ಸೋಂಕಿತ ಮಕ್ಕಳಲ್ಲಿ ಗಂಭೀರತೆ ಕಂಡುಬಂದಿಲ್ಲ

ಬಿಬಿಎಂಪಿ ಮಕ್ಕಳ ತಜ್ಞರ ಸಮಿತಿ ಸ್ಪಷ್ಟನೆ ; ರಾಜ್ಯದಲ್ಲಿ ಕೋವಿಡ್‌ ಸೋಂಕು ನಿಯಂತ್ರಣ

Team Udayavani, Aug 15, 2021, 3:57 PM IST

ಸೋಂಕಿತ ಮಕ್ಕಳಲ್ಲಿ ಗಂಭೀರತೆ ಕಂಡುಬಂದಿಲ್ಲ

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ 9ರಿಂದ19 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚು ಕೋವಿಡ್‌ ಸೋಂಕು ಕಂಡುಬರುತ್ತಿದೆ ಎಂದು ಹಬ್ಬಿರುವ
ಸುದ್ದಿಯಿಂದ ಪೋಷಕರಲ್ಲಿ ಭೀತಿ ಉಂಟಾಗಿದೆ.

ಆದರೆ, ಬೇರೆ ವಯೋಮಾನದ ಕೋವಿಡ್‌ ಸೋಂಕಿತರಿಗೆ ಹೋಲಿಸಿದರೆ, ಸೋಂಕಿತ ಮಕ್ಕಳಲ್ಲಿ ಗಂಭೀರತೆ ಕಂಡುಬಂದಿಲ್ಲ ಎಂದು
ಬಿಬಿಎಂಪಿ ಮಕ್ಕಳ ತಜ್ಞರ ಸಮಿತಿ ಸ್ಪಷ್ಟಪಡಿಸಿದೆ.

ನಗರದಲ್ಲಿ ಕಳೆದ ನಾಲ್ಕು ತಿಂಗಳಿಂದ ದೃಢವಾದ ಕೋವಿಡ್‌ ಸೋಂಕು ಪ್ರಕರಣಗಳ ಪೈಕಿ 0-18 ವರ್ಷದೊಳಗಿನವರ ಸೋಂಕು ಪಾಸಿಟಿವಿಟಿ ದರ ಶೇ.11 ಇದೆ. ಹೀಗಾಗಿ, ಪೋಷಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ.ಕಳೆದ10 ದಿನಗಳಲ್ಲಿ ಪತ್ತೆಯಾದ ಕೋವಿಡ್‌ ಸೋಂಕಿತರಲ್ಲಿ ಐದು ಮಕ್ಕಳು ಸರ್ಕಾರಿ ಮತ್ತು 24 ಮಕ್ಕಳು ಖಾಸಗಿ ಕೋಟಾದಡಿ ಆಸ್ಪತ್ರೆ ದಾಖಲಾಗಿದ್ದಾರೆ. ಒಟ್ಟು ಸೋಂಕು ಪ್ರಕರಣದ ಶೇ.5.7 ಮಕ್ಕಳು ಮಾತ್ರ ಆಸ್ಪತ್ರೆಗೆ ದಾಖಲಾತಿಯಾಗಿದ್ದು, ಬೇರೆ ವಯೋಮಾನದ ಸೋಂಕಿತರಿಗೆ ಹೋಲಿಸಿದರೆ ಇದುಕಡಿಮೆಯಾಗಿದೆ ಎಂದು ಹೇಳಿದೆ.

ಇದನ್ನೂ ಓದಿ:ತಾಲಿಬಾನ್ ಗೆ ಶರಣಾದ ಅಫ್ಘಾನ್: ಉಗ್ರರಿಗೆ ಅಧಿಕಾರ ಹಸ್ತಾಂತರಿಸಿದ ಅಫ್ಘಾನ್ ಅಧ್ಯಕ್ಷ!

ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್‌ ಸೋಂಕು ಪ್ರಕರಣ ಹೆಚ್ಚಳವಾಗಿದ್ದರೂ, ರಾಜ್ಯದಲ್ಲಿ ಕೋವಿಡ್‌ ಸೋಂಕು ನಿಯಂತ್ರಣದಲ್ಲಿದೆ. ನಗರದಲ್ಲಿ ಕಳೆದ 20 ದಿನಗಳಲ್ಲಿ ನಿತ್ಯ ಸರಾಸರಿ 388(350-400) ಸೋಂಕು ಪತ್ತೆಯಾಗುತ್ತಿದೆ. 0-12 ವಯಸ್ಸಿನ ಮಕ್ಕಳಿಗೆ ಜೂನ್‌ನಲ್ಲಿ2,643, ಜುಲೈನಲ್ಲಿ 778 ಮತ್ತು ಆ.13ರ ಅಂತ್ಯಕ್ಕೆ 309 ಸೋಂಕು ಕಂಡುಬಂದಿದೆ. ಇದಕ್ಕೆ ಹೋಲಿಕೆ ಮಾಡಿದಲ್ಲಿ ಮಕ್ಕಳ ಸೋಂಕು ಪ್ರಮಾಣ ಇಳಿಕೆಯಾಗಿದೆ.

