ಅಹಿಂಸೆಯೇ ಸರ್ವೋತ್ತಮ ಮಾರ್ಗ


Team Udayavani, Jul 23, 2017, 8:30 AM IST

Martin-Luther-King-3.gif

ಬೆಂಗಳೂರು: “ಅನ್ಯಾಯದ ವಿರುದ್ಧ ಹೋರಾಟ ನಡೆಸಲು ಗಾಂಧೀಜಿ ಅನುಸರಿಸಿದ ಅಹಿಂಸೆಯೇ ಉತ್ತಮ ಮಾರ್ಗ’ ಎಂದು ಅಂತಾರಾಷ್ಟ್ರೀಯ ಮಟ್ಟದ ಸಾಮಾಜಿಕ ಹೋರಾಟಗಾರ ಮಾರ್ಟಿನ್‌ ಲೂಥರ್‌ಕಿಂಗ್‌ 3 ಹೇಳಿದ್ದಾರೆ.

ಡಾ.ಬಿ.ಆರ್‌.ಅಂಬೇಡ್ಕರ್‌ ಅಂತಾ ರಾಷ್ಟ್ರೀಯ ಸಮ್ಮೇಳನದ 2ನೇ ದಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಸಮ್ಮೇಳನದ ಮೂಲಕ ಸಾಮಾಜಿಕ ನ್ಯಾಯದ ಪರ ಹೋರಾಟಗಾರರು ಒಗ್ಗೂಡಲು ವೇದಿಕೆ ಕಲ್ಪಿಸಿಕೊಡಲಾಗಿದೆ. ಈ ಎಲ್ಲಾ ಹೋರಾಟಗಾರರು ಒಗ್ಗಟ್ಟಾಗಿ ಹೋರಾಡಿದರೆ ಸಾಮಾಜಿಕ ನ್ಯಾಯ ಒದಗಿಸಿಕೊಡಬಹುದು. ಇದಕ್ಕೆ ಅಹಿಂಸೆಯೇ ಸರ್ವೋತ್ತಮ ಮಾರ್ಗ’ ಎಂದು ಹೇಳಿದರು.

“ಸಾಮಾಜಿಕ ನ್ಯಾಯದ ಪರ ಹೋರಾಟಗಾರರು ಈ ಸಮ್ಮೇಳನದ ಮೂಲಕ ಒಂದಾಗಿದ್ದೇವೆ. ನಾವು
ವಿದೇಶದಿಂದ ಬಂದವರು. ನಮ್ಮ ಮಾತಿನಿಂದ ಈ ದೇಶದ ನೀತಿಗಳು ಬದಲಾಗುವುದಿಲ್ಲ. ಇದನ್ನು ಭಾರತೀಯರೇ ಮುಂದೆ ನಿಂತು ಮಾಡಬೇಕು. ನಾವು ಕೇವಲ ಬೆಂಬಲವಾಗಿ ನಿಲ್ಲಬಹುದಷ್ಟೇ’ ಎಂದು ಅಭಿಪ್ರಾಯಪಟ್ಟರು.

“ನನ್ನ ತಂದೆ ಹೇಳಿದಂತೆ ವಿಶ್ವದ ಯಾವುದೇ ಭಾಗದಲ್ಲಿ ಅನ್ಯಾಯವಾದರೆ ಅದು ನ್ಯಾಯಕ್ಕೆ ವಿಶ್ವದೆಲ್ಲೆಡೆ
ಅನ್ಯಾಯವಾದಂತೆ. ಸಾಮಾಜಿಕ ನ್ಯಾಯದಂತಹ ಬದಲಾವಣೆ ಹೋರಾಟಕ್ಕೆ ಒಂದು ಗುಂಪು ಸಾಕು. ನನ್ನ ತಂದೆಯ
ಹೋರಾಟದಲ್ಲೂ ಸಂಖ್ಯೆ ಕಡಿಮೆಯಿತ್ತು.

