ನೂರಾರು ಅನಿವಾಸಿಗಳ ವಿಳಾಸವೇ ನಾಪತ್ತೆ


Team Udayavani, Apr 9, 2020, 11:38 AM IST

bng-tdy-1

ಸಾಂದರ್ಭಿಕ ಚಿತ್ರ

ಬೆಂಗಳೂರು: ವಿದೇಶದಿಂದ ರಾಜ್ಯಕ್ಕೆ ಹಾರಿಬಂದ ಸಾವಿರಾರು ಅನಿವಾಸಿ ಭಾರತೀಯರ ಪೈಕಿ ಇನ್ನೂ ನೂರಾರು ಜನ ಪತ್ತೆಯೇ ಆಗಿಲ್ಲ! ಮಾರ್ಚ್‌ 7ರಿಂದ 22ರವರೆಗೆ 40 ಸಾವಿರಕ್ಕೂ ಅಧಿಕ ಜನ ರಾಜ್ಯಕ್ಕೆ ಬಂದಿಳಿದಿದ್ದಾರೆ. ಆ ಪೈಕಿ ಬಹುತೇಕ ಎಲ್ಲರನ್ನೂ ಪತ್ತೆ ಮಾಡಿ, ಕ್ವಾರಂಟೈನ್‌ ಮಾಡುವಲ್ಲಿ ಆರೋಗ್ಯ ಇಲಾಖೆ ಯಶಸ್ವಿಯಾಗಿದೆ.

ಇದಲ್ಲದೆ, ಇನ್ನೂ ನೂರಾರು ಸಂಖ್ಯೆಯಲ್ಲಿ ಈ “ವಿದೇಶಿ ವರ್ಗ’ ಹರಿದುಹಂಚಿ ಹೋಗಿದ್ದು, ಇದುವರೆಗೆ ಅಂತಹವರ ಸುಳಿವು ಸಿಕ್ಕಿಲ್ಲ. ಚೆಕ್‌ಔಟ್‌ ಆಗುವಾಗ ನೀಡಿದ ಮಾಹಿತಿ ಹಾಗೂ ಪಾಸ್‌ಪೋರ್ಟ್‌ ವಿಳಾಸದ ಜಾಡುಹಿಡಿದು ಆರೋಗ್ಯ ಇಲಾಖೆ, ಪೊಲೀಸರು ಮತ್ತು ಗುಪ್ತಚರ ಇಲಾಖೆ ಈಗ ಈ ನಾಪತ್ತೆಯಾದವರ ಹಿಂದೆಬಿದ್ದಿದೆ.

ಉದ್ದೇಶಪೂರ್ವಕ ಹಳೆಯ ವಿಳಾಸ?: ಬೆಂಗಳೂರಿನಂತಹ ಮಹಾನಗರಗಳಲ್ಲಿ ಮನೆಗಳನ್ನು ಆಗಾಗ್ಗೆ ಬದಲಾಯಿಸುವುದು ಮಾಮೂಲು. ಆದರೆ, ಪಾಸ್‌ಪೋರ್ಟ್‌ನಲ್ಲಿರುವ ವಿಳಾಸ ಹಲವು ವರ್ಷಗಳ ಹಿಂದಿನದ್ದಾಗಿರುತ್ತದೆ. ತಮ್ಮನ್ನೂ ಕ್ವಾರಂಟೈನ್‌ ಮಾಡಬಹುದು ಎಂಬ ಆತಂಕದಲ್ಲಿ ಪ್ರಸ್ತುತ ವಿಳಾಸವನ್ನೂ ಕೆಲವರು ಪಾಸ್‌ಪೋರ್ಟ್‌ನಲ್ಲಿದ್ದ ಮಾಹಿತಿಯನ್ನೇ ದಾಖಲಿಸಿದ್ದಾರೆ. ಹೀಗಾಗಿ, ಪತ್ತೆಹಚ್ಚುವುದು ಕಷ್ಟವಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲೇ ಎಂಟು ವಲಯಗಳಿದ್ದು, ತಲಾ ಒಂದರಲ್ಲಿ ಇಂತಹ ಸರಾಸರಿ 50 ಪ್ರಕರಣಗಳನ್ನು ಕಾಣಬಹುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದರು.

ಹಾಗಂತ, ಇವರಿಂದ ಅಪಾಯ ಕಾದಿದೆ ಎಂದಲ್ಲ; ಆದರೆ, ಸರ್ಕಾರಕ್ಕೆ ಅವರೆಲ್ಲಿದ್ದಾರೆ ಎಂಬುದಾದರೂ ಗೊತ್ತಾಗಲೇಬೇಕು. ಜತೆಗೆ ಎಲ್ಲೆಲ್ಲಿ ಓಡಾಡಿದ್ದಾರೆ ಎನ್ನುವುದೂ ತಿಳಿಯಬೇಕು. ಮಾ. 7ರಿಂದ ಲೆಕ್ಕಹಾಕಿದರೆ, ಕೆಲವರು ಈಗಾಗಲೇ 14 ದಿನಗಳ ಅವಧಿ ಪೂರೈಸಿಬಿಟ್ಟಿದ್ದಾರೆ. ಅದರಲ್ಲಿ ತಿಂಗಳ ಕೊನೆಗೆ ಬಂದವರೂ ಇದ್ದಾರೆ. ಹಾಗಾಗಿ, ನಿರ್ಲಕ್ಷಿಸುವಂತೆಯೂ ಇಲ್ಲ ಎಂದು ಅಧಿಕಾರಿಗಳು ಹೇಳಿದರು.