ಆಗಸ್ಟ್‌ ತಿಂಗಳಲ್ಲಿ 0-18 ವರ್ಷದ 511 ಮಕ್ಕಳಿಗೆ ಕೋವಿಡ್‌ ಸೋಂಕು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.11.5ರಷ್ಟಿದೆ. ಏಪ್ರಿಲ್‌ ನಿಂದ ಜೂನ್‌ವರೆಗೆ 14 ಮಕ್ಕಳುಸಾವನ್ನಪ್ಪಿದ್ದು, ಜುಲೈ ಮತ್ತು ಆಗಸ್ಟ್‌ನಲ್ಲಿ ಯಾರೂ ಮೃತರಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಶೀಘ್ರ 30 ಹಾಸಿಗೆಗಳ ಸಾಮರ್ಥ್ಯ ಆಸ್ಪತ್ರೆ: ಅಮೇರಿಕನ್‌ ಅಕಾಡೆಮಿ ಆಫ್ ಪೀಡಿಯಾ ಟ್ರಿಕ್ಸ್‌ ಪ್ರಕಟಿಸಿದ ಜಾಗತಿಕ ದತ್ತಾಂಶದಲ್ಲಿ ಒಟ್ಟು
ಕೋವಿಡ್‌ ಪ್ರಕರಣಗಳಲ್ಲಿ ಶೇ.14.3 ಮಕ್ಕಳಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಈ ಪೈಕಿ ಕೇವಲ ಶೇ.1.9 ಮಕ್ಕಳು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬೆಂಗಳೂರಲ್ಲಿ ಜಾಗತಿಕ ದತ್ತಾಂಶಕ್ಕಿಂತಲೂ ಕಡಿಮೆ ಸೋಂಕು ವರದಿ ಯಾಗುತ್ತಿದೆ. ಸೋಂಕಿತ ಮಕ್ಕಳ ಆರೈಕೆಗೆ
ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಸೇರಿದಂತೆ 7 ಆಸ್ಪತ್ರೆ ಗುರುತಿಸಲಾಗಿದೆ. ಜತೆಗೆ, ಬಿಬಿಎಂಪಿ ವತಿಯಿಂದ ಮಕ್ಕಳ ಆರೈಕೆಗೆ ಶೀಘ್ರ 30
ಹಾಸಿಗೆಗಳ ಸಾಮರ್ಥ್ಯ ಆಸ್ಪತ್ರೆ ವ್ಯವಸ್ಥೆ ಮಾಡಲಿದೆ ಎಂದು ತಿಳಿಸಿದೆ.

ಭಯಪಡುವ ಅಗತ್ಯವಿಲ್ಲ
ಕೋವಿಡ್‌ ಸೋಂಕು ಪತ್ತೆಯಾದ ಬಹುತೇಕ ಮಕ್ಕಳಲ್ಲಿ ಸೌಮ್ಯ ರೋಗಲಕ್ಷಣಗಳು ಕಂಡುಬಂದಿದ್ದು, ತಮ್ಮಷ್ಟಕ್ಕೆ ತಾವೇ ಚೇತರಿಸಿಕೊಳ್ಳುತ್ತಾರೆ. ಹೀಗಾಗಿ, ನಗರದ ಜನರು ಹಾಗೂ ಪೋಷಕರು ಭಯಪಡುವ ಅಗತ್ಯವಿಲ್ಲ. ಮಕ್ಕಳಲ್ಲಿ ಸೋಂಕು ಲಕ್ಷಣ ಕಂಡು ಬಂದಲ್ಲಿ ವೈದ್ಯಕೀಯ ಮೌಲ್ಯಮಾಪನಕ್ಕಾಗಿ ಬಿಬಿಎಂಪಿ ದೈಹಿಕ ಚಿಕಿತ್ಸಾ ಕೇಂದ್ರ(ಪಿಟಿಸಿ), ಪ್ರಾಥಮಿಕ ಆರೋಗ್ಯಕೇಂದ್ರ(ಪಿಎಚ್‌ಸಿ) ಅಥವಾ ಸಮುದಾಯ
ಆರೋಗ್ಯ ಕೇಂದ್ರಗಳಿಗೆ (ಸಿಎಚ್‌ಸಿಎ) ತೆರಳಿ ತಪಾಸಣೆ ಮಾಡಿಸಿಕೊಳ್ಳಬಹುದು. ಮೂರು ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳುಕಡ್ಡಾಯವಾಗಿ ಕೋವಿಡ್‌ನಿಯಮಗಳನ್ನು ಪಾಲಿಸಬೇಕು ಎಂದು ಬಿಬಿಎಂಪಿಯ ಮಕ್ಕಳ ತಜ್ಞರ ಸಮಿತಿಯು ಸಲಹೆ ನೀಡಿದೆ.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.