ಯಾವುದೇ ನೋಟಿಸ್ ಬಂದಿಲ್ಲ
Team Udayavani, Jun 22, 2018, 6:55 AM IST
ಬೆಂಗಳೂರು: “ನನಗೆ ಯಾವುದೇ ನೋಟಿಸ್ ಬಂದಿಲ್ಲ. ದೆಹಲಿಯ ಆಪ್ತ ಸಹಾಯಕ ಆಂಜನೇಯ ಮನೆಯಲ್ಲಿ ಸಿಕ್ಕ ಹಣಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ’ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, “ಮಾಧ್ಯಮಗಳೇ ಜನರಿಗೆ ಬೇಕಾದ ಮನರಂಜನೆ ಕೊಡುತ್ತಿವೆ. ಈ ಘಟನೆಯನ್ನೆಲ್ಲಾ ನೋಡಿ ನಿಜಕ್ಕೂ ನನಗೆ ಶಾಕ್ ಆಗಿದೆ’ ಎಂದು ಹೇಳಿದರು.
“ನಾನಂತೂ ಯಾರಿಗೂ ಹಣ ಕೊಟ್ಟಿಲ್ಲ, ಹಣ ಪಡೆದಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರಿಸಲಿದೆ’ ಎಂದರು.ಬಿಜೆಪಿ ನಾಯಕರ ಬಗ್ಗೆ ಮಾತನಾಡಲು ಸಾಕಷ್ಟು ವಿಚಾರ ಇದೆ. ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅವರಿಗೆ ಆಲ್ ದಿ ಬೆಸ್ಟ್ ಹೇಳುತ್ತೇನೆ. ಬಿಜೆಪಿಯಲ್ಲಿ ಸಾಕಷ್ಟು ಉದ್ಯಮಿಗಳು,ಹೋಟೆಲ್ ಮಾಲಿಕರಿದ್ದಾರೆ. ಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡವರು ಇದ್ದಾರೆ. ಆದರೆ, ಎಲ್ಲದಕ್ಕೂ ಒಳ್ಳೆಯ ಟೈಂ ಬರಬೇಕು ಎಂದರು.
ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿ ಕೊಂಡು ಐಟಿ ದಾಳಿಗಳು ನಡೆಯುತ್ತಿದ್ದು, ಕೇಂದ್ರ ಸರ್ಕಾರ ಐಟಿ, ಸಿಬಿಐ ಹಾಗೂ ಇಡಿ ಇಲಾಖೆಗಳನ್ನು ರಾಜಕೀಯ ಉದ್ದೇಶಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ.
– ಡಾ.ಜಿ.ಪರಮೇಶ್ವರ್, ಡಿಸಿಎಂ
ಕಾನೂನಿನ ಮೂಲಕವೇ ಶಿವಕುಮಾರ್ ಉತ್ತರ ನೀಡಲಿದ್ದಾರೆ. ಅವರಿಗೆ ನಾವೆಲ್ಲ ಬೆಂಬಲವಾಗಿದ್ದೇವೆ.
– ದಿನೇಶ್ ಗುಂಡೂರಾವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು