ಕುಣಿಗಲ್ ಮಾರ್ಗದಲ್ಲಿ ಕಾರವಾರ – ಬೆಂಗ್ಳೂರು ಸಂಚಾರ ಅಸಾಧ್ಯ
Team Udayavani, Aug 12, 2017, 8:30 AM IST
ಬೆಂಗಳೂರು: ಕಾರವಾರ- ಬೆಂಗಳೂರು ನಡುವೆ ಸಂಚರಿಸುವ ಎಕ್ಸ್ಪ್ರೆಸ್ ರೈಲನ್ನು ಹೊಸದಾಗಿ ನಿರ್ಮಾಣಗೊಂಡಿರುವ ಕುಣಿಗಲ್ ರೈಲು ಮಾರ್ಗಕ್ಕೆ ಬದಲಿಸಲು ಸಾಧ್ಯವಿಲ್ಲ ಎಂದು ನೈರುತ್ಯ ರೈಲ್ವೆ ಇಲಾಖೆ ಹೈಕೋರ್ಟ್ಗೆ ಸ್ಪಷ್ಟಪಡಿಸಿ, ಪ್ರಮಾಣಪತ್ರ ಸಲ್ಲಿಸಿದೆ.
ಸಂಜಯ್ ರೇವಣಕರ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಿನ್ನೆಲೆಯಲ್ಲಿ ಈ ಕುರಿತು ಪರಿಶೀಲಿಸುವಂತೆ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ನೈರುತ್ಯ ರೈಲ್ವೆ ಇಲಾಖೆಗೆ ಸೂಚಿಸಿತ್ತು. ಇದಕ್ಕೆ ಇಲಾಖೆ ಪ್ರತಿಕ್ರಿಯಿಸಿ, ಈ ಪ್ರಮಾಣಪತ್ರ ಸಲ್ಲಿಸಿದೆ.
ಕುಣಿಗಲ್ ರೈಲು ಮಾರ್ಗಕ್ಕೆ ಬದಲಿಸುವುದರಿಂದ ಮಂಡ್ಯ, ರಾಮನಗರ ಮತ್ತು ಮೈಸೂರು ಜಿಲ್ಲೆಯ ನಿವಾಸಿಗಳು ಮಂಗಳೂರಿನ ಸಂಪರ್ಕ ಹೊಂದಲು ಕಷ್ಟವಾಗುತ್ತದೆ. ಜತೆಗೆ ಹಾಸನ – ಸಕಲೇಶಪುರ – ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ನಿಲ್ದಾಣದ ಘಟ್ಟಗಳು ಹೆಚ್ಚಿವೆ. ಮಾರ್ಗವು ಪೂರಕ ಸಾಮರ್ಥ್ಯಯ ಹೊಂದಿಲ್ಲ.
ರೈಲ್ವೇ ಮಂಡಳಿಯ ಕೆಲವು ಸದಸ್ಯರು ಈ ರೈಲಿನ ಮಾರ್ಗ ಬದಲಿಸಬಾರದೆಂದು ಸಲಹೆ ನೀಡಿದ್ದಾರೆ. ಈ ಎಲ್ಲಾ ಕಾರಣಗಳಿಂದ ಬೆಂಗಳೂರು-ಕಾರವಾರ ನಡುವೆ ಸಂಚರಿಸುವ ಎಕ್ಸ್ಪ್ರೆಸ್ ರೈಲನ್ನು ಕುಣಿಗಲ್ ಮಾರ್ಗಕ್ಕೆ ಬದಲಿಸಲು ಸಾಧ್ಯವಿಲ್ಲ ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.
ಅರ್ಜಿದಾರರ ಆಕ್ಷೇಪ: ಅರ್ಜಿದಾರರ ಪರ ವಕೀಲ ರವೀಂದ್ರ ಜಿ.ಕೊಳ್ಳೆ, ಇದನ್ನು ತೀವ್ರವಾಗಿ ಆಕ್ಷೇಪಿಸಿದ್ದಾರೆ. ಕುಣಿಗಲ್ ಮಾರ್ಗದ ಮೂಲಕ ಕಾರವಾರಕ್ಕೆ ರೈಲು ಸೇವೆ ಆರಂಭಿಸಿದರೆ ಬೆಂಗಳೂರಿನಿಂದ ಕಾರವಾರ ತಲುಪುವ ಸಮಯದಲ್ಲಿ 4 ತಾಸು ಕಡಿತವಾಗಲಿದೆ. ಮೈಸೂರು ಮಾರ್ಗದಲ್ಲಿ ರೈಲು ಸಂಚರಿಸಬೇಕೆಂದು ಹೇಳುವುದಾದರೆ, ಆ ಮಾರ್ಗದಲ್ಲೂ ರೈಲು ಓಡಿಸಬೇಕು. ಇದೇ ವೇಳೆ ಕುಣಿಗಲ್ ಮಾರ್ಗದಲ್ಲಿಯೂ ಮತ್ತೂಂದು ರೈಲು ಸಂಚಾರ ಆರಂಭಿಸಬಹುದು ಎಂದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ಮನವಿಯಂತೆ ಮಾರ್ಗ ಬದಲಾವಣೆ ಸಾಧ್ಯತೆಯನ್ನು ಮತ್ತೂಮ್ಮೆ ಪರಿಶೀಲಿಸಿ, ಮುಂದಿನ ವಿಚಾರಣೆ ವೇಳೆ ನಿಲುವು ತಿಳಿಸುವಂತೆ ರೈಲ್ವೇ ಇಲಾಖೆ ಪರ ವಕೀಲರಿಗೆ ನ್ಯಾಯಪೀಠ ತಿಳಿಸಿದೆ. ಎರಡು ವಾರಗಳ ಕಾಲ ವಿಚಾರಣೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