ಯಾವುದೂ ನನ್ನದಲ್ಲ ಅಂದುಕೊಂಡರೆ ನೆಮ್ಮದಿ


Team Udayavani, Jul 22, 2018, 11:33 AM IST

blore-5.jpg

ಬೆಂಗಳೂರು: ಜಗತ್ತಿನಲ್ಲಿರುವುದು ಯಾವುದೂ ನನ್ನದಲ್ಲ ಎಂಬ ಮನೋಭಾವ ಬೆಳೆಸಿಕೊಂಡರೆ ಮಾತ್ರ ನೆಮ್ಮದಿಯ ಬದುಕು ಸಾಧ್ಯ ಎಂದು ಚುಟುಕು ಕವಿ ಡುಂಡಿರಾಜ್‌ ತಿಳಿಸಿದರು.

ಗಾಂಧಿನಗರದ ಸಪ್ನ ಬುಕ್‌ ಹೌಸ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ “ನೆಚ್ಚಿನ ಲೇಖಕರ ಜತೆ ನಗೆಚಟಾಕಿ ಮಾತುಕತೆ’ಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿಯೊಬ್ಬರೂ ಇಲ್ಲಿರುವ ಯಾವುದೂ ನನ್ನದಲ್ಲ ಎಂಬ ಸತ್ಯ ತಿಳಿಯಬೇಕು. ಈ ಸತ್ಯ ತಿಳಿದ ವ್ಯಕ್ತಿ ನಿಶ್ಚಿಂತೆ ಮತ್ತು ಸಂತೋಷದಿಂದ ಇರುತ್ತಾನೆ ಎಂದು ಹೇಳಿದರು.

ಸದಾ-ಆನಂದ: “ಸದಾ ನಗುವ ನಮ್ಮ ಸದಾನಂದಗೌಡರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಾಗಲೂ ಸದಾ ಆನಂದದಿಂದ ಇರಲಿಲ್ಲವೇ? ಯಾಕೆಂದರೆ, ಅವರಿಗೂ ಗೊತ್ತಿತ್ತು ತಾವು ಕುಳಿತ ಕುರ್ಚಿ ಸದಾ ನಂದಲ್ಲ ಎಂಬ ಸತ್ಯ’ ಎಂದು ದುಂಡಿರಾಜ್‌ ಚುಟುಕು ಚಟಾಕಿ ಹಾರಿಸಿದರು.

ಹಾಸ್ಯದ ಮನಸ್ಸಿದ್ದರೆ, ಎಲ್ಲಿ ಬೇಕಾದರೂ ಹಾಸ್ಯದ ಹೊನಲು ಹರಿಯುತ್ತದೆ. ಜೀವನದ ನಿತ್ಯ ಆಗುಹೋಗುಗಳಲ್ಲೇ ಹಾಸ್ಯ ಹಾಸುಹೊಕ್ಕಾಗಿರುತ್ತದೆ. ಆದರೆ, ಆ ಹಾಸ್ಯಪ್ರಜ್ಞೆ ಇರಬೇಕಷ್ಟೇ ಎಂದು ಸೂಚ್ಯವಾಗಿ ಹೇಳಿದರು. 

ವಕ್ರದೃಷ್ಟಿಯಿಂದ ಹಾಸ್ಯ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌ ಮಾತನಾಡಿ, ಜೀವನದಲ್ಲಿ ವಕ್ರದೃಷ್ಟಿ ಇದ್ದರೆ, ಅಂತಹ ಕಡೆ ಹಾಸ್ಯ ಹುಟ್ಟುತ್ತದೆ. ಹಾಗೊಂದು ವೇಳೆ ಜೀವನವೇ ವಕ್ರದೃಷ್ಟಿಯಿಂದ ಕೂಡಿದರೆ, ಅಲ್ಲಿ “ಫಿಲಾಸಫಿ’ ಹುಟ್ಟುತ್ತದೆ ಎಂದು ಟಿ.ಪಿ.ಕೈಲಾಸಂ ಹೇಳಿದ್ದರು. ಆ ವಕ್ರದೃಷ್ಟಿ ನಮ್ಮ ನಿತ್ಯ ಜೀವನದಲ್ಲಿ ನಡೆಯುತ್ತಲೇ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಓದುವ ಹವ್ಯಾಸ ಕಡಿಮೆ ಆಗಿದೆ. ಫೇಸ್‌ಬುಕ್‌ನಲ್ಲೇ ಬುಕ್‌ಗಳನ್ನು ಓದಿ, ಅದಕ್ಕೆ ಕಾಮೆಂಟ್‌ ಎಂಬ ವಿಮರ್ಶೆ ಬರೆದು, ಶೇರ್‌ ಮಾಡುವ ಪ್ರವೃತ್ತಿ ಹೆಚ್ಚುತ್ತಿದೆ ಎಂದರು.

