ಇಲಾಖೆಗಳಿಗೆ ಮೀಸಲಿಟ್ಟ ಕೋಟ್ಯಂತರ ರೂ.ಬಳಕೆಯಾಗಿಲ್ಲ
Team Udayavani, Jul 8, 2018, 7:00 AM IST
ಬೆಂಗಳೂರು: ಬಜೆಟ್ನಲ್ಲಿ ಸಾಲ ಮನ್ನಾ ಮತ್ತಿತರ ಬಾಬ್ತುಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಸರ್ಕಾರ, ಹಿಂದಿನ ಆರ್ಥಿಕ ವರ್ಷದಲ್ಲಿ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಹಣವನ್ನು ಸರಿಯಾಗಿ ಬಳಕೆ ಮಾಡದೇ ಇರುವುದು ಬೆಳಕಿಗೆ ಬಂದಿದೆ.
2016-17ನೇ ಸಾಲಿನಲ್ಲಿ ಬಜೆಟ್ನಲ್ಲಿ ವಿವಿಧ ಇಲಾಖೆಗಳಿಗೆ ಮೀಸಲಿಟ್ಟಿದ್ದ 13,007 ಕೋಟಿ ರೂ.ಬಳಕೆಯಾಗದೆ ವಾಪಸ್ ಮಾಡಿರುವುದು ಸಿಎಜಿ ವರದಿಯಿಂದ ಬಹಿರಂಗಗೊಂಡಿದೆ.
2016-17ನೇ ಸಾಲಿನಲ್ಲಿ ರಾಜ್ಯದ ಬಜೆಟ್ 1,86,052 ಕೋಟಿ ರೂ. ಪೈಕಿ 1,73,045 ಕೋಟಿ ರೂ.ಬಳಕೆಯಾಗಿದ್ದು, ಉಳಿದ 13,007 ಕೋಟಿ ಅಂದರೆ, ಒಟ್ಟು ಬಜೆಟ್ನ ಶೇ.7ರಷ್ಟು ಹಣ ಬಳಕೆಯಾಗದೆ ಉಳಿದುಕೊಂಡಿದೆ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಬಿಡುಗಡೆ ಮಾಡಿದ ಅನುದಾನದಲ್ಲಿ 1381 ಕೋಟಿ ರೂ.ಬಳಕೆಯಾಗದಿರುವುದು. ಅಲ್ಪಸಂಖ್ಯಾತ ನಿರ್ದೇಶನಾಲಯಕ್ಕೆ ಬಿಡುಗಡೆ ಮಾಡಿದ್ದ ಅಲ್ಪ ಸಂಖ್ಯಾತರ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿ 260 ಕೋಟಿ ರೂ.ಗಳನ್ನು ವೈಯಕ್ತಿಕ ಠೇವಣಿಯಲ್ಲಿ ಇಟ್ಟಿರುವುದು ನಷ್ಟಕ್ಕೆ ಕಾರಣವಾಗಿದೆ ಎಂದು ಸಿಎಜಿ ವರದಿಯಲ್ಲಿ ತಿಳಿಸಲಾಗಿದೆ.
ಅರಣ್ಯ ಮತ್ತು ಜೀವಿಶಾಸOಉ ಇಲಾಖೆಯಲ್ಲಿ 146 ಕೋಟಿ ರೂ. ಸಮಾಜ ಕಲ್ಯಾಣ ಇಲಾಖೆಯಲ್ಲಿ 411 ಕೋಟಿ ರೂ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 186 ಕೋಟಿ ರೂ.,ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ 170 ಕೋಟಿ ರೂ., ವಸತಿ ಇಲಾಖೆಯಲ್ಲಿ 259 ಕೋಟಿ ರೂ., ಶಿಕ್ಷಣ ಇಲಾಖೆಯಲ್ಲಿ 974 ಕೋಟಿ ರೂ. ಬಳಕೆಯಾಗದೆ ಉಳಿದಿದೆ ಎಂದು ಸಿಎಜಿ ವರದಿಯಲ್ಲಿ ಪತ್ತೆ ಹಚ್ಚಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