ಅಹಿಂಸೆ ಎಲ್ಲ ಸಮಸ್ಯೆಗಳಿಗೆ ಪರಿಹಾರವನ್ನು ತನ್ನಿಂದ ತಾನೇ ನೀಡುತ್ತದೆ. 2011ರ ಸೆಪ್ಟೆಂಬರ್‌ನಲ್ಲಿ ಉಗ್ರರ ದಾಳಿ ನಡೆದಾಗ, ಅಮೆರಿಕ ಶತಕೋಟಿ ಖರ್ಚು ಮಾಡಿ ಪ್ರತಿ ದಾಳಿ ಮಾಡಿತು. ಆದರೆ ಉಗ್ರರ ದಾಳಿಗೆ ಕಾರಣವೇನು ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿಲ್ಲ. ಎಲ್ಲ ದೇಶದ ಸಂಸ್ಕೃತಿ ಬೇರೆ ಬೇರೆಯದ್ದಾಗಿದ್ದು, ಒಬ್ಬರನ್ನೊಬ್ಬರು ಗೌರವ ಕೊಟ್ಟು ಬದುಕಲು ಕಲಿಯಬೇಕು’ ಎಂದು ಮಾರ್ಟಿನ್‌ ಲೂಥರ್‌ ಕಿಂಗ್‌ ಅಭಿಪ್ರಾಯಪಟ್ಟರು.

“ಅಮೆರಿಕದಲ್ಲಿಯೂ ಶೋಷಣೆ ನಡೆಯುತ್ತಲೇ ಇದೆ. ಕರಿಯರ ಮೇಲೆ ಬಿಳಿಯರು ಶೋಷಣೆ ನಡೆಸುತ್ತಲೇ ಇದ್ದಾರೆ. ಅಲ್ಲಿ ಒಗ್ಗಟ್ಟಿನ ಹೋರಾಟದ ಮೂಲಕ ಶೋಷಣೆ ಮುಕ್ತರಾಗಿದ್ದೇವೆ. ಅಮೆರಿಕದಲ್ಲಿ ಕಳೆದ ಚುನಾವಣೆಯಲ್ಲಿ ಹೆಚ್ಚಿನ ಮತದಾರರು ಮತದಾನ ಮಾಡಿದ್ದರೆ ಡೊನಾಲ್ಡ್‌ ಟ್ರಂಪ್‌ ಗೆಲ್ಲುತ್ತಲೇ ಇರಲಿಲ್ಲ. ಆದರೆ ಭಾರತದ ಪರಿಸ್ಥಿತಿ ಹಾಗಲ್ಲ. ಇಲ್ಲಿ ಕೆಳ ವರ್ಗದ ಜನರ ಸಂಖ್ಯೆ ಹೆಚ್ಚಿದೆ. ಸರ್ಕಾರವೂ ಕೆಳ ವರ್ಗದ ಪರವಾಗಿ ಸೂಕ್ತ ಕಾನೂನು, ನಿಯಮ ರೂಪಿಸಿದರೆ, ನ್ಯಾಯ ದೊರಕುತ್ತದೆ’ ಎಂದು ಹೇಳಿದರು.

ನಾಯಕರ ಸ್ವಾರ್ಥದಿಂದ ದಲಿತ ಚಳವಳಿ ಒಡೆಯಿತು
ಬೆಂಗಳೂರು:
ಬಿ.ಆರ್‌. ಅಂಬೇಡ್ಕರ್‌ ಅವರ ಆಶಯಗಳನ್ನು ಕಾರ್ಯರೂಪಕ್ಕೆ ತರಲು ಹುಟ್ಟಿಕೊಂಡ ದಲಿತ ಚಳವಳಿ
ವಿಘಟನೆಗೆ ಸಿದಾಟಛಿಂತ ಅಲ್ಲ, ನಾಯಕರ ಸ್ವಾರ್ಥ ಕಾರಣ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ಅಭಿಪ್ರಾಯಪಟ್ಟಿದ್ದಾರೆ.

ಡಾ. ಬಿ.ಆರ್‌. ಅಂಬೇಡ್ಕರ್‌ ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಶನಿವಾರ ಬೆಂಗಳೂರು ಕೃಷಿ ವಿವಿ ಆವರಣದ
ಬಿ-5 ವೇದಿಕೆಯಲ್ಲಿ ಆಯೋಜಿಸಿದ್ದ “ಅಂಬೇಡ್ಕರ್‌ ವಾದ ಮತ್ತು ಕರ್ನಾಟಕದಲ್ಲಿ ದಲಿತ ಚಳವಳಿ ಯಶೋಗಾಥೆ’ ಗೋಷ್ಠಿಯಲ್ಲಿ ವಿಷಯ ಮಂಡಿಸಿದ ಅವರು, ದಲಿತ ಸಂಘಟನೆಗಳ ನಾಯಕರ ಸ್ವಾರ್ಥ ಮತ್ತು ವೈಯಕ್ತಿಕ ವಿಚಾರಗಳ ಕಾರಣಕ್ಕಾಗಿ ದಲಿತ ಚಳವಳಿ ಒಡೆದು ಹೋಯಿತು ಎಂದರು.

ದಲಿತ ಮುಖಂಡ ಎನ್‌. ಮುನಿಸ್ವಾಮಿ ಮಾತನಾಡಿ, ಅಂಬೇಡ್ಕರ್‌ ವಾದವನ್ನು ಮುನ್ನಡೆಸುತ್ತಿರುವವರನ್ನು ಇಂದು
ಮನುವಾದ ನಿಯಂತ್ರಿಸುತ್ತಿದೆ. ಅಂಬೇಡ್ಕರ ವಾದಿಗಳಿಗೆ ಮನುವಾದ ಅರ್ಥ ಮಾಡಿಕೊಳ್ಳಲು ಈಗಲೂ ಆಗಿಲ್ಲ.
ಮನುವಾದ ಅರ್ಥ ಮಾಡಿಕೊಳ್ಳದೇ ಅಂಬೇಡ್ಕರವಾದ ಕಾರ್ಯರೂಪಕ್ಕೆ ತರುವುದು ಕಷ್ಟ ಎಂದರು.

ದಸಂಸ (ಸಮತವಾದ) ರಾಜ್ಯ ಸಂಚಾಲಕ ಮೋಹನ್‌ ರಾಜ್‌ ಮಾತನಾಡಿ, ಎಪ್ಪತ್ತರ ದಶಕದ ನಂತರ ಅಂಬೇಡ್ಕರ್‌
ಆಶಯಗಳನ್ನು ಅಂತರಾಳದಲ್ಲಿ ಇಟ್ಟುಕೊಳ್ಳಲು ದಲಿತ ಚಳವಳಿ ಸೋತು ಹೋಗಿದೆ ಎಂದರು. ಗೋಷ್ಠಿಯಲ್ಲಿ ದಲಿತ
ಮುಖಂಡರಾದ ಮಾವಳ್ಳಿ ಶಂಕರ್‌, ಡಿ.ಜಿ. ಸಾಗರ್‌, ಇಂದಿರಾ ಕೃಷ್ಣಪ್ಪ, ಎನ್‌. ಮೂರ್ತಿ ಮತ್ತಿತರರು ವಿಷಯ ಮಂಡಿಸಿದರು.ಗುರುಪ್ರಸಾದ್‌ ಕೆರಗೋಡು ಅಧ್ಯಕ್ಷತೆ ವಹಿಸಿದ್ದರು.

ಭಾರತ ವಿಚಿತ್ರ ಸನ್ನಿವೇಶದಲ್ಲಿದ್ದು, ಅಂಬಾನಿ ಮತ್ತು ದೇಶದ ಬಡ ರೈತ ಇಬ್ಬರನ್ನೂ ಒಂದೇ ತಕ್ಕಡಿಯಲ್ಲಿಟ್ಟು ಆರ್ಥಿಕತೆ ಅಳೆಯಲಾಗುತ್ತಿದೆ. 
– ಶ್ರೀರಾಮರೆಡ್ಡಿ, ಸಿಪಿಐ ನಾಯಕ

ರಾಜ್ಯದಲ್ಲಿ ಕನ್ನಡ ಮಾಧ್ಯಮವನ್ನು ಕಡ್ಡಾಯ ಮಾಡಿದಾಗ ಸುಪ್ರೀಂಕೋರ್ಟ್‌ ಅದನ್ನು ತಳ್ಳಿ ಹಾಕಿತು. ಅದೇ ರೀತಿ ಗ್ರಾಮೀಣ ಕೃಪಾಂಕವನ್ನೂ ತೆಗೆದು ಹಾಕಿ ಎಲ್ಲರೂ ಸಮಾನರು ಎಂದು ಹೇಳಿತು. ಆದರೆ, ಸಾಮಾಜಿಕ ನ್ಯಾಯ ಬರಬೇಕಾದರೆ, ಹಳ್ಳಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ ಬಡ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕಾಗಿರುವುದು ಸಂಸತ್ತಿನ ಜವಾಬ್ದಾರಿ. ಸಂಸತ್ತು ಆ ಕೆಲಸ ಮಾಡುವ ಬದಲು ಕೋರ್ಟ್‌ಗೆ ಹೆದರಿ ಸುಮ್ಮನಾಗಿದೆ.
– ಬಿ.ಎಲ್‌.ಶಂಕರ್‌,
ಕಾಂಗ್ರೆಸ್‌ ಮುಖಂಡ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.