ರಾಜ್ಯದಲ್ಲಿ ಯಾವುದೇ ರೀತಿಯ ಪವರ್ ಕಟ್ ಇಲ್ಲ : ಸಿಎಂ ಬಸವರಾಜ ಬೊಮ್ಮಾಯಿ
Team Udayavani, Oct 12, 2021, 9:40 PM IST
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಅಭಾವ ಎದುರಾಗದಂತೆ ನೋಡಿಕೊಳ್ಳುತ್ತೇವೆ. ಯಾವುದೇ ರೀತಿಯ ಪವರ್ ಕಟ್ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಎದುರು ಮಾತನಾಡಿದ ಸಿಎಂ, ಕಲ್ಲಿದ್ದಲು ಪೂರೈಕೆಗೆ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದೇನೆ. ಎರಡು ರೇಕ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ, ಮೂರು ರೇಕ್ ಸಿಕ್ಕರೆ ಸಮಸ್ಯೆ ಬಗೆಹರಿಯುತ್ತದೆ. ಇಂದು ಎರಡು ಪ್ರಮುಖ ಸಭೆ ನಡೆಸಿದ್ದೇನೆ. ತೆಲಂಗಾಣ ಸಿಎಂ ಜೊತೆಗೆ ಮಾತಾಡುತ್ತಿದ್ದೇನೆ. ಅಲ್ಲಿಂದು ಹತ್ತರಿಂದ ಹನ್ನೆರಡು ರೇಕ್ ಸಿಗುವಂತೆ ಮಾತನಾಡಲಾಗಿದೆ. ನಮ್ಮ ಸರ್ಕಾರ ಫೇಲ್ ಆಗಿಲ್ಲ. ಒರಿಸ್ಸಾದಲ್ಲಿ ಮಳೆ ಹೆಚ್ಚಾಗಿದೆ. ಆದ್ದರಿಂದ ಕಲ್ಲಿದ್ದಲು ಬರಲು ನಿಧಾನವಾಗಿ ಆಗಿದೆ ಎಂದರು.
ಈ ಬಾರಿ ಹೆಚ್ಚು ಮಳೆ ಆಗಿದೆ. ಮಳೆಯಿಂದ ಇದುವರೆಗೆ 4 ಲಕ್ಷ 71 ಸಾವಿರ ಎಕ್ಕರೆ ಕೃಷಿ ಭೂಮಿ ಹಾಳಾಗಿದೆ. ಮಳೆಗೆ ಅಕ್ಟೋಬರ್ 1 ರಿಂದ ಇಲ್ಲಿಯ ವರೆಗೂ 21 ಜನ ಸತ್ತಿದ್ದಾರೆ. ಅವರಿಗೆ ಪರಿಹಾರ ನೀಡಲು ಸೂಚಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