ವ್ಯಾಘ್ರನ ರಕ್ಷಣೆಗಿಲ್ಲ ಉಗ್ರ ಕ್ರಮ
ಮಧ್ಯಪ್ರದೇಶ, ಮಹಾರಾಷ್ಟ್ರ ಬಳಿಕ ಕರ್ನಾಟಕದಲ್ಲೇ ಹುಲಿಗಳ ಸಾವು ಹೆಚ್ಚು
Team Udayavani, Jul 29, 2019, 8:00 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಇಂದು ವಿಶ್ವ ಹುಲಿ ದಿನ. ಒಂದೆಡೆ ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ಟಿಸಿಎ) ಗಣತಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದರೆ, ಮತ್ತೂಂದೆಡೆ ಹುಲಿಗಳ ಸಾವಿನ ಸಂಖ್ಯೆಯೂ ನಿರಂತರವಾಗಿ ಹೆಚ್ಚಳವಾಗುತ್ತಿದೆ.
ಪ್ರಸ್ತಕ ವರ್ಷದಲ್ಲಿ ಏಳು ತಿಂಗಳಲ್ಲಿಯೇ 10 ಹುಲಿಗಳು ಸಾವಿಗೀಡಾಗಿವೆ. ಕಳೆದ ವರ್ಷ 13 ಹುಲಿಗಳು ಹಾಗೂ ಕಳೆದ 7 ವರ್ಷಗಳಲ್ಲಿ 109 ಹುಲಿಗಳು ಸಾವಿಗೀಡಾಗಿದ್ದವು. ಇದಕ್ಕೆ ಕಾರಣ ಹುಲಿ ಸಂರಕ್ಷಣೆಗೆ ಕೇಂದ್ರ ಸರ್ಕಾರ ಯಾವುದೇ ಕಾರ್ಯಕ್ರಮ ಜಾರಿ ಮಾಡಿದರೂ ಅದನ್ನು ಯಶಸ್ವಿಯಾಗಿ ಜಾರಿಗೊಳಿಸದಿರುವುದು ಎಂದು ಅರಣ್ಯ ಇಲಾಖೆ ವಿರುದ್ಧ ಆರೋಪ ಕೇಳಿಬಂದಿದೆ. ಇವುಗಳ ಜತೆಗೆ ಸಂರಕ್ಷಿತ ಪ್ರದೇಶದ ಕೊರತೆ ಹಾಗೂ ಮಾನವ ಪ್ರಾಣಿ ಸಂಘರ್ಷ ಹೆಚ್ಚಳ ಎಂದು ಹೇಳಲಾಗುತ್ತಿದೆ.
2014ರ ಎನ್ಟಿಸಿಎ ಗಣತಿಯ ಪ್ರಕಾರ ರಾಜ್ಯದಲ್ಲಿ 406 ಹುಲಿಗಳಿವೆ. ಈ ಬಾರಿ ಗಣತಿ ಮುಕ್ತಾಯ ಗೊಂಡಿದ್ದು, ಸೋಮವಾರ ವರದಿ ಬಿಡುಗಡೆಯಾಗಬೇಕಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ 500ಕ್ಕೂ ಹೆಚ್ಚು ಹುಲಿಗಳಿವೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಹುಲಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಆದರೆ, ಅದಕ್ಕೆ ಪೂರಕವಾಗಿ ಅದರ ವಾಸದ ಪ್ರದೇಶ ಮಾತ್ರ ಹೆಚ್ಚುತ್ತಿಲ್ಲ. ವಾಸ ಸ್ಥಾನ ಕೊರತೆಯಿಂದ ಹುಲಿಗಳ ನಡುವೆ ಸಂಗಾತಿಗಳಿಗಾಗಿ ಕಾದಾಟ, ಜಾಗಕ್ಕಾಗಿ ಕಾದಾಟ ನಡೆಯುವುದು ಸಾಮಾನ್ಯವಾಗಿದೆ. ಎನ್ಟಿಸಿಎ ವರದಿ ಪ್ರಕಾರ ಕರ್ನಾಟಕ ಹುಲಿಗಳ ಸಾವಿನ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ. ಮೊದಲನೇ ಸ್ಥಾನದಲ್ಲಿ ಮಧ್ಯಪ್ರದೇಶ ಎರಡನೇ ಸ್ಥಾನದಲ್ಲಿ ಮಹಾರಾಷ್ಟ್ರವಿದೆ.
ಹುಲಿ ದಿನದ ವಿಶೇಷವೇನು?:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