ರಾತ್ರಿ ಕರ್ಫ್ಯೂ: ಊರು ಸೇರಲು ತವಕಿಸಿದ ಜನ


Team Udayavani, Apr 11, 2021, 1:25 PM IST

ರಾತ್ರಿ ಕರ್ಫ್ಯೂ: ಊರು ಸೇರಲು ತವಕಿಸಿದ ಜನ

ಬೆಂಗಳೂರು: ಸಾರಿಗೆ ಸಂಸ್ಥೆಯ ನೌಕರರು ನಡೆಸುತ್ತಿರುವ ಮುಷ್ಕರ ಐದನೇ ದಿನಕ್ಕೆ ಕಾಲಿರಿಸಿದೆ. ಹೀಗಾಗಿ ಜನರು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿಶನಿವಾರ ಬೆಳಗ್ಗೆಯೆ ತಮ್ಮ ಲಗೇಜ್‌ಗಳನ್ನು ಹಿಡಿದುಖಾಸಗಿ ಬಸ್‌ಗಳಲ್ಲೇ ಪ್ರಯಾಣಿಸಿದರು. ನೈಟ್‌ಕರ್ಫ್ಯೂ ಜಾರಿ ಮೊದಲೆ ಊರು ಸೇರಬೇಕು ಎಂಬ ಧಾವಂತ ಅವರಲ್ಲಿತ್ತು.

ಸರ್ಕಾರ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ನೈಟ್‌ ಕರ್ಫ್ಯೂ ಜಾರಿ ಮಾಡಿದೆ. ಹೀಗಾಗಿ ರಾತ್ರಿ ಬಸ್‌ ಇಲ್ಲದೆ ಹೋದರೆ ಊರುಸೇರಲು ತೊಂದರೆ ಅನುಭವಿಸಬೇಕಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯೇ ತಮ್ಮ ಊರುಗಳತ್ತ ಮುಖಮಾಡುತ್ತಿದ್ದ ದೃಶ್ಯ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಕಂಡು ಬಂತು.

ಕಲಬುರಗಿ, ಬಳ್ಳಾರಿ, ಬೀದರ್‌,ಕೊಪ್ಪಳ, ವಿಜಯಪುರ, ಕೋಲಾರ,ಹೊಸದುರ್ಗ, ಶಿವಮೊಗ್ಗ,ಅರಸಿಕೆರೆ, ತುಮಕೂರು, ಧಾರವಾಡ, ಹಾವೇರಿ, ದಾವಣಗೆರೆ, ಮೈಸೂರು, ಕೊಡುಗು , ಹಾಸನ ಮತ್ತುಚಿಕ್ಕಮಗಳೂರು ಭಾಗದ ಜನರು ಪುಟಾಣಿ ಮಕ್ಕಳೊಂದಿಗೆ ಖಾಸಗಿ ಬಸ್‌ ಏರಿ ತಮ್ಮ ಸ್ವಗ್ರಾಮಗಳತ್ತಮುಖ ಮಾಡಿದರು. ಈ ವೇಳೆ ಮಾತನಾಡಿ ಬಳ್ಳಾರಿ ಮೂಲದ ಕಾರ್ಮಿಕ ಸಂಗಪ್ಪ ಬಿರಾದಾರ್‌, ಹೊಟ್ಟೆತುಂಬಿಸಿಕೊಳ್ಳಲು ಬೆಂಗಳೂರಿಗೆ ಸಂಸಾರ ಸಮೇತ ಬಂದಿದ್ದೆ.ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಹೋಗುತ್ತಿದ್ದೇನೆ. ಸರ್ಕಾರ ಈಗಾಗಲೇ ಕೆಲವು ನಗರಗಳಲ್ಲಿ ನೈಟ್‌ ಕರ್ಫ್ಯೂ ಜಾರಿ ಮಾಡಿದೆ. ಹೀಗಾಗಿ ಹೊತ್ತಿನ ಮುಂಚೆ ಊರು ಸೇರೋಣ ಎಂದು ತೀರ್ಮಾನಿಸಿ ಬೆಳಗ್ಗೆಯೇ ಬಸ್‌ ಏರುತ್ತಿರುವುದಾಗಿ ಹೇಳಿದರು.

