ನೋ ಆಪರೇಷನ್‌,ಓನ್ಲಿ ಗವರ್ನಮೆಂಟ್‌


Team Udayavani, Sep 15, 2018, 6:00 AM IST

no-operation.jpg

ಬೆಂಗಳೂರು: ಯಡಿಯೂರಪ್ಪ ನೇತೃತ್ವದಲ್ಲಿ ಈ ಹಿಂದೆ ನಡೆದ “ಆಪರೇಷನ್‌ ಕಮಲ’ ಪ್ರಯೋಗಕ್ಕೆ ಕೈ ಹಾಕದೆ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಒಪ್ಪಿ ಬರುವ ಶಾಸಕರನ್ನು ಮಾತ್ರ ಸೆಳೆದು ಸ್ವತಂತ್ರ ಸರ್ಕಾರ ನಡೆಸಲು ಬಿಜೆಪಿ ಹೈಕಮಾಂಡ್‌ ಸ್ಪಷ್ಟ ಸೂಚನೆ ನೀಡಿದೆ.

ಈಗಾಗಲೇ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಳಯದ 26 ಶಾಸಕರು ಬಿಜೆಪಿ ಸಂಪರ್ಕದಲಿದ್ದು, ಅವರಿಗೆ ಪ್ರಧಾನಿ ಮೋದಿ ನಾಯಕತ್ವದಲ್ಲಿ ನಂಬಿಕೆಯಿಟ್ಟು ಬರುವುದಾದರೆ ಸ್ವಾಗತವಿದೆ ಎಂಬ ಸಂದೇಶ ರವಾನಿಸಲಾಗಿದೆ ಎಂಬುದಾಗಿ ಮೂಲಗಳು ತಿಳಿಸಿವೆ.

“ಆಪರೇಷನ್‌ ಕಮಲ’ ಮಾಡಿ ಸಮ್ಮಿಶ್ರ ಸರ್ಕಾರವನ್ನು ಅಲುಗಾಡಿಸುವ ಬದಲಿಗೆ ದೋಸ್ತಿ ಸರ್ಕಾರದಲ್ಲಿ ಬಂಡಾಯಗಳು ಪುಟಿದೇಳುವುದನ್ನು ಬಳಸಿಕೊಂಡು ಮುಂದಿನ ಸರ್ಕಾರ ರಚಿ ಸ ಬೇಕೆನ್ನುವುದು ಹೈಕಮಾಂಡ್‌ ಉದ್ದೇಶವೆನ್ನಲಾಗಿದೆ. ಜತೆಗೆ, ಯಡಿಯೂರಪ್ಪ ಅವರು ಪ್ರಭಾವಿ ಲಿಂಗಾಯತ ಮುಖಂಡರಾಗಿದ್ದು, ಸ್ವತಂತ್ರವಾಗಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸಂಪೂರ್ಣ ನಾಯಕತ್ವವನ್ನು ವಹಿಸಲು ನಿರ್ಧರಿಸಲಾಗಿದೆ. ಸರ್ಕಾರ ರಚನೆಗೆ ಯಾವುದೇ ಸ್ವತಂತ್ರ ನಿರ್ಧಾರ ಕೈಗೊಳ್ಳಲೂ ಅವರಿಗೆ ಅವಕಾಶ ನೀಡಲಾಗಿದೆ. ಅಲ್ಲದೆ, ಪಕ್ಷದಿಂದ ಇತರ ಪ್ರಭಾವಿ ಮುಖಂಡರಿಂದ ಆಗಬಹುದಾದ ಪ್ರತಿರೋಧವನ್ನೂ ಲೆಕ್ಕಿಸದೇ ಇರಲೂ ಸೂಚಿಸಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ.

ಮೂಲಗಳ ಪ್ರಕಾರ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬಳಿಕ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಪಕ್ಷದ ದಕ್ಷಿಣ ಹೆಬ್ಟಾಗಿಲನ್ನು ಮತ್ತೆ ಪ್ರವೇಶಿಸಲು ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ, ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರ ಪಡೆಯಿತಾದರೂ ಬಹುಮತ ಸಾಬೀತಿಗೆ ವಿಫ‌ಲವಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಸರ್ಕಾರದಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟವನ್ನೇ ರಾಜಕೀಯ ದಾಳವಾಗಿ ಉರುಳಿಸಲು ಬಿಜೆಪಿ ನಿರ್ಧರಿಸಿದೆ.

