ಅವ್ರ್ ಬಿಟ್‌ ಇವ್ರ್ ಬಿಟ್‌ ಇನ್ಯಾರು?


Team Udayavani, Oct 15, 2018, 6:00 AM IST

15.jpg

ಬೆಂಗಳೂರು: “ಮಹಾಘಟಬಂಧನ್‌’ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಉತ್ಸಾಹದಲ್ಲಿರುವ ಕಾಂಗ್ರೆಸ್ಸಿಗೆ ಮಾಯಾವತಿ ನಡೆಯಿಂದ ರಾಷ್ಟ್ರ ಮಟ್ಟದಲ್ಲಿ ಹಿನ್ನಡೆ ಅನುಭವಿಸಿದೆ. ಹಾಗೇ, ರಾಜ್ಯದಲ್ಲಿಯೂ ಮೈತ್ರಿ ಮುಂದುವರಿಕೊಂಡು ಮುಂಬರುವ ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಕನಸು ಕಾಣುತ್ತಿರುವ ಕಾಂಗ್ರೆಸ್‌ಗೆ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳೇ ಸಿಗುತ್ತಿಲ್ಲ! ಉನ್ನತ ಮೂಲಗಳ ಪ್ರಕಾರ ಬೆಂಗಳೂರು ಉತ್ತರ, ಧಾರವಾಡ, ವಿಜಯಪುರ, ಶಿವಮೊಗ್ಗ, ಉಡುಪಿ- ಚಿಕ್ಕಮಗಳೂರು, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಮೈಸೂರು, ಮಂಡ್ಯ, ಮಂಗಳೂರು, ಹಾವೇರಿ ಕ್ಷೇತ್ರಗಳಲ್ಲಿ ಬಿಜೆಪಿಗೆ ಪ್ರಬಲ ಸ್ಪರ್ಧೆ ನೀಡಿ, ಗೆಲುವಿನ ದಡ ಮುಟ್ಟುವ ಅಭ್ಯರ್ಥಿಗಳು ಕಾಂಗ್ರೆಸ್‌ಗೆ ದೊರೆಯುತ್ತಿಲ್ಲ. ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡು 20 ಕ್ಷೇತ್ರಗಳನ್ನು ತನ್ನ ಬಳಿ ಉಳಿಸಿಕೊಂಡು 8 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್‌ಗೆ ಉಪ ಚುನಾವಣೆಯಲ್ಲೇ ಈ ಬಿಸಿ ತಟ್ಟಿದೆ. ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ ರಾಘ ವೇಂದ್ರ ಎದುರು ಸ್ಪರ್ಧೆ ಮಾಡಲು ಸೂಕ್ತ ಅಭ್ಯರ್ಥಿ ಸಿಗದಿರುವುದು ಮುಜುಗರಕ್ಕೆ ಕಾರಣವಾಗಿದೆ.

ಲೋಕಸಭೆ ಚುನಾವಣೆ ಸಿದ್ಧತೆ ಕುರಿತಂತೆ ಕಾಂಗ್ರೆಸ್‌ನಲ್ಲಿ ಈಗಾಗಲೇ ಜಿಲ್ಲಾ ಮುಖಂಡರು ಹಾಗೂ ರಾಜ್ಯ ಪದಾಧಿಕಾರಿಗಳನ್ನೊಳಗೊಂಡ ಒಂದು ಸುತ್ತಿನ ಸಭೆ ನಡೆಸಲಾಗಿದೆ. ಆ ಸಂದರ್ಭದಲ್ಲೇ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲಾಗಿದೆ. ಈಗಾಗಲೇ ಹಾಲಿ ಸಂಸದರಿರುವ
9 ಕ್ಷೇತ್ರಗಳಿಗೆ ಅವರನ್ನೇ ಮತ್ತೆ ಅಭ್ಯರ್ಥಿಗಳನ್ನಾಗಿ ಮಾಡಬೇಕೆಂಬ ಲೆಕ್ಕಾಚಾರ ಕಾಂಗ್ರೆಸ್‌ನಲ್ಲಿದೆ. ಆದರೆ, ಕಾಂಗ್ರೆಸ್‌ ಸಂಸದರಿರುವ ಕೆಲವು ಕ್ಷೇತ್ರಗಳ ಮೇಲೆ ಜೆಡಿಎಸ್‌ ಕಣ್ಣಿಟ್ಟಿದೆ ಎಂದು ಹೇಳಲಾಗಿದೆ. ಜೆಡಿಎಸ್‌ ಈಗಾಗಲೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಚಿತ್ರದುರ್ಗ ಕ್ಷೇತ್ರಗಳತ್ತ ದೃಷ್ಟಿ ಬೀರಿದ್ದು, ಅವುಗಳು ಕಾಂಗ್ರೆಸ್‌ಗೆ ಕೈ ತಪ್ಪುವ ಸಾಧ್ಯತೆ ಇದೆ. 

