ಜಿಎಸ್‌ಟಿ ಬಗ್ಗೆ ವ್ಯಾಪಾರಸ್ಥರಲ್ಲಿಲ್ಲ ಅರಿವು


Team Udayavani, Jul 1, 2017, 11:20 AM IST

gst-avinue-road.jpg

ಬೆಂಗಳೂರು: ಜಿಎಸ್‌ಟಿ ಅನುಷ್ಠಾನದಿಂದ ಆಗಬಹುದಾದ ಅನುಕೂಲ ಹಾಗೂ ಅನಾನುಕೂಲದ ಬಗ್ಗೆ ರಾಜಧಾನಿಯ ಬಹುತೇಕ ವ್ಯಾಪಾರಿಗಳಿಗೆ  ಸ್ಪಷ್ಟ ಮಾಹಿತಿಯೇ ಇಲ್ಲದಂತಿದೆ. ಅದರಲ್ಲೂ ನಗರದಲ್ಲಿ ನಿತ್ಯ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಯುವ ಕೆ.ಆರ್‌.ಮಾರುಕಟ್ಟೆ, ಅವೆನ್ಯೂರಸ್ತೆ, ಚಿಕ್ಕಪಟ್ಟೆ, ಬಳೆಪೇಟೆ, ಎಸ್‌.ಪಿ.ರಸ್ತೆ ಮೊದಲಾದ ಕಡೆಗಳಲ್ಲಿರುವ ವ್ಯಾಪಾರಸ್ಥರಿಗೆ ಜಿಎಸ್‌ಟಿ ಬಗ್ಗೆ ಮಾಹಿತಿ ಇಲ್ಲ. ಜತೆಗೆ ಅವರು ಇದರ ಬಗ್ಗೆ ತಲೆಕೆಡಿಸಿಕೊಂಡಂತೆಯೂ ಕಾಣಲ್ಲ.

ಜಿಎಸ್‌ಟಿ ಜಾರಿಯ ಮುನ್ನಾ ದಿನವಾದ ಶುಕ್ರವಾರ ಈ ಪ್ರದೇಶಗಳಿಗೆ ಭೇಟಿ ನೀಡಿದಾಗ, ಯಾವುದೇ ನಿಯಮ ಬಂದರೂ ನಮ್ಮ ವ್ಯಾಪಾರ ಹೀಗೇ ಇರುತ್ತದೆ ಬಿಡಿ ಎಂದು ಯಾವುದೇ ರೀತಿಯಲ್ಲೂ ತಲೆ ಕಡೆಸಿಕೊಳ್ಳದೇ ತಮ್ಮ ವ್ಯಾಪಾರ- ವಹಿವಾಟಿನಲ್ಲಿ ನಿರತರಾಗಿದ್ದದ್ದು ಕಂಡು ಬಂದಿತು. 

ಜಿಎಸ್‌ಟಿ ಬಗ್ಗೆ ಇಷ್ಟೆಲ್ಲಾ ಚರ್ಚೆಯಾಗುತ್ತಿದ್ದರೂ, ಇಲ್ಲಿನ ಎಲೆಕ್ಟ್ರಾನಿಕ್ಸ್‌, ಬಟ್ಟೆ, ತಾಮ್ರ ಹಾಗೂ ಕಬ್ಬಿಣದ ವ್ಯಾಪಾರಿಗಳು ಸೇರಿದಂತೆ ಯಾರನ್ನೇ ಕೇಳಿದರೂ, ಜೂನ್‌ 30ರ ವ್ಯಾಪಾರ ಹೇಗಿತ್ತೋ ಜುಲೈ 1ರಿಂದು ಅದೇ ಮುಂದುವರಿಯಲಿದೆ ಎಂದು ಸಲೀಸಾಗಿ ಹೇಳುತ್ತಾರೆ.