ಲೇಖಕ ಎಂ.ಎಸ್‌.ನರಸಿಂಹ ಮೂರ್ತಿ ಮಾತನಾಡಿ, ಹಾಸ್ಯದಲ್ಲಿ ಮೆಚ್ಚು ನಗೆ, ಚುಚ್ಚು ನಗೆ ಎಂಬ ಎರಡು ಪ್ರಕಾರಗಳಿವೆ. ಈ ನಗುವಿಗೆ ಯಾವುದೇ ಜಾತಿ-ಧರ್ಮದ ಭೇದ-ಭಾವ. ಅದೆಲ್ಲವನ್ನೂ ಮೀರಿದ್ದು ಹಾಸ್ಯ ಎಂದರು.

ಎಲ್ಲರ ನಗಿಸೋ ನೀವು ಮನೆಯಲ್ಲೂ ಹೀಗೇನಾ? “ಎಲ್ಲರ ನಗಿಸೋ ನೀವು ಮನೆಯಲ್ಲೂ ಹೀಗೇನಾ?’ -ನೆಚ್ಚಿನ ಲೇಖಕರೊಂದಿಗಿನ ಮಾತುಕತೆಯಲ್ಲಿ ಸಭಿಕ ರೊಬ್ಬರಿಂದ ಇಂತಹದ್ದೊಂದು ಪ್ರಶ್ನೆ ತೂರಿಬಂತು. ಇದಕ್ಕೆ ಹಾಸ್ಯದ ಧಾಟಿಯಲ್ಲೇ ಉತ್ತರಿಸಿದ ಎಂ.ಎಸ್‌. ನರಸಿಂಹಮೂರ್ತಿ, “ಮನೆಯಲ್ಲಿ ಹೆಂಡತಿ ನಗುವಂತಿದ್ದರೆ, ನಾನು ಇಲ್ಲಿಗೇಕೆ ಬರ್ತಿದ್ದೆರೀ…?’ ಎಂದರು. ಆಗ, ಸಭೆಯಲ್ಲಿ ನಗೆಯ ಬುಗ್ಗೆ ಚಿಮ್ಮಿತು.

ಹೌದು ನಿಮ್ಮ ಮಡದಿಯೇ: ಬೆನ್ನಲ್ಲೇ “ಯಾವಾಗಲೂ ಹೆಂಗಸರನ್ನು ಗೇಲಿ ಮಾಡುವಂತಹ ಜೋಕುಗಳೇ ಇರುತ್ತವೆ ಯಾಕೆ’ ಎಂಬ ಪ್ರಶ್ನೆ ತೂರಿಬಂತು. ಇದಕ್ಕೆ ಡುಂಡಿರಾಜ್‌ ಪ್ರತಿಕ್ರಿಯಿಸಿ, ಕೆಲವೆಡೆ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ “ನಿಮ್ಮ ಕವಿತೆಗೆ ಸ್ಫೂರ್ತಿ ನಿಮ್ಮ ಮಡದಿಯೇ?’ ಎಂದೂ ಕೇಳಿದ್ದುಂಟು. ಅದಕ್ಕೆ ನನ್ನ ಉತ್ತರ, “ಹೌದು, ನಿಮ್ಮ ಮಡದಿಯೇ’ ಎಂದು ಚಟಾಕಿ ಹಾರಿಸಿದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.