ಬೇರೆ ಇಲಾಖೆಯಿಂದ ಯೋಜನೆ ಕಿತ್ತುಕೊಂಡಿಲ್ಲ


Team Udayavani, Aug 4, 2018, 12:06 PM IST

bere-ila.jpg

ಬೆಂಗಳೂರು: ನಗರದ ಸಂಚಾರ ದಟ್ಟಣೆ ನಿವಾರಣೆಗೆ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ 15 ಸಾವಿರ ಕೋಟಿ ರೂ. ಮೊತ್ತದ ಎಲಿವೇಟೆಡ್‌ ಕಾರಿಡಾರ್‌ ಯೋಜನೆ ಆರಂಭಿಸುವ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದ್ದಾರೆ.

ಯೋಜನೆ ಕುರಿತು  ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಕೆಗೆ 45 ದಿನ ಕಾಲಾವಕಾಶವಿದೆ. ಜತೆಗೆ  ಪರಿಸರವಾದಿಗಳ ಸಲಹೆ-ಸೂಚನೆ ಸಹ ಪಡೆಯಲಾಗುವುದು. ಅಂತಿಮವಾಗಿ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

“ಯೋಜನೆಗಾಗಿ 2874 ಮರಗಳನ್ನು ಮಾತ್ರ ತೆರವುಗೊಳಿಸಬೇಕಾಗುತ್ತದೆ. ನಾನು ಸಚಿವನಾದ ನಂತರ ರೂಪಿಸಿದ ಯೋಜನೆ ಇದಲ್ಲ ಅಥವಾ ಯೋಜನೆಯನ್ನು ಲೋಕೋಪಯೋಗಿ ಇಲಾಖೆಯಿಂದಲೇ ನಡೆಸುವ ಉದ್ದೇಶದಿಂದ, ನಾನು ಅದನ್ನು ಬೇರೆ ಇಲಾಖೆಯಿಂದ ಕಿತ್ತುಕೊಂಡಿಲ್ಲ,’ ಎಂದು ಸ್ಪಷ್ಟಪಡಿಸಿದರು.

2007ರಲ್ಲಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗಲೇ ಎಲಿವೇಟೆಡ್‌ ಕಾರಿಡಾರ್‌ ಯೋಜನೆ ರೂಪಿಸಲಾಗಿತ್ತು. ಆ ನಂತರ ಬಿಬಿಎಂಪಿಯಿಂದ ಕಾಮಗಾರಿ ಕೈಗೊಳ್ಳಲು ತೀರ್ಮಾನವಾಗಿತ್ತು. ಅದು ಸಾಧ್ಯವಾಗದೆ ಕೆಆರ್‌ಡಿಲ್‌ಗೆ ಒಪ್ಪಿಸಲಾಗಿತ್ತು. 2007ರಿಂದ 2014 ರವರೆಗೆ ಯೋಜನೆ ಯಾವುದೇ ಹಂತ ತಲುಪಿರಲಿಲ್ಲ. ಕಾಂಗ್ರೆಸ್‌ ಸರ್ಕಾರದಲ್ಲಿ ಮಹದೇವಪ್ಪ ಹಾಗೂ ಜಾರ್ಜ್‌ ಅವರು ಮತ್ತೆ ಯೋಜನೆಗೆ ಚಾಲನೆ ನೀಡಿ ಸಾಧ್ಯತಾ ವರದಿ ತಯಾರಿಸಲು 14 ಕೋಟಿ ರೂ. ಮೀಸಲಿಟ್ಟಿದ್ದರು ಎಂದು ಮಾಹಿತಿ ನೀಡಿದರು.

ವಿವಾದ ಎಳೆದುಕೊಳ್ಳಲು ಸಿದ್ಧರಿಲ್ಲ: ಸಾರ್ವಜನಿಕರು ಹಾಗೂ ಪರಿಸರವಾದಿಗಳು ಬೇಡ ಎಂದರೆ ನಮಗೂ ಬೇಡ. ಸ್ಟೀಲ್‌ ಬ್ರಿಡ್ಜ್ ಯೋಜನೆ ನೋಡಿಲ್ಲವೇ, ಅಂತಹ ವಿವಾದ ಮೈ ಮೇಲೆ ಎಳೆದುಕೊಳ್ಳಲು ನಾವು ಸಿದ್ಧರಿಲ್ಲ. ಪಾರದರ್ಶಕವಾಗಿ ಯೋಜನೆ ಜಾರಿಗೊಳಿಸಲಿದ್ದೇವೆ ಎಂದು ರೇವಣ್ಣ ಹೇಳಿದರು.

ಹಾಗಾದರೆ, ಜನತೆ ಬೇಡ ಎಂದಾದರೆ ಎಲಿವೇಟೆಡ್‌ ಕಾರಿಡಾರ್‌ ಯೋಜನೆ ರದ್ದುಪಡಿಸುತ್ತೀರಾ ಎಂದು ಮಾಧ್ಯಮದವರು ಪ್ರಶ್ನಿಸಿದಾಗ ಗರಂ ಆದ ಸಚಿವರು, ನಾನ್ಯಾಕೆ ಆ ರೀತಿ ಹೇಳಲಿ ಎಂದು ಉಲ್ಟಾ ಹೊಡೆದರು. ಬೇಕು-ಬೇಡಾ ಎಂದು ತೀರ್ಮಾನ ಮಾಡುವವನು ನಾನಲ್ಲ, ಮುಖ್ಯಮಂತ್ರಿಗಳು ಮಾಡುತ್ತಾರೆ. ಆಕ್ಷೇಪಣೆ ಬರುವ ಮೊದಲೇ ನಾನು ಏನೂ ಮಾತನಾಡುವುದಿಲ್ಲ ಎಂದರು.

ಎರಡು ವರ್ಷದಲ್ಲಿ ಆರು ಪಥ ಪೂರ್ಣ: ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಆರು ಪಥ ರಸ್ತೆ ನಿರ್ಮಾಣಕ್ಕೆ ಸೆಪ್ಟೆಂಬರ್‌ನಿಂದ ಭೂಮಿ ಬಿಟ್ಟುಕೊಡುವ ಪ್ರಕ್ರಿಯೆ ನಡೆಯಲಿದೆ. ಆರು ಪಥ ರಸ್ತೆ ಹಾಗೂ ಎರಡೂ ಕಡೆ ಸರ್ವಿಸ್‌ ರಸ್ತೆ ಬರಲಿದೆ.

ಒಟ್ಟಾರೆ ಯೋಜನೆಗೆ ರಾಜ್ಯ ಸರ್ಕಾರದಿಂದ ಅಗತ್ಯವಾದ ಸಹಕಾರ ನೀಡಿದರೆ ಎರಡು ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಗಳಿಗೆ ಶೇ.10 ರಷ್ಟು ಸೇವಾ ತೆರಿಗೆ ಇಳಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಕೇಂದ್ರ ಸರ್ಕಾರಕ್ಕೆ ಹೊರೆ ಕಡಿಮೆಯಾಗಿದೆ ಎಂದು ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದರು.

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.