ಸಿಕ್ಕ ಮಾಹಿತಿ ಪೊಲೀಸರಿಗೆ ರವಾನೆ: ಉಳಿದಂತೆ ಎಲ್ಲರನ್ನೂ ಪತ್ತೆಹಚ್ಚಿ, ಜಿಪಿಎಸ್‌ ಆಧಾರಿತ ಮನೆ ವಿಳಾಸ ಸಹಿತ ಎಲ್ಲ ಮಾಹಿತಿಯನ್ನು ಆಯಾ ವ್ಯಾಪ್ತಿಗೆ ಬರುವ ಠಾಣೆಗೆ ಹಸ್ತಾಂತರಿಸಲಾಗಿದೆ. ಕ್ವಾರಂಟೈನ್‌ ಮಾಡಿ, ಕಾವಲು ಕಾಯಲಾಗುತ್ತಿದೆ. ಆದ್ದರಿಂದ ಸಮಸ್ಯೆ ಇಲ್ಲ ಎನ್ನಲಾಗಿದೆ. ಈ ಪತ್ತೆಯಾಗದ ಪ್ರಕರಣಗಳ ಸಂಬಂಧ ಹಲವು ಬಾರಿ ಆರೋಗ್ಯ ಇಲಾಖೆ ಅಧಿಕಾರಿಗಳ ಭೇಟಿಗೆ ಪ್ರಯತ್ನಿಸಿದರೂ, ಪ್ರತಿಕ್ರಿಯೆ ಸಿಗಲಿಲ್ಲ.

ಈ ಮಧ್ಯೆ ಮಹದೇವಪುರ ಸೇರಿದಂತೆ ಕೆಲವು ಕಡೆಗಳಲ್ಲಿ ಸ್ಥಳೀಯ ನಿವಾಸಿಗಳ ಸಂಘಗಳ ನೆರವಿನಿಂದ ಮನೆ-ಮನೆ ಸಮೀಕ್ಷೆ ನಡೆಸಿ, ವಿದೇಶದಿಂದ ಬಂದರೂ ಮುದ್ರೆ ಹಾಕಿರದ ನೂರಾರು ಜನರ ಮಾಹಿತಿ ಕಲೆಹಾಕಲಾಗಿದೆ. ಹಲವರು ಸ್ವಯಂಪ್ರೇರಿತವಾಗಿಯೂ ಹೆಸರು ನೋಂದಾಯಿಸಿದ್ದಾರೆ. ಕೇವಲ ಫೋರ್ಸ್‌ ಗ್ರೇಟರ್‌ ವೈಟ್‌ ಫೀಲ್ಡ್‌ ಇಂತಹ 250ಕ್ಕೂ ಅಧಿಕ ಜನರನ್ನು ಪತ್ತೆ ಮಾಡಿ, ಆರೋಗ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಸೀಗೇಹಳ್ಳಿಯ ಲಿಂಗರಾಜ ಅರಸ್‌ ತಿಳಿಸಿದರು.

ವಿಳಾಸ ಅದೇ; ವ್ಯಕ್ತಿ ಬೇರೆ! :  ದುಬೈ, ಜರ್ಮನಿ, ಅಮೆರಿಕ ಸೇರಿದಂತೆ ವಿವಿಧ ದೇಶಗಳಿಂದ ಬಂದ ಜನ ಬೆಂಗಳೂರು, ಮಂಗಳೂರು, ಮೈಸೂರು ಮತ್ತಿತರ ಮಹಾನಗರಗಳಲ್ಲಿ ಹರಿದುಹಂಚಿ ಹೋಗಿದ್ದಾರೆ. ಈ ಪೈಕಿ ಅರ್ಧಕ್ಕರ್ಧ ಅಂದರೆ ಸುಮಾರು 20 ಸಾವಿರಕ್ಕೂ ಅಧಿಕ ಜನ ಬೆಂಗಳೂರಿನಲ್ಲೇ ಇದ್ದಾರೆ. ಅದರಲ್ಲಿ ಅಂದಾಜು 800ಕ್ಕೂ ಹೆಚ್ಚು ಜನ ನೀಡಿರುವ ವಿಳಾಸಕ್ಕೆ ಭೇಟಿ ನೀಡಿದರೆ, ಆ ವ್ಯಕ್ತಿಯೇ ಇರುವುದಿಲ್ಲ. ನಂತರ ಫೋನಾಯಿಸಿದರೆ, ಸ್ವಿಚ್ಡ್ ಆಫ್ ಅಥವಾ ನಂಬರ್‌ ಅಸ್ತಿತ್ವದಲ್ಲೇ ಇರುವುದಿಲ್ಲ. ಹಾಗಾಗಿ, ಗುಪ್ತಚರ ಸಿಬ್ಬಂದಿ ನೆರವೂ ಪಡೆಯಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದರು.

 

-ವಿಜಯಕುಮಾರ್‌ ಚಂದರಗಿ 

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.