ಶಾಸಕರ ಭವನಕ್ಕೆ ರಾತ್ರಿ 8ರ ನಂತರ ನೋ ಎಂಟ್ರಿ
Team Udayavani, Jun 19, 2018, 6:45 AM IST
ಬೆಂಗಳೂರು: ಶಾಸಕರ ಭವನಕ್ಕೆ ರಾತ್ರಿ 8 ಗಂಟೆ ನಂತರ ಸಾರ್ವಜನಿಕರಿಗೆ ಪ್ರವೇಶವಿಲ್ಲ. ಜತೆಗೆ ಅಧಿಕೃತ ಗುರುತಿನ ಚೀಟಿ ಪಡೆಯದ ವಾಹನಗಳಿಗೂ ಪ್ರವೇಶ ನಿಷೇಧ.
ಹೌದು, ಶಾಸಕರ ಭವನದಲ್ಲಿ ರಾತ್ರಿ ವೇಳೆ ಸಾರ್ವಜನಿಕರ ಹೆಸರಿನಲ್ಲಿ ರಾಜಕೀಯ ನಾಯಕರ ಬೆಂಬಲಿಗರು, ಆಪ್ತರು
ಅನಗತ್ಯ ವ್ಯಕ್ತಿಗಳು ಪ್ರವೇಶ ಪಡೆದು ಕಿರಿಕಿರಿ ಉಂಟು ಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸ್ಪೀಕರ್
ಕೆ.ಆರ್.ರಮೇಶ್ಕುಮಾರ್ ಈ ಕ್ರಮ ಕೈಗೊಂಡಿದ್ದಾರೆ.
ಶಾಸಕರ ಭವನದಲ್ಲಿ ಶಾಸಕರ ಖಾಸಗಿತನಕ್ಕೆ ಅಡ್ಡಿಯಾಗದಂತೆ ಸಾರ್ವಜನಿಕರ ಭೇಟಿಯ ಸಮಯವನ್ನು
ಬದಲಾವಣೆ ಮಾಡಿದ್ದು, ಮಂಗಳವಾರದಿಂದಲೇ ಹೊಸ ನಿಯಮ ಜಾರಿಯಾಗಲಿದೆ. ಈ ಕುರಿತು ಮಾಹಿತಿ ನೀಡಿದ ರಮೇಶ್ ಕುಮಾರ್, ಶಾಸಕರ ಭವನದಲ್ಲಿನ ಶಾಸಕರ ಖಾಸಗಿತನಕ್ಕೆ ಧಕ್ಕೆಯಾಗದಂತೆ ಭೇಟಿಯ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 9ರಿಂದ ರಾತ್ರಿ 8ರವರೆಗೆ ಸಾರ್ವಜನಿಕರು ಸೇರಿದಂತೆ ಇತರರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ನಂತರದ ಅವಧಿಯಲ್ಲಿ ಭೇಟಿಗೆ ಅವಕಾಶ ಇರುವುದಿಲ್ಲ. ಮಂಗಳವಾರದಿಂದ ಪರಿಷ್ಕೃತ ವೇಳಾಪಟ್ಟಿ ಅನುಷ್ಠಾನವಾಗಲಿದೆ. ಜತೆಗೆ ಪಾಸ್ ಪಡೆಯದ ವಾಹನಗಳ ಪ್ರವೇಶಕ್ಕೂ ನಿರ್ಬಂಧ
ವಿಧಿಸಲಾಗುತ್ತಿದೆ ಎಂದು ಹೇಳಿದರು.
ಸದನದಲ್ಲಿ ಶಾಸಕರ ಹಾಜರಾತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜನಪ್ರತಿನಿಧಿಗಳನ್ನು ಅಧಿಕಾರಿಗಳಂತೆ ಪರಿಗಣಿಸಲು
ಸಾಧ್ಯವಿಲ್ಲ. ಜನಪ್ರತಿನಿಧಿಗಳು ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