ಅನ್ನದಾತರ ಬವಣೆ ಯಾರೂ ಪರಿಹರಿಸಿಲ್ಲ


Team Udayavani, Nov 19, 2017, 11:24 AM IST

annadatara-bavane.jpg

ಬೆಂಗಳೂರು: “ಈವರೆಗೆ ಆಡಳಿತ ನಡೆಸಿದ ಯಾವ ಸರ್ಕಾರವೂ ರೈತರ ಬವಣೆ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ. ಪ್ರಯತ್ನ ಮಾಡಿದ್ದರೂ ಯಶಸ್ವಿಯಾಗಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಜಿಕೆವಿಕೆ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳ-2017ರ 3ನೇ ದಿನವಾದ ಶನಿವಾರ ಹಾಸನ, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. 

ಸಮಾಜದಲ್ಲಿ ಬದುಕಲು ರೈತರಿಗೆ ಒಂದು ಉತ್ತಮ ವೇದಿಕೆ ಮತ್ತು ವ್ಯವಸ್ಥೆಯ ಅಗತ್ಯವಿದ್ದು, ಸ್ವಾಭಿಮಾನ, ಸ್ವಂತಿಕೆಯಿಂದ ಬದುಕಬಲ್ಲೆ ಎಂದು ಧೈರ್ಯ ತುಂಬುವ ಕೆಲಸವಾಗಬೇಕು. ಯಾವುದೇ ಸರ್ಕಾರಗಳು ಮಾಡದ ಆ ಕೆಲಸವನ್ನು ಇಂತಹ ಕೃಷಿ ಮೇಳಗಳು ನಿರ್ವಹಿಸುತ್ತಿವೆ. ಯುವಜನರಲ್ಲಿ ಕೃಷಿಯಿಂದ ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಬಲ್ಲೆ ಎಂಬ ಆತ್ಮಸ್ಥೈರ್ಯ ಬೆಳೇಸುವ ಕೆಲಸವಾಗುತ್ತಿರುವುದು ಪ್ರಶಂಸಾರ್ಹ ಎಂದರು.

ಯುವಜನರಿಗೆ ವಿಶ್ವಾಸ ಮೂಡುತ್ತಿಲ್ಲ: ಕೃಷಿಯೇ ಬೆನ್ನೆಲುಬಾಗಿರುವ ದೇಶದಲ್ಲಿ ರೈತರ ಮತ್ತು ಕೃಷಿ ಕಾರ್ಮಿಕರ ಅನೇಕ ಸಮಸ್ಯೆಗಳನ್ನು ಪರಿಹರಿಸಲು, ಅವರ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಕಾರಣ, ದೇಶದ ಜನಸಂಖ್ಯೆ ಬೆಳೆಯುತ್ತಲೇ ಇದೆ. ಸ್ವಾತಂತ್ರ್ಯಪೂರ್ವದಲ್ಲಿ ಇದ್ದ 33 ಕೋಟಿ ಜನಸಂಖ್ಯೆ ಇಂದು 130 ಕೋಟಿ ಮೀರಿದೆ.

ದುಡಿಯುವ ಕೈಗಳಿಗೆ ಉದ್ಯೋಗ ಬೇಕು ಎನ್ನುವ ಯುವಜನ ಕೃಷಿ ಆಧಾರಿತ ಉದ್ಯೋಗ ಅನುಸರಿಸಿ ಸ್ವಾಭಿಮಾನದಿಂದ ಬದುಕು ಆಗುತ್ತಿಲ್ಲ. ಕೃಷಿ ಲಾಭದಾಯಕ ವೃತ್ತಿಯಲ್ಲ, ಈ ಕ್ಷೇತ್ರಕ್ಕೆ ಮೂಲ ಸೌಲಭ್ಯಗಳೇ ಇಲ್ಲ ಎಂಬ ಅಭಿಪ್ರಾಯವಿರುವ ಕಾರಣ, ಕೃಷಿ ಮೂಲಕ ಭವಿಷ್ಯ ಕಟ್ಟಿಕೊಳ್ಳಬಲ್ಲೆ ಎನ್ನುವ ವಿಶ್ವಾಸ ಯುವಜನರಲ್ಲಿ ಮೂಡುತ್ತಿಲ್ಲ ಎಂದು ಹೇಳಿದರು.

ಹೋಟೆಲ್‌ಗ‌ಳಲ್ಲಿ ಐದಾರು ಸಾವಿರಕ್ಕೆ ದುಡಿಯುವ ಬದಲು ಯುವಕರು ತಮ್ಮದೇ ನೆಲದಲ್ಲಿ ಶ್ರಮ ವಹಿಸಿ ದುಡಿದು, ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿ ಪರಿವರ್ತಿಸಿಕೊಂಡರೆ ಭವಿಷ್ಯ ಉಜ್ವಲವಾಗುತ್ತದೆ ಎಂದ ಸಚಿವ ಸದಾನಂದಗೌಡ,

ಮಧ್ಯಮ ವರ್ಗದ ಸಣ್ಣ ಹಿಡುವಳಿದಾರರಿಗೆ ಆಧುನಿಕ ತಂತ್ರಜ್ಞಾನ ಬಳಕೆ ಕುರಿತು ಸಮಗ್ರ ಮಾಹಿತಿ ನೀಡುವಲ್ಲಿ ಕೃಷಿ ಮೇಳ ಸಹಕಾರಿಯಾಗಿದ್ದು, ಈ ಮೂಲಕ ಕೃಷಿ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕೃಷಿ ವಿವಿ ಕುಲಪತಿ ಡಾ.ಎಚ್‌.ಶಿವಣ್ಣ, ಮಂಡ್ಯ ಕೃಷಿ ಮಹಾವಿದ್ಯಾಲಯ ಡೀನ್‌ ಡಾ.ಟಿ.ಶಿವಶಂಕರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪ್ರಶಸ್ತಿ ಪ್ರದಾನ: ಹಾಸನ, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳ ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿ ಹಾಗೂ ಹಾಸನ, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳ ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿಗಳನ್ನು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಿತರಿಸಿದರು. ಅತ್ಯುತ್ತಮ ವೈಜ್ಞಾನಿಕ ಲೇಖನಗಳಿಗೆ ಡಾ.ಆರ್‌.ದ್ವಾರಕೀನಾಥ್‌ ಮತ್ತು ಪ್ರೊ.ಬಿ.ವಿ.ವೆಂಕಟರಾವ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.