ಹಾಲಿ, ಮಾಜಿಗಳ ಮೇಲೆ ಕಣ್ಣು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಮಾಜಿ ಸಚಿವರು ಮತ್ತು ಮಾಜಿ ಶಾಸಕರನ್ನು ಮುಂಬರುವ
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನಾಗಿ ಮಾಡಬೇಕೆಂಬ ಲೆಕ್ಕಾಚಾರ ಕಾಂಗ್ರೆಸ್‌ ವಲಯದಲ್ಲಿ ನಡೆಯುತ್ತಿದೆ. ಕೆಲವು ಕ್ಷೇತ್ರಗಳಲ್ಲಿ ಹಾಲಿ ಶಾಸಕರನ್ನೂ ಕಣಕ್ಕಿಳಿಸಬೇಕೆನ್ನುವ ಅಭಿಪ್ರಾಯ ಕಾಂಗ್ರೆಸ್‌ನ ಕೆಲವು ನಾಯಕರದ್ದಾಗಿದೆ ಎಂದು ಹೇಳಲಾಗುತ್ತಿದೆ. ಬೀದರ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಹಾಲಿ ಶಾಸಕ ಈಶ್ವರ್‌ ಖಂಡ್ರೆ ಅಥವಾ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‌ ಪುತ್ರ ವಿಧಾನ ಪರಿಷತ್‌ ಸದಸ್ಯ ವಿಜಯ್‌ ಧರ್ಮಸಿಂಗ್‌ ಮೇಲೆ ಪಕ್ಷದ ನಾಯಕರು ಕಣ್ಣಿಟ್ಟಿದ್ದಾರೆ. 

ಬೆಂಗಳೂರು ಉತ್ತರಕ್ಕೆ ಕೃಷ್ಣ ಬೈರೇಗೌಡ, ಬೆಳಗಾವಿಗೆ-ಸತೀಶ್‌ ಜಾರಕಿಹೊಳಿ, ಬೆಂಗಳೂರು ಕೇಂದ್ರಕ್ಕೆ-ರೋಷನ್‌ ಬೇಗ್‌ ಅವರನ್ನು ಕಣಕ್ಕಿಳಿಸಿದರೆ ಗೆಲುವು ಪಡೆಯಬಹುದೆಂಬ ಆಲೋಚನೆ ರಾಜ್ಯ ನಾಯಕರದ್ದಾಗಿದೆ. ವಿಜಯಪುರದಲ್ಲಿ ಮಾಜಿ ಸಚಿವ ಶಿವರಾಜ್‌ ತಂಗಡಗಿ, ಕೊಪ್ಪಳಕ್ಕೆ ಮಾಜಿ ಸಚಿವ ಬಸವರಾಜ್‌ ರಾಯರೆಡ್ಡಿ, ಧಾರವಾಡ-ವಿನಯ್‌ ಕುಲಕರ್ಣಿ ಹಾಗೂ ಸಂತೋಷ್‌ ಲಾಡ್‌, ದಕ್ಷಿಣ ಕನ್ನಡದಲ್ಲಿ ರಮಾನಾಥ ರೈ, ಬೆಂಗಳೂರು ದಕ್ಷಿಣಕ್ಕೆ-ಪ್ರಿಯಾ ಕೃಷ್ಣ, ಹಾವೇರಿಗೆ-ಡಿ.ಆರ್‌. ಪಾಟೀಲ್‌ ಪ್ರಭಲ ಅಭ್ಯರ್ಥಿಗಳಾಬಹುದೆಂಬ ಲೆಕ್ಕಾಚಾರ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಸೋತು ನಷ್ಟ ಅನುಭವಿಸಿರುವ ಬಹುತೇಕ ಮಾಜಿ ಸಚಿವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು
ಹಾಕುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದ ಭವಿಷ್ಯ ಅತಂತ್ರವಾಗಿರುವುದರಿಂದ ಲೋಕಸಭೆಗೆ ಸ್ಪರ್ಧಿಸಿ, ಮತ್ತೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾದರೆ, ವಿಧಾನಸಭೆ ಚುನಾವಣೆಗೂ ಸ್ಪರ್ಧಿಸುವ ಅವಕಾಶ ಕೈ ತಪ್ಪುವ ಸಾಧ್ಯತೆ ಇದೆ. ಒಂದು ವೇಳೆ ಲೋಕಸಭೆ ಚುನಾವಣೆಯಲ್ಲಿ ಜಯ ಗಳಿಸಿದರೆ ಮರಳಿ ರಾಜ್ಯ ರಾಜಕಾರಣಕ್ಕೆ ಬರುವುದು ಕಷ್ಟವಾಗುತ್ತದೆ ಎನ್ನುವ ಕಾರಣಕ್ಕೆ ಅನೇಕ ಮಾಜಿ ಹಾಗೂ ಹಾಲಿ ಶಾಸಕರು
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ತೋರುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಹೊಸ ಮುಖ ಹುಡುಕಿ: ರಾಹುಲ್‌ ಹಾಲಿ ಶಾಸಕರನ್ನು ಕಣಕ್ಕಿಳಿಸುವ ಪ್ರಯತ್ನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ವಿರೋಧ  ವ್ಯಕ್ತಪಡಿಸಿದ್ದಾರೆಎಂದು ಹೇಳಲಾಗುತ್ತಿದೆ. ಹಾಲಿ ಶಾಸಕರನ್ನು ಚುನಾವಣೆಗೆ ನಿಲ್ಲಿಸಿ ಉಪ ಚುನಾವಣೆಗಳಿಗೆ ಕಾರಣವಾಗುವ ಬದಲು ಈಗಿನಿಂದಲೇ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುವ ಹಾಗೂ ಪಕ್ಷದಲ್ಲಿ ಸಕ್ರೀಯರಾಗಿರುವ ಹೊಸ ಮುಖಗಳನ್ನು ಗುರುತಿಸುವಂತೆ ರಾಹುಲ್‌ ಅವರು ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಶಂಕರ ಪಾಗೋಜಿ

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.