ಬಿಕೋ ಎನುತ್ತಿದ್ದ ಬಿಎಂಟಿಸಿ ಬಸ್‌ ನಿಲ್ದಾಣಗಳು: ಸಾರಿಗೆ ಸಂಸ್ಥೆಯ ನೌಕರರ ಮುಷ್ಕರದ ಹಿನ್ನೆಲೆಯಲ್ಲಿಶಾಂತಿನಗರ, ಬನಶಂಕರಿ, ಶಿವಾಜಿ ನಗರ, ಮೆಜೆಸ್ಟಿಕ್‌,ಯಶವಂತಪುರ ಸೇರಿದಂತೆ ಹಲವು ಬಸ್‌ ನಿಲ್ದಾಣಗಳಲ್ಲಿ ಜನರಿಲ್ಲದೆ ಬಿಕೋ ಅನ್ನುತ್ತಿದ್ದವು.ಬಿಎಂಟಿಸಿಯ ಹಿರಿಯ ಅಧಿಕಾರಿಗಳನ್ನು ಹೊರತುಪಡಿಸಿದರೆ ಇಡೀ ಬಸ್‌ ನಿಲ್ದಾಣಗಳು ಖಾಲಿ ಖಾಲಿಯಾಗಿದ್ದವು. ಮೆಜೆಸ್ಟಿಕ್‌ನಲ್ಲಿ ಜಿಗಣಿ, ತಾವರೆಕೆರೆ, ಮಾಗಡಿ ರಸ್ತೆ, ಯಶವಂತಪುರ, ವಿದ್ಯಾರಣ್ಯಪುರ,ಯಲಹಂಕ, ವಿಜಯನಗರ, ಬನಶಂಕರಿ, ಹೆಸರುಘಟ್ಟಸೇರಿದಂತೆ ಇನ್ನಿತರ ಕಡೆಗಳಲ್ಲಿ ಖಾಸಗಿ ಬಸ್‌ಗಳುಪ್ರಯಾಣಿಸಿದವು. ಆದರೆ ಎಲ್ಲಾ ಬಸ್‌ಗಳಲ್ಲಿಆಸನಗಳು ಭರ್ತಿಯಾಗಿರಲಿಲ್ಲ. ಆ ಹಿನ್ನೆಲೆಯಲ್ಲಿತಾಸು ಗಟ್ಟಲೆ ಪ್ರಯಾಣಿಕರು ಕಾಯುವ ಪರಿಸ್ಥಿತಿ ಉಂಟಾಗಿತ್ತು.

ಬಿಎಂಟಿಸಿ ಬಸ್‌ಗಳ ಸಂಚಾರ: ಪೋಲಿಸರ ಭದ್ರತೆಯಲ್ಲಿ ಶನಿವಾರ ಬೆರಳಣಿಕೆ ಸಂಖ್ಯೆಯಲ್ಲಿಬಿಎಂಟಿಸಿ ಬಸ್‌ಗಳು ನಗರದ ವಿವಿಧ ಕಡೆಗಳಪ್ರಯಾಣಿಕರನ್ನು ಹೊತ್ತು ಸಂಚರಿಸಿದವು.ವಿಜಯನಗರ, ಕಾಮಾಕ್ಷಿ ಪಾಳ್ಯ, ಚಂದ್ರಾಲೇಔಟ್‌, ಯೂನಿವರ್ಸಿಟಿ ಕ್ವಾಟ್ರಸ್‌, ಮಾಲತ್ತಹಳ್ಳಿ, ಸುಜಾತಸೇರಿದಂತೆ ಹಲವು ಕಡೆಗಳತ್ತ ಬಿಎಂಟಿಸಿ ಬಸ್‌ಗಳುಪಯಣಿಸಿದವು. ಹಾಗೆಯೇ ಯಲಹಂಕ, ಚಿಕ್ಕಜಾಲ, ಸಾದೇನಹಳ್ಳಿಯತ್ತ ಮೆಜೆಸ್ಟಿಕ್‌ ನಿಂದ ಸಾಗಿದವು. ಜತೆಗೆಅಂತಾರಾಷ್ಟ್ರೀಯ ವಿಮಾನದತ್ತ ಪ್ರಯಾಣಿಸುವ ವೋಲ್ವೊ ಬಸ್‌ಗಳ ಸಂಖ್ಯೆ ಕೂಡ ಅಧಿಕ ವಿತ್ತು. ವಿಮಾನದ ಮೂಲಕ ವಿವಿಧ ರಾಜ್ಯಗಳಿಗೆ ತೆರಳುವಜನರಿಗೆ ತೊಂದರೆ ಆಗಬಾರದು ಎಂಬ ಉದ್ದೇಶ ವೋಲ್ವೊ ಬಸ್‌ ಸಂಚಾರವನ್ನು ಮಾಡಲಾಗಿದೆ ಎಂದುಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದರು.

ಕೆಂಪೇಗೌಡ ಬಸ್‌ ನಿಲ್ದಾಣದ “ಟರ್ಮಿನಲ್‌ 2ಎ’ ದಿಂದ ಹಾಸನ ಮಾರ್ಗವಾಗಿ ಕೆಲವು ಸಂಖ್ಯೆಯಲ್ಲಿ ಐರಾವತ ಮತ್ತು ಸಾಮಾನ್ಯ ಬಸ್‌ಗಳು ಮಂಗಳೂರಿನತ್ತಸಾಗಿದವು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.