ಬಳಕೆಯಾಗದೇ ಉಳಿದಿದೆ ನಿರ್ಭಯ ಅನುದಾನ


Team Udayavani, Oct 6, 2019, 3:09 AM IST

balake

ಬೆಂಗಳೂರು: ಸಮೂಹ ಸಾರಿಗೆಯಲ್ಲಿ ಮಹಿಯರಿಗೆ ಹೆಚ್ಚಿನ ಸುರಕ್ಷತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 2016-17ನೇ ಸಾಲಿನಲ್ಲಿ “ನಿರ್ಭಯ’ ಯೋಜನೆಯಡಿ ಮಹಾನಗರ ಸಾರಿಗೆ ಸಂಸ್ಥೆಗಳಿಗೆ ನೀಡಿದ್ದ 33.64 ಕೋಟಿ ರೂ. ಅನುದಾನದಲ್ಲಿ ಬಿಎಂಟಿಸಿ ಖರ್ಚು ಮಾಡಿರುವುದು ಕೇವಲ 2.37 ಕೋಟಿ ರೂ.!

ಸಾರ್ವಜನಿಕರು ಸಮೂಹ ಸಾರಿಗೆ ಬಳಸುವ ಮೂಲಕ ಸಂಚಾರ ದಟ್ಟಣೆ, ಮಾಲಿನ್ಯ ತೆಡಯಲು ಸಹಕರಿಸಬೇಕು ಎಂದು ಮನವಿ ಮಾಡುವ ಕೇಂದ್ರ ಸರ್ಕಾರ, ಬಸ್‌ಗಳಲ್ಲಿ ಪ್ರಯಾಣಿಸುವಾಗ ಶೋಷಣೆ ಎದುರುಸುವ ಮಹಿಳೆಯರ ಸುರಕ್ಷತೆಗೆಂದೇ ನಿರ್ಭಯ ಯೋಜನೆ ಅಡಿ ಮಹಾನಗರ ಸಾರಿಗೆ ಸಂಸ್ಥೆಗಳಿಗೆ ಹೆಚ್ಚುವರಿ ಅನುದಾನ ನೀಡಿದೆ.

ಇದರ ಭಾಗವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 2016-17ನೇ ಸಾಲಿನಲ್ಲಿ 33.64 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು. ಈ ಪೈಕಿ ಸಂಸ್ಥೆ ಕೇವಲ 2.37 ಕೋಟಿ ರೂ. ಖರ್ಚು ಮಾಡಿದೆ ಎಂಬುದನ್ನು ಆರ್‌ಟಿಐ ಕಾರ್ಯಕರ್ತ ಯೋಗೇಶ್‌ ಗೌಡ ದಾಖಲೆಗಳ ಮೂಲಕ ಬಹಿರಂಗಪಡಿಸಿದ್ದಾರೆ. ಖರ್ಚಾಗದೇ ಉಳಿದಿರುವ ಅನುದಾನ ಕೇಂದ್ರ ಸರ್ಕಾರಕ್ಕೆ ವಾಪಸಾಗುವ ಸಾಧ್ಯತೆಯಿದೆ.

ಮಹಿಳಾ ಪ್ರಯಾಣಿಕರ ಸುರಕ್ಷತೆ ಖಾತರಿಪಡಿಸುವ ನಿಟ್ಟಿನಲ್ಲಿ ಬಸ್‌ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಬಿಎಂಟಿಸಿ ಡಿಪೋಗಳಲ್ಲಿ ಮಹಿಳಾ ಸಿಬ್ಬಂದಿಗೆ ವಿಶ್ರಾಂತಿ ಕೊಠಡಿ, ಮಹಿಳೆಯರು ಹೆಚ್ಚು ಕಾರ್ಯ ನಿರ್ವಹಿಸುವ ಗಾರ್ಮೆಂಟ್ಸ್‌ಗಳಿಗೆ ಪ್ರತ್ಯೇಕ ಬಸ್‌ ಸೇವೆ, ಎಲ್ಲಾ ಬಸ್‌ಗಳಲ್ಲಿ ಪಿಂಕ್‌ ಅಲಾರಂ ಅಳವಡಿಕೆ, ಮಹಿಳೆಯರಿಗೆ ಬಸ್‌ ಚಾಲನೆ ತರಬೇತಿ ನೀಡುವುದೂ ಸೇರಿ ಹಲವು ಕ್ರಮಗಳನ್ನು ತೆಗೆದುಕೊಳ್ಳುವ ಎಲ್ಲಾ ಅವಕಾಶಗಳಿದ್ದರೂ ಬಿಎಂಟಿಸಿ ಅಧಿಕಾರಿಗಳು ಆಸಕ್ತಿ ವಹಿಸಿಲ್ಲ ಎಂಬುದು ಸ್ಪಷ್ಟವಾಗಿದೆ.

