ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ: ಡಿಸಿಎಂ ಸ್ಪಷ್ಟನೆ


Team Udayavani, Jun 17, 2021, 6:48 PM IST

cats

ಬೆಂಗಳೂರು: ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಮೊಟಕುಗೊಳಿಸುವ ಯಾವುದೇ ಚಿಂತನೆ ಅಥವಾ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಸ್ಥಳೀಯ ಹಾಗೂ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚು ಮನ್ನಣೆ ನೀಡಿ ಆ ಭಾಷೆಗಳಲ್ಲೇ ವೃತ್ತಿಪರ ಶಿಕ್ಷಣ ಸೇರಿ ಎಲ್ಲ ವಿಭಾಗದ ಉನ್ನತ ಶಿಕ್ಷಣವನ್ನು ಬೋಧಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಈ ಅಂಶಕ್ಕೆ ಶಿಕ್ಷಣ ನೀತಿಯಲ್ಲಿ ಹೆಚ್ಚು ಒತ್ತು ನೀಡಲಾಗಿದೆ” ಎಂದಿದ್ದಾರೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ, ಪದವಿ ಶಿಕ್ಷಣ ಸಂರಚನೆ ಹೀಗಿರುತ್ತದೆ. ಮೂರು ವರ್ಷ ವ್ಯಾಸಂಗ ಮಾಡಿದರೆ ಪದವಿ ಮುಗಿಯುತ್ತದೆ. ನಾಲ್ಕು ವರ್ಷ ಓದಿದರೆ ಅದನ್ನು ʼಡಿಗ್ರಿ ಆನರ್ಸ್‌ʼ ಎಂದು ಪರಿಗಣಿಸಲಾಗುತ್ತದೆ, ಮತ್ತೂ ಐದು ವರ್ಷ ವ್ಯಾಸಂಗ ಮಾಡಿದರೆ ಸ್ನಾತಕೋತ್ತರ ಪದವಿಯೇ ಪೂರ್ಣಗೊಳಿಸಿದಂತೆ ಆಗುತ್ತದೆ. ಇದು ಪೂರ್ವ ವ್ಯವಸ್ಥೆಯ ಸುಧಾರಣಾ ಕ್ರಮವಷ್ಟೇ ಎಂದು ಡಿಸಿಎಂ ವಿವರಿಸಿದ್ದಾರೆ.

ಈ ವಿಷಯ ಇನ್ನು ಕರಡು ತಯಾರಿಕೆ ಹಂತದಲ್ಲಿದೆ. ಈಗಲೇ ಅದರ ಬಗ್ಗೆ ಆತಂಕಪಡುವ ಅಗತ್ಯ ಇಲ್ಲ. ಮುಖ್ಯವಾಗಿ ಪದವಿ ಶಿಕ್ಷಣದಲ್ಲಿ ಎರಡು ವರ್ಷ ಕನ್ನಡ ಬೋಧನೆ ಆಗುತ್ತಿರುವ ಹಾಲಿ ವ್ಯವಸ್ಥೆಯಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ. ಮಾತೃಭಾಷೆ ಕಲಿಕೆಯನ್ನು ಒಂದು ವರ್ಷಕ್ಕೆ ಸೀಮಿತಗೊಳಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿಲ್ಲ ಎಂದು ಡಾ.ಅಶ್ವತ್ಥನಾರಾಯಣ ಸ್ಪಷ್ಟವಾಗಿ ಪುನುರುಚ್ಛರಿಸಿದ್ದಾರೆ.

ಶಿಕ್ಷಣದಲ್ಲಿ ಗುಣಮಟ್ಟ ಹಾಗೂ ಜಾಗತಿಕ ದೃಷ್ಟಿ ಇಟ್ಟುಕೊಂಡು ಅತ್ಯಂತ ಪುರಾತನ ಭಾಷೆಯಾದ ಕನ್ನಡದ ಭೋಧನೆ ಮತ್ತು ಕಲಿಕೆಯನ್ನು ಮತ್ತಷ್ಟು ವಿಸ್ತೃತಗೊಳಿಸುವ ಉದ್ದೇಶ ಸರಕಾರಕ್ಕೆ ಇದೆಯೇ ವಿನಾ, ಅದಕ್ಕೆ ಧಕ್ಕೆ ಉಂಟು ಮಾಡುವ ಯಾವುದೇ ಚಿಂತನೆ ಹೊಂದಿಲ್ಲ. ಈ ಬಗ್ಗೆ ಯಾವುದೇ ತಪ್ಪು ಅಭಿಪ್ರಾಯ ಉಂಟಾಗುವುದು ಬೇಡ ಎಂದು ಡಿಸಿಎಂ ಮನವಿ ಮಾಡಿದ್ದಾರೆ.

ಈ ವರ್ಷದಿಂದಲೇ ಶಿಕ್ಷಣ ನೀತಿ ಜಾರಿ ಆಗುತ್ತದೆ. ಅಂದರೆ, ಮೊದಲ ವರ್ಷವನ್ನು ಶೂನ್ಯವರ್ಷ ಎಂದು ಪರಿಗಣಿಸಲಾಗಿದೆ. ಆಡಳಿತಾತ್ಮಕ-ಕಾನೂನಾತ್ಮಕ ಸಿದ್ಧತೆಗಳನ್ನು ಪ್ರಸಕ್ತ ವರ್ಷದಲ್ಲಿ  ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಅದರ ರೂಪುರೇಶೆಯಷ್ಟೇ ಸದ್ಯಕ್ಕೆ ಸಿದ್ಧವಾಗುತ್ತಿದೆ. ಕನ್ನಡ ಕಲಿಕೆಯನ್ನು ಮೊಟಕುಗೊಳಿಸಲಾಗುತ್ತದೆ ಎಂದು ಈಗಲೇ ಆತಂಕಪಡುವುದು ಬೇಡ. ಸೂಕ್ತ ಮಾಹಿತಿ ಪಡೆದುಕೊಂಡು ಗೊಂದಲ ಬಗೆಹರಿಸಿಕೊಳ್ಳಬಹುದು ಎಂದು ಡಿಸಿಎಂ ಮನವಿ ಮಾಡಿದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.