ಅಧಿಕಾರಿಗಳ ವಿರುದ್ಧ ಆತುರದ ಕ್ರಮ ಬೇಡ
Team Udayavani, Dec 14, 2019, 10:53 AM IST
ಬೆಂಗಳೂರು: ವರ್ತೂರು ಹೋಬಳಿಯ ಮುಳ್ಳೂರು ಗ್ರಾಮದ ಸರ್ಕಾರಿ ಜಮೀನನ್ನು ಖಾಸಗಿಯವರಿಗೆ ಕಾನೂನುಬಾಹಿರವಾಗಿ ಮಾರಾಟ ಮಾಡಲು ಸಹಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪ ನೋಂದಣಾಧಿಕಾರಿ ಎಂ.ಕೆ.ಶಾಂತಮೂರ್ತಿ ಹಾಗೂ ಭೂದಾಖಲೆಗಳ ಜಂಟಿ ನಿರ್ದೇಶರಾದ ಪಿ.ಎಸ್. ಕುಸುಮಲತ ವಿರುದ್ಧ ಯಾವುದೇ ಆತುರದ ಕ್ರಮ ಜರುಗಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗಳು ನ್ಯಾ.ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿದ್ದವು. ಆಗ ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ ಆರೋಪಿತ ಅಧಿಕಾರಿಗಳ ವಿರುದ್ಧ ಯಾವುದೇ ಆತುರದ ಕ್ರಮ ಜರುಗಿಸದಂತೆ ಮಧ್ಯಂತರ ಆದೇಶ ಹೊರಡಿಸಿತು. ಅಲ್ಲದೇ, ಪ್ರತಿವಾದಿಗಳಾದ ವಿಲ್ಸನ್ ಗಾರ್ಡನ್ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಈ ಪ್ರಕರಣಗಳಲ್ಲಿ ಅರ್ಜಿದಾರರನ್ನು ಅನಗತ್ಯವಾಗಿ ಸಿಲುಕಿಸಲಾಗಿದೆ. ಅವರಿಗೂ ಇದಕ್ಕೂ ಸಂಬಂಧವಿಲ್ಲ. ಅರ್ಜಿದಾರರು ತಹಸೀಲ್ದಾರ್ ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರು(ಎಡಿಎಲ್ಆರ್) ಮಾಡಿರುವ ಪೋಡಿಗೆ ಸಹಿ ಹಾಕಿದ್ದಾರಷ್ಟೇ, ಹಾಗಾಗಿ ಅವರ ವಿರುದ್ಧ ದಾಖಲಿಸಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ನ್ಯಾಯಪೀಠವನ್ನು ಕೋರಿದರು. ಅಷ್ಟಕ್ಕೂ, ಅರ್ಜಿದಾರರೇ ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಖಾಸಗಿಯವರಿಗೆ ವರ್ಗಾವಣೆ ಮಾಡಿದ್ದಾರೆನ್ನುವುದಕ್ಕೆ ಯಾವುದೇ ಆಧಾರವಿಲ್ಲ. ಪ್ರತಿವಾದಿಗೆ ದೂರು ದಾಖಲಿಸುವ ಅಧಿಕಾರವಿಲ್ಲ ಎಂದೂ ಸಹ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.
ಪ್ರಕರಣದ ಹಿನ್ನೆಲೆ: ಮುಳ್ಳೂರು ಗ್ರಾಮದ ಕೆಲವು ಸರ್ವೆ ನಂಬರ್ 49, 47, 48, 49/6, 44, 45 ಮತ್ತು 91ರ ಜಮೀನುಗಳನ್ನು ನೋಂದಣಿ ಮಾಡಬಾರದೆಂದು ಎಲ್ಲ ಉಪ ನೋಂದಣಾಧಿಕಾರಿಗಳಿಗೆ ನಿರ್ದೇಶಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಅವರಿಗೆ ಅ. 11ರಂದು ಪತ್ರ ಬರೆದಿದ್ದರು. ಅದರಂತೆ ತ್ರಿಲೋಕಚಂದ್ರ ಈ ಸರ್ವೇ ನಂಬರ್ಗಳ ಜಮೀನು ನೋಂದಣಿ ಮಾಡದಂತೆ ಸೂಚಿಸಿದ್ದರು. ಆದಾಗ್ಯೂ ಬಾಣಸವಾಡಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ದಯಾನಂದ ಭಂಡಾರಿ ವಿಚಾರಣೆ ನಡೆಸಿ, ವರದಿ ಸಲ್ಲಿಸಿದ್ದರು. ಅದನ್ನು ಆಧರಿಸಿ ಬಾಣಸವಾಡಿ ಹಿರಿಯ ಉಪ ನೋಂದಣಾಧಿಕಾರಿ ಎಂ.ಕೆ.ಶಾಂತಮೂರ್ತಿ ಹಾಗೂ ಎಡಿಎಲ್ಆರ್ ಪಿ.ಎಸ್. ಕುಸುಮಲತ ಮತ್ತಿತರರ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