ಇಲ್ಲಿ ಒಂದೊಂದು ಬೀದಿಯಲ್ಲಿ ಒಂದೊಂದು ಬಗೆಯ ಬ್ರ್ಯಾಂಡೆಡ್‌ ಉತ್ಪನ್ನ ಸಿಗುತ್ತದೆ. ಬಟ್ಟೆ, ಪಾತ್ರೆಗಳು, ಎಲೆಕ್ಟ್ರಾನಿಕ್ಸ್‌ ಉತ್ಪನ್ನ, ಅಟೋಮೊಬೈಲ್‌ ಉತ್ಪನ್ನ, ಗೃಹ ಅಲಂಕಾರಿಕ ಉತ್ಪನ್ನ ಹೋಲ್‌ಸೇಲ್‌ ಖರೀದಿ,  ರಶೀದಿ ಇಲ್ಲದೇ ಅಗ್ಗದ ದರದಲ್ಲಿ ಸಿಗುತ್ತದೆ. ಈ ಎಲ್ಲಾ ಕ್ಷೇತ್ರದಲ್ಲೂ ಜಿಎಸ್‌ಟಿ ಅನ್ವಯವಾಗುವುದರಿಂದ ವ್ಯಾಪಾರಿಗಳು ಇಂದಿನಿಂದ ಹೇಗೆ ವ್ಯವಹಾರ ನಡೆಸುತ್ತಾರೆ ಎನ್ನುವುದೇ ಕೌತುಕದ ವಿಚಾರ.

ಸಗಟು ವ್ಯಾಪಾರ ಕೇಂದ್ರವೆಂದೇ ಖ್ಯಾತಿ ಪಡೆದಿರುವ  ಬೆಂಗಳೂರಿನ ಚಿಕ್ಕಪೇಟೆ, ಅವೆನ್ಯೂರಸ್ತೆ, ಎಸ್‌.ಪಿ.ರಸ್ತೆ, ಕೆ.ಆರ್‌. ಮಾರುಕಟ್ಟೆ ಮೊದಲಾದ ಸ್ಥಳಗಳಲ್ಲಿ ಎಷ್ಟೇ ವ್ಯಾಪಾರ ಮಾಡಿದರೂ, ರಶೀದಿ ಸಿಗುವುದು ಸಿಗುವುದಿಲ್ಲ. ರಶೀದಿ ಬೇಕಾದರೆ, ಹೆಚ್ಚುವರಿ ಹಣ ಪಾವತಿಸಬೇಕು. ಬ್ರ್ಯಾಂಡೆಡ್‌ ಮೊಬೈಲ್‌, ಕಂಪ್ಯೂಟರ್‌, ಲ್ಯಾಪ್‌ಟಾಲ್‌ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ಸ್‌ ವಸ್ತುಗಳು ಅಗ್ಗದ ದರದಲ್ಲಿ ರಶೀದಿ ಇಲ್ಲದೆ ದೊರೆಯುತ್ತದೆ.

ಜಿಎಸ್‌ಟಿ ಅನುಷ್ಠಾನದ ನಂತರ ಇದಕ್ಕೆಲ್ಲ ಬ್ರೇಕ್‌ ಬೀಳುತ್ತದೆಯೋ ಅಥವಾ ಜಿಎಸ್‌ಟಿ ಇಲ್ಲದೇ ಗೂಡ್ಸ್‌ ಮಾರಾಟಕ್ಕೆ ಇನ್ಯಾವುದಾದರೂ ಹೊಸ ಮಾರ್ಗ ಹುಡುಕುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ. ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಬಗ್ಗೆ ಕಳೆದ ಕೆಲವು ತಿಂಗಳಿಂದ ಬಹಳಷ್ಟು ಚರ್ಚೆ, ಸಂವಾದ, ವಿಚಾರ ಗೋಷ್ಠಿ, ತಿಳುವಳಿಕೆ ಕಾರ್ಯಗಾರ, ವ್ಯಾಪಾರಿಗಳಿಗೆ, ಸಾರ್ವಜನಿಕರಿಗೆ ಮಾಹಿತಿ ಒದಗಿಸುವುದರ ಜತೆ ಜತೆಗೆ ಸಾಮಾಜಿಕ ಜಾಲತಾಣಗಳಲ್ಲೂ ಈ ಬಗ್ಗೆ ಚರ್ಚೆ ನಡೆದಿದೆ.

