ತರಕಾರಿ ವಾಹನಕ್ಕೂ ಪ್ರವೇಶವಿಲ್ಲ
Team Udayavani, Dec 14, 2018, 11:24 AM IST
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸಾಕಷ್ಟು ಬಿಗಿಭದ್ರತೆ ಒದಗಿಸಿರುವ ನಡುವೆಯೂ ಕೈದಿಗಳಿಗೆ ಮೊಬೈಲ್ ಹಾಗೂ ಗಾಂಜಾ ಪೂರೈಸುವ ಯತ್ನ ನಡೆದಿರುವುದು ಕಾರಾಗೃಹ ಇಲಾಖೆ ಅಧಿಕಾರಿಗಳ ನಿದ್ದೆಗೆಡಿಸಿದೆ.
ಕೆಲ ದಿನಗಳ ಹಿಂದೆ ಕೈದಿಗಳ ಅಡುಗೆಗೆ ಮಾಂಸ ಪೂರೈಸುವ ವಾಹನದಲ್ಲಿ ಮೊಬೈಲ್ ಹಾಗೂ ಗಾಂಜಾ ಪತ್ತೆಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜೈಲು ಅಧಿಕಾರಿಗಳು, ಇನ್ಮುಂದೆ ಜೈಲಿನೊಳಗೆ ಆಹಾರ ಸಾಮಗ್ರಿ, ತರಕಾರಿ ಪೂರೈಕೆ ಸೇರಿದಂತೆ ಲ್ಲ ರೀತಿಯ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ. ಕೆಲವು ಅಹಿತಕರ ಘಟನೆಗಳು ನಡೆದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪರ್ಯಾಯವಾಗಿ ಜೈಲಿನ ಮುಖ್ಯ ದ್ವಾರದಲ್ಲಿಯೇ ಎಲ್ಲ ವಾಹನಗಳನ್ನು ನಿಲ್ಲಿಸಿ, ಮಾಂಸ, ತರಕಾರಿ ಸೇರಿ ಎಲ್ಲ ಸಾಮಗ್ರಿಗಳನ್ನು ಅಲ್ಲಿಯೇ ಅನ್ಲೋಡ್ ಮಾಡಿಕೊಂಡು. ನಮ್ಮದೇ ವಾಹನದಲ್ಲಿ ಅವುಗಳನ್ನು ಅಡುಗೆ ಮನೆಗೆ ತಲುಪಿಸಲಾಗುತ್ತಿದೆ ಎಂದು ಜೈಲು ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದರು.
ಮಾಂಸ ಸಾಗಣೆ ವೇಳೆ ಮೊಬೈಲ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂತರಿಕ ತನಿಖೆ ಮುಂದುವರಿಸಲಾಗಿದೆ. ಬಂಧಿತರಾಗಿದ್ದ ಮೂವರು ಆರೋಪಿಗಳ ಜತೆ ಜೈಲು ಸಿಬ್ಬಂದಿ ಅಥವಾ ಅಲ್ಲಿ ಕೆಲಸ ಮಾಡುವ ಯಾರಾದರೂ ಶಾಮೀಲಾಗಿದ್ದಾರೆಯೇ ಎಂಬ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ. ಜತೆಗೆ, ಘಟನೆ ಬಳಿಕ ಜೈಲು ಸಿಬ್ಬಂದಿಯ ಸಭೆ ಕೂಡ ನಡೆಸಲಾಗಿದೆ.
ಈ ರೀತಿಯ ಘಟನೆಗಳು ಮರುಕಳಿಸಿದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುಯತ್ತದೆ ಎಂದು ಎಚ್ಚರಿಕೆ ಕೂಡ ನೀಡಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಯಾರಿಗೆ ಕೊಡುವ ಉದ್ದೇಶದಿಂಧ ಮೊಬೈಲ್ ತರಲಾಗಿತ್ತು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