ಈ ಬಾರಿ ಸಾರ್ವಜನಿಕ ಹೊಸ ವರ್ಷಾಚರಣೆಗೆ ಬ್ರೇಕ್
ಎಂ.ಜಿ. ರಸ್ತೆಯಲ್ಲಿ ಹೊಸ ವರ್ಷಾಚರಣೆ ನಿಷೇಧಿಸುವಂತೆ ಸರ್ಕಾರಕ್ಕೆ ಬಿಬಿಎಂಪಿ ಅಭಿಪ್ರಾಯ
Team Udayavani, Dec 2, 2020, 4:43 PM IST
ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್ ಕ್ಲಬ್ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.
ಈ ಕುರಿತು ಬುಧವಾರ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಕಳೆದ ವಾರ ಕಂದಾಯ ಸಚಿವರು, ಗೃಹ ಸಚಿವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಭೆ ನಡೆಯಿತು. ಸದ್ಯ ಕೋವಿಡ್ ಸೋಂಕು ಇಳಿಕೆಯಾಗಿದೆ. ಮುಂದಿ️ನ ದಿನಗಳಲ್ಲಿ ಎರಡನೇ ಅಲೆ ಭೀತಿ ಇದೆ. ಜತೆಗೆ ಚಳಿಗಾಲವೂ ಇದೆ. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಡಿಸೆಂಬರ್ 31ರಂದು ಮಧ್ಯರಾತ್ರಿ ನಗರದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ಸ್ಟ್ರೀಟ್ ನಡೆಯುತ್ತಿದ್ದ ಸಂಭ್ರಮಾಚರಣೆಗಳು ಈ ವರ್ಷ ನಿಷೇಧಿಸಬೇಕು. ಸಾರ್ವಜನಿಕವಾಗಿ ಹೊಸ ವರ್ಷಾಚರಣೆಯ ಕಾರ್ಯಕ್ರಮಗಳನ್ನು ನಿಯಂತ್ರಿಸಬೇಕು. ಜತೆಗೆ ಬಾರ್, ಕ್ಲಬ್ಗಳಲ್ಲಿ ವಿಶೇಷ ಪಾರ್ಟಿ ಆಯೋಜಿಸಲು ಅನುಮತಿ ನೀಡಬಾರದು ಎಂಬ ಅಭಿಪ್ರಾಯವನ್ನು ನೀಡಿದ್ದೇವೆ ಎಂದರು.
ಇದನ್ನೂ ಓದಿ:ನ್ಯಾಯಾಧೀಶರುಗಳ ಪತ್ನಿಯರ ವಿರುದ್ಧ ಅಶ್ಲೀಲ ಹೇಳಿಕೆ; ನಿವೃತ್ತ ಜಡ್ಜ್ ಕರ್ಣನ್ ಬಂಧನ
ಸಾಮಾನ್ಯ ದಿ️ನಗಳಂತೆ ಬಾರ್, ರೆಸ್ಟೋರಂಟ್ಗೆ ತೆರಳುವುದಕ್ಕೆ, ಊಟ ಉಪಹಾರಗಳಿಗೆ ಯಾವುದೇ ಅಡಚಣೆ ಇರುವುದಿ️ಲ್ಲ. ಈ ಕುರಿತು ಅಂತಿಮ ತೀರ್ಮಾವನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದರು.
ತಜ್ಞರು ವರದಿ️ ನೀಡಿದ್ದಾರೆ
ಹೊಸ ವರ್ಷ ಸಂಭ್ರಮಾಚರಣೆಗಳು ಸಂಪೂರ್ಣ ನಿಷೇಧಿಸಬೇಕು ಎಂದು ಸರ್ಕಾರಮಟ್ಟದ ಕೋವಿಡ್ ನಿರ್ವಹಣೆ ತಜ್ಞರ ತಾಂತ್ರಿಕ ಮಂಡಳಿ ಸರ್ಕಾರಕ್ಕೆ ಸಲಹೆ ನೀಡಿದೆ. ಡಿ.26 ರಿಂದ ಜ.2 ರವರೆಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುುಮತಿ ನೀಡಬಾರದು ಎಂದು ತಿಳಿಸಿದೆ. ಈ ಮೂಲಕ ಸಂಭ್ರಮಾಚರಣೆಗಳಿಗೆ ಸಂಪೂರ್ಣ ಬ್ರೇಕ್ ಬೀಳುವ ಸಾಧ್ಯತೆ ಹೆಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