ನಿರ್ಭಯ ಅನುದಾನದಲ್ಲಿ ಈವರೆಗೆ 27 ನಿರ್ಭಯ ಜೀಪು ಮತ್ತು 3 ತರಬೇತಿ ವಾಹನಗಳನ್ನು ಖರೀದಿ ಮಾಡಿರುವ ಸಂಸ್ಥೆ, ಬಾಕಿ ಹಣ ಬಳಸುವ ಗೋಜಿಗೆ ಹೋಗಿಲ್ಲ. ಬಿಎಂಟಿಸಿಯ 145 ಬಸ್‌ಗಳು ರಾತ್ರಿ ಪಾಳಿಯಲ್ಲಿ ಸಂಚರಿಸುತ್ತವೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ರಸ್ತೆಯಲ್ಲಿರುವ ಈ ಬಸ್‌ಗಳಲ್ಲಿ ಸಿಸಿ ಕ್ಯಾಮೆರಾ ಇಲ್ಲದಿರುವುದು ರಾತ್ರಿ ಪ್ರಯಾಣಿಸುವ ಮಹಿಳೆಯರಲ್ಲಿ ಅಸುರಕ್ಷತೆಯ ಮನೋಭಾವ ಮೂಡಿಸುತ್ತದೆ.

ಈ ಹಿಂದೆ ನಿರ್ಭಯ ಅನುದಾನ ಬಳಕೆಗೆ ಸೂಕ್ತ ಕಾರ್ಯಸೂಚಿ ಸಿದ್ಧಪಡಿಸಿರಲಿಲ್ಲ. ಈಗ ಬಸ್‌ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಅಂಶ ಸೇರಿಸಲಾಗಿದೆ. ಹೊಸ ಕಾರ್ಯಸೂಚಿ ಅನ್ವಯ ಯೋಜನೆ ಅನುಷ್ಠಾನಕ್ಕೆ ಟೆಂಡರ್‌ ಆಹ್ವಾನಿಸಲು ಸಿದ್ಧತೆ ನಡೆದಿದೆ.
-ಸಿ.ಶಿಖಾ, ಬಿಎಂಟಿಸಿ ಎಂ.ಡಿ

ಅನುದಾನ ಪಡೆದು ಎರಡು ವರ್ಷ ಕಳೆದರೂ ಹಣ ವಿನಿಯೋಗ ಮಾಡಿಲ್ಲ. ಮಹಿಳಾ ಸಿಬ್ಬಂದಿ ಮತ್ತು ಪ್ರಯಾಣಿಕರ ಸುರಕ್ಷತೆಗೆ ಹಲವಾರು ಕ್ರಮ ಕೈಗೊಳ್ಳುವುದು ಬಾಕಿ ಇದ್ದು, ಕೂಡಲೆ ಅನುದಾನ ಬಳಸಿ ಸೌಲಭ್ಯ ಕಲ್ಪಿಸಬೇಕು.
-ಯೋಗೇಶ್‌ ಗೌಡ, ಆರ್‌ಟಿಐ ಕಾರ್ಯಕರ್ತ

* ಲೋಕೇಶ್‌ ರಾಮ್‌

ಟಾಪ್ ನ್ಯೂಸ್

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.