ಸಾಹಿತಿಗೆ ಪ್ರಶಸ್ತಿ ಗುರಿಯಲ್ಲ:ಕಾಯ್ಕಿಣಿ


Team Udayavani, Jan 31, 2019, 6:52 AM IST

blore-8.jpg

ಕೋಲ್ಕತಾ: ‘ಪ್ರಶಸ್ತಿಗಳು ಮ್ಯಾರಥಾನ್‌ ವೇಳೆ ಓಟಗಾರನಿಗೆ ನೀಡುವ ಚಪ್ಪಾಳೆಯ ಪ್ರೋತ್ಸಾಹವಿದ್ದಂತೆ. ಆ ಚಪ್ಪಾಳೆಗಳತ್ತ ಓಟಗಾರ ಮರುಳಾಗುವ ಹಾಗಿಲ್ಲ. ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅವಕಾಶವಿಲ್ಲ. ಓಟ ಮುಗಿಸುವುದೊಂದೇ ಅವನ ಗುರಿ. ಹಾಗಾಗಿ, ಆತ ನಿರಂತರವಾಗಿ ಸಾಗುತ್ತಲೇ ಇರಬೇಕಾಗುತ್ತದೆ’. 2018ರ ಸೌತ್‌ ಏಷ್ಯನ್‌ ಲಿಟರೇಚರ್‌ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುವ ಕನ್ನಡದ ಸಾಹಿತಿ ಜಯಂತ್‌ ಕಾಯ್ಕಿಣಿ, ತಮಗೆ ಸಂದ ಪ್ರತಿಷ್ಠಿತ ಗೌರವದ ಬಗ್ಗೆ ಹೇಳಿದ ಮಾತುಗಳಿವು.

ಕಾಯ್ಕಿಣಿ ಅವರ ಕಥೆಗಳ ಇಂಗ್ಲೀಷ್‌ ಅನುವಾದದ ಕೃತಿಯಾದ ‘ನೋ ಪ್ರಸೆಂಟ್ಸ್‌ ಪ್ಲೀಸ್‌: ಮುಂಬೈ ಸ್ಟೋರಿಸ್‌’ ಎಂಬ ಕೃತಿಗೆ ಅನುವಾದಕ ತೇಜಸ್ವಿನಿ ನಿರಂಜನ ಅವರೊಂದಿಗೆ ಪ್ರಶಸ್ತಿಯನ್ನು ಹಂಚಿಕೊಂಡಿರುವ ಅವರು, ಪಿಟಿಐನೊಂದಿಗೆ ಮನಬಿಚ್ಚಿ ಮಾತನಾಡಿದ್ದಾರೆ.

”ಅನುವಾದಿತ ಕೃತಿಯೊಂದಕ್ಕೆ ಪ್ರಶಸ್ತಿ ಬಂದಿರುವುದು ಒಳ್ಳೆಯ ವಿಚಾರವೇ. ಇದರಿಂದ, ಇತರ ಲೇಖಕರ ಕೃತಿಗಳ ಅನುವಾದಿತ ಪುಸ್ತಕಗಳನ್ನು ಮುದ್ರಿಸಲು ಮುದ್ರಕರು ಮುಂದೆ ಬರಬಹುದು. ಆದರೆ, ಈ ಪ್ರಶಸ್ತಿಗಳು ಸಾಹಿತಿಗಳಿಗೆ ಪ್ರಮುಖವಾಗಬಾರದು. ಏಕೆಂದರೆ, ಸಾಹಿತಿ ಪ್ರಶಸ್ತಿಗಾಗಿಯೇ ಸಾಹಿತ್ಯ ರಚಿಸುತ್ತಾನೆ ಎಂಬ ಅಭಿಪ್ರಾಯ ಜನರಲ್ಲಿ ಮೂಡದಂತೆ ನೋಡಬೇಕಿರುವುದು ಸಾಹಿತಿಗಳ ಜವಾಬ್ದಾರಿಯಾಗಿರುತ್ತದೆ” ಎಂದು ಅವರು ತಿಳಿಸಿದ್ದಾರೆ.

ಇನ್ನು, ಪುಸ್ತಕದ ಬಗ್ಗೆ ಮಾತನಾಡಿದ ಅವರು, ನಾನು ಈ ಕತೆಗಳನ್ನು ಸ್ಮಾರ್ಟ್‌ ಫೋನ್‌ ಯುಗದ ಆರಂಭಕ್ಕೂ ಮುನ್ನ ಬರೆದಿದ್ದೆ. ಅಸಲಿಗೆ ಮುಂಬೈ ಒಂದು ಅಧ್ಯಾತ್ಮಿಕ ನಗರ. ಹಾಸಿಗೆ ಇದ್ದಷ್ಟು ಕಾಲು ಚಾಚುವ ಸಂಸ್ಕೃತಿಯುಳ್ಳ ಜನರಿರುವ ನಗರ. ಅಂಥ ನಗರ ಜಾಗತೀಕರಣದ ರಂಗಿನಲ್ಲಿ ಹೇಗೆ ಪಲ್ಲಟಗೊಂಡಿತು? ಅಲ್ಲಿನ ಜನಜೀವನ ಹೇಗೆ ಬದಲಾಗುತ್ತಾ ಹೋಯಿತು ಎಂಬುದನ್ನು ನಾನು ಅಲ್ಲಿ ಕಳೆದ 22 ವರ್ಷದ ಜೀವನಾನುಭವದ ಮೇಲೆ ಬರೆದೆ” ಎಂದಿದ್ದಾರೆ. ಅಂದಹಾಗೆ, ಅವರ ಅನುವಾದಿತ ಕೃತಿ ಹೊಸ ತಲೆಮಾರಿನ ಓದುಗರಿಗೆ ಮುಟ್ಟಿರುವುದು ಅವರಿಗೆ ಖುಷಿ ತಂದುಕೊಟ್ಟಿದೆಯಂತೆ. ಆ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡ ಅವರು,” ಈಗ, ಇಂಗ್ಲೀಷ್‌ನಲ್ಲಿ ಅನುವಾದವಾದ ನಂತರ ಒಳ್ಳೆಯ ಪ್ರತಿಕ್ರಿಯೆಗಳು ಬರುತ್ತಿವೆ. ಹೊಸ ತಲೆಮಾರಿನ ಓದುಗರಿಗೆ ಈ ಪುಸ್ತಕ ಮುಟ್ಟಿರುವುದು ಖುಷಿ ಕೊಟ್ಟಿದೆ” ಎಂದಿದ್ದಾರೆ.

ಟಾಪ್ ನ್ಯೂಸ್

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.