾಹಿರವಾಗಿ ಹೆಚ್ಚಿನ ಅಳತೆಯ ಜಾಹೀರಾತು ಫ‌ಲಕಗಳನ್ನು ಅಳವಡಿಸುತ್ತಿರುವುದರಿಂದ ಪಾಲಿಕೆಗೆ ನಷ್ಟವಾಗುತ್ತಿದೆ. ಹೀಗಾಗಿ ಜಾಹೀರಾತು ಅಳತೆ ಹೆಚ್ಚಿಸಲು ಸಹ ಚರ್ಚಿಸಲಾಗಿದೆ. ನಿಯಮ ಉಲ್ಲಂಘನೆಗೆ ದುಬಾರಿ ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸುವ ಕುರಿತೂ ಸಮಿತಿಯಲ್ಲಿ ಚರ್ಚಿಸಲಾಗಿದೆ.

ಸಕ್ರಮಗೊಳಿಸಲು ಮುಂದಾಯಿತೆ ಪಾಲಿಕೆ?: ಬಿಬಿಎಂಪಿ ವ್ಯಾಪ್ತಿಯಲ್ಲಿ ಸದ್ಯ ಕೇವಲ 1,900 ಫ‌ಲಕಗಳು ಮಾತ್ರ ಅಧಿಕೃತ ಫ‌ಲಕಗಳಿದ್ದು, ಈ ಹಿಂದೆ ಪಾಲಿಕೆಯ ಅಧಿಕಾರಿಗಳು ಸರ್ವೆ ನಡೆಸಿದಾಗ 10,172 ಅನಧಿಕೃತ ಜಾಹೀರಾತು ಫ‌ಲಕಗಳಿರುವುದು ಬಯಲಾಗಿತ್ತು. ಇದೀಗ ಅವುಗಳನ್ನು ಸಕ್ರಮಗೊಳಿಸುವ ಕುರಿತು ಚರ್ಚೆ ನಡೆಯುತ್ತಿದ್ದು, ಹೊಸ ಬೈಲಾಗಳನ್ನು ಜಾರಿಗೊಳಿಸುವ ನೆಪದಲ್ಲಿ ಅನಧಿಕೃತ ಜಾಹೀರಾತು ಫ‌ಲಕಗಳ ಸಕ್ರಮಕ್ಕೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾದರೆ ಎಂಬ ಅನುಮಾನಗಳು ಮೂಡುತ್ತಿವೆ. 

ಹೊಸ ಜಾಹೀರಾತು ನೀತಿ ಜಾರಿಗೆ ಸಮಿತಿ ರಚಿಸಿ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಿದ್ದು, ಸೋಮವಾರ ಪಾಲಿಕೆ ಸಭೆಯಲ್ಲಿ ಹೊಸ ಬೈಲಾಗಳನ್ನು ಮಂಡಿಸಿ ಸದಸ್ಯರ ಸಲಹೆಗಳೊಂದಿಗೆ ಅನುಮೋದನೆ ಪಡೆದು ಸರ್ಕಾರಕ್ಕೆ ಕಳುಹಿಸಲಾಗುವುದು.
-ಎಂ.ಶಿವರಾಜು, ಪಾಲಿಕೆ ಆಡಳಿತ ಪಕ್ಷ ನಾಯಕ

ಟಾಪ್ ನ್ಯೂಸ್

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.