ಹೈಕಮಾಂಡ್‌ ಮರುಜೀವ:
ಒಂದು ಹಂತದಲ್ಲಿ ಆಪರೇಷನ್‌ ಕಮಲ ನಡೆಸಲು ಸಿದ್ಧರಾಗಿದ್ದ ರಾಜ್ಯ ಮುಖಂಡರನ್ನು ಪಕ್ಷದ ಹೈಕಮಾಂಡ್‌ ತಟಸ್ಥಗೊಳಿಸಿತ್ತು. ಆದರೆ, ಇತ್ತೀಚೆಗೆ ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ಡಿ.ಕೆ. ಶಿವಕುಮಾರ್‌- ಜಾರಕಿಹೊಳಿ ಸಹೋದರರ “ಬೆಳಗಾವಿ ರಾಜಕೀಯ’, ಲಿಂಗಾಯತ ಮುಖಂಡ ಎಂ.ಬಿ. ಪಾಟೀಲ್‌ ನೇತೃತ್ವದ ತಂಡದ ಅತೃಪ್ತಿ,  ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಗೂಢ ಹೇಳಿಕೆಗಳು, ಉತ್ತರ ಕರ್ನಾಟಕ ಕುರಿತ ಸಮ್ಮಿಶ್ರ ಸರ್ಕಾರದ ನಡೆ ಮತ್ತಿತರ ಘಟನೆಗಳು  ಕುಮಾರಸ್ವಾಮಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿವೆ.  ಈ ಹಿನ್ನೆಲೆಯಲ್ಲಿ ಮತ್ತೆ ಸರ್ಕಾರ ಸ್ಥಾಪಿಸುವ ರಾಜ್ಯ ಬಿಜೆಪಿ ಕನಸಿಗೆ ಹೈಕಮಾಂಡ್‌ ಮರುಜೀವ ನೀಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಆದರೆ, ಸಮ್ಮಿಶ್ರ ಸರ್ಕಾರವನ್ನು “ಆಪರೇಷನ್‌ ಕಮಲ’ ಮೂಲಕ ಪತನಗೊಳಿಸುವುದನ್ನು ಹೈಕಮಾಂಡ್‌ ಒಪ್ಪಿಲ್ಲ ಎನ್ನಲಾಗಿದೆ. ಬದಲಿಗೆ ತನ್ನಷ್ಟಕ್ಕೆ ತಾನೇ ಪತನಗೊಳ್ಳುವ ಸರ್ಕಾರದ ಅತೃಪ್ತ ಶಾಸಕರು ಬಿಜೆಪಿ ಸೇರಿದರೆ, ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಮುಂದಾಗಿದೆ. ಜತೆಗೆ, ಅತೃಪ್ತ ಶಾಸಕರ ರಾಜೀನಾಮೆ ಬಳಿಕದ ಒಟ್ಟಾರೆ ಶಾಸಕರ ಸಂಖ್ಯೆಯಲ್ಲಿ ಸದ್ಯಕ್ಕೆ 104 ಶಾಸಕರನ್ನು ಹೊಂದಿರುವ ಬಿಜೆಪಿಗೆ ಬಹುಮತದ ಮ್ಯಾಜಿಕ್‌ ನಂಬರ್‌ ತಲುವುದು ಸಾಧ್ಯವಾಗುತ್ತದೆ. ಆಪರೇಷನ್‌ ಕಮಲದ ಬದಲಿಗೆ ಸಮ್ಮಿಶ್ರ ಸರ್ಕಾರದ  ಕೆಸರೆರಚಾಟ ಮತ್ತು ಅಲ್ಲಿನ ದೋಸ್ತಿ ಪಕ್ಷಗಳ ಅಪನಂಬಿಕೆಯಿಂದ ಸರ್ಕಾರ ಪತನವಾಗಿದೆ ಎಂದು ಪ್ರತಿಪಾದಿಸಿ ಬಳಿಕ ಅಧಿಕಾರ ಸ್ಥಾಪನೆಗೆ ಹಕ್ಕು ಕೇಳುವುದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ತಂತ್ರವಾಗಿದೆ ಎನ್ನಲಾಗಿದೆ. ಈ ಷರತ್ತುಗಳನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಾತ್ವಿಕವಾಗಿ ಒಪ್ಪಿಕೊಂಡಿದ್ದಾರೆ ಹಾಗೂ ಅವರಿಗೆ  ವಯಕ್ತಿಕವಾಗಿ ಯಾವುದೇ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಶಾಸಕರನ್ನು ಸಂಪರ್ಕಿಸದಂತೆಯೂ ಹೇಳಲಾಗಿದೆ.

ಕಾಂಗ್ರೆಸ್‌ನ ನೂತನ ಮತ್ತು ನಾಲ್ಕೈದು ಬಾರಿ ಗೆದ್ದರೂ ಸೂಕ್ತ ಸ್ಥಾನಮಾನ ಸಿಗದೆ ಅತೃಪ್ತರಾಗಿರುವ ಕೆಲವು ಶಾಸಕರಿಗೆ  ಆ ಪಕ್ಷದ ರಾಷ್ಟ್ರ ನಾಯಕತ್ವದ ಮೇಲೆ ನಂಬಿಕೆ ಕಡಿಮೆಯಾಗಿದೆ. ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ ಸೋತದ್ದೇ ಆದರೆ, ತಮ್ಮ ರಾಜಕೀಯ ಭವಿಷ್ಯ ಡೋಲಾಯಮಾನವಾಗಬಹುದು ಎಂಬ ಚಿಂತೆಯಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಕನಿಷ್ಠ ಮುಂದಿನ ಐದು ವರ್ಷಗಳಲ್ಲಿ ಪ್ರಭಾವಿಯಾಗಿರುತ್ತಾರೆ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಯವರು ತಮ್ಮ ರಾಷ್ಟ್ರ ನಾಯಕತ್ವವನ್ನು ಸ್ಥಾಪಿಸಲು ವಿಫ‌ಲರಾಗುತ್ತಿರುವುದು ಅಂತಹ ಶಾಸಕರಿಗೆ ಬಿಜೆಪಿಯತ್ತ ಒಲವಿಗೆ ಕಾರಣವಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡರೊಬ್ಬರು ವಿಶ್ಲೇಷಿಸಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ಸರ್ಕಾರ ರಚಿಸುವ ಬಗ್ಗೆ ಕಾರ್ಯತಂತ್ರ ರೂಪಿಸಲಾಗಿತ್ತು. ಆದರೆ, ತಕ್ಷಣ ಬಿಜೆಪಿ ಸರ್ಕಾರ ಬಂದಲ್ಲಿ ಪಕ್ಷಕ್ಕೆ ಇನ್ನಷ್ಟು ಬರಲಿದೆ. ತಮ್ಮ ತಮ್ಮ ವಿವಾದಗಳಿಂದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅವಕಾಶಗಳನ್ನು ಹಾಳುಮಾಡಿಕೊಂಡಿವೆ ಎಂದೂ ಆ ಮುಖಂಡ ಹೇಳಿದ್ದಾರೆ.

ಕಾಂಗ್ರೆಸ್‌ಗೂ ಸರ್ಕಾರ ಪತನ ಇಷ್ಟ?
ಉನ್ನತ ಮೂಲಗಳ ಪ್ರಕಾರ, ಕಾಂಗ್ರೆಸ್‌ ರಾಷ್ಟ್ರ ನಾಯಕತ್ವಕ್ಕೆ ರಾಜ್ಯದ ಸಮ್ಮಿಶ್ರ ಸರ್ಕಾರ ಪತನಗೊಳ್ಳುವುದು ಒಳ್ಳೆಯದು ಎಂಬ ಭಾವನೆಯಿದೆ. ಮುಖ್ಯವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್‌ ಜತೆಗಿನ ಸಂಬಂಧದಿಂದ ಸಮಸ್ಯೆ ಉಂಟಾಗಿದೆ. ಅದಕ್ಕೆ ಉತ್ತರ ಕರ್ನಾಟಕ ಕುರಿತ ಜೆಡಿಎಸ್‌ ತಳೆದು ಕೊಂಡ ನಿರ್ಧಾರಗಳು, ಆ ಭಾಗದಲ್ಲಿ ಇನ್ನೂ ಭಧ್ರವಾಗಿರುವ ಕಾಂಗ್ರೆಸ್‌ ಅಡಿಪಾಯಕ್ಕೆ ಧಕ್ಕೆ ತಂದಿದೆ ಎನ್ನಲಾಗಿದೆ. ಜತೆಗೆ ತನ್ನ ಮತಬ್ಯಾಂಕ್‌ ಆಗಿರುವ ಅಹಿಂದ ವರ್ಗ, ಉತ್ತರ ಕರ್ನಾಟಕದಲ್ಲಿ ಕ್ಷೀಣವಾಗಿರುವ ಜೆಡಿಎಸ್‌ಗೆ ಬಲತಂದುಕೊಟ್ಟಿದ್ದೇ ಆದಲ್ಲಿ ಕಾಂಗ್ರೆಸ್‌ಗೆ ತೊಂದರೆ ಆಗಲಿದೆ. ಇವೆಲ್ಲಾ ಕಾರಣಗಳು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ವಶದಲ್ಲಿರುವ ಲೋಕಸಭಾ ಕ್ಷೇತ್ರಗಳನ್ನೇ ಉಳಿಸಿಕೊಳ್ಳಲು ಕಷ್ಟವಾಗಬಹುದು ಎಂಬ ಯೋಚನೆ ಪಕ್ಷ ಮುಖಂಡತ್ವಕ್ಕೆ ಬಂದಿದೆ ಎನ್ನಲಾಗಿದೆ. ಜೆಡಿಎಸ್‌ ನಾಯಕರ ಜತೆ ಮುನಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಲುವುಗಳು ಮತ್ತು ವಿಶ್ಲೇಷಣೆಗಳು ಪಕ್ಷಮುಖಂಡತ್ವಕ್ಕೆ ಮನವರಿಕೆ ಆಗಿದ್ದು, ಸರ್ಕಾರ ಪತನವಾದಲ್ಲಿ ಲಾಭ ಹೆಚ್ಚು ಎಂದುಕೊಂಡಿದೆ ಎಂದು ಮೂಲಗಳು ಹೇಳಿವೆ.

– ನವೀನ್‌ ಅಮ್ಮೆಂಬಳ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.