ಆದರೂ, ಬಹುತೇಕರಲ್ಲಿ ಜಿಎಸ್‌ಟಿ ಬಗ್ಗೆ ಇರುವ ಗೊಂದಲ ಬಗೆಹರಿದಿಲ್ಲ. ಯಾವೆಲ್ಲ ವಸ್ತುಗಳ ದರ ಹೆಚ್ಚಾಗುತ್ತದೆ ಮತ್ತು ಯಾವುದು ಅಗ್ಗವಾಗಲಿದೆ ಎಂಬುದರ ಸ್ಪಷ್ಟತೆಯೂ ಸಿಗುತ್ತಿಲ್ಲ. ಗ್ರಾಮೀಣ ಪ್ರದೇಶದವರಿಗೆ ಮಾತ್ರವಲ್ಲ ನಗರ ಪ್ರದೇಶದ ಸುಶಿಕ್ಷಿತರಿಗೂ ಈ ಬಗ್ಗೆ ಗೊಂದಲ ಇದೆ.

ಗ್ರಾಹಕರಿಗೆ ಕಡಿಮೆ ದರದಲ್ಲಿ ಎಲ್ಲಾ ಬಗೆಯ ಎಲೆಕ್ಟ್ರಾನಿಕ್ಸ್‌ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದೇವೆ. ರಶೀದಿ ಕೇಳಿದರೆ, ನೀಡುತ್ತೇವೆ. ಮುಂದೆಯೂ ಕೊಡುತ್ತೇವೆ. ಜಿಎಸ್‌ಟಿಯಿಂದ ನಮ್ಮ ವ್ಯಾಪಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ.
-ವಿಶಾಲ್‌, ಎಲೆಕ್ಟ್ರಾನಿಕ್ಸ್‌ ವ್ಯಾಪಾರಿ, ಎಸ್‌.ಪಿ.ರಸ್ತೆ

ಹೋಲ್‌ಸೇಲ್‌ ಬಟ್ಟೆ ವ್ಯಾಪಾರಿಗಳ ಮೇಲೂ ಜಿಎಸ್‌ಟಿ ಹೇರಿರುವುದು ಸರಿಯಲ್ಲ. ಕೇಂದ್ರ ಸರ್ಕಾರ ಜವಳಿ ಮೇಲಿನ ಜಿಎಸ್‌ಟಿಯನ್ನು ಹಿಂದಕ್ಕೆ ಪಡೆಯಬೇಕು.  ಇಲ್ಲವಾದರೆ ಗ್ರಾಹಕರಿಗೆ ಅಗ್ಗದ ದರದಲ್ಲಿ ಬಟ್ಟೆ ಒದಗಿಸುವುದು ಅಸಾಧ್ಯ.
-ಕೌಶಿಕ್‌,  ಬಟ್ಟೆ ವ್ಯಾಪಾರಿ

ನಮ್ಮಂತ ಸಣ್ಣಪುಟ್ಟ ಅಂಗಡಿಗಳ ಮೇಲೆ ಜಿಎಸ್‌ಟಿ ಹೇಗೆ ಅನ್ವಯ ಆಗುತ್ತದೆ ಎಂಬುದು ಗೊತ್ತಿಲ್ಲ. ಜುಲೈ ತಿಂಗಳಲ್ಲಿ ಇದರ ಸಂಪೂರ್ಣ ಚಿತ್ರಣ ದೊರೆಯಲಿದೆ.
-ಪ್ರಸಾದ್‌, ಅವೆನ್ಯೂರಸ್ತೆ ವ್ಯಾಪಾರಿ

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.