ಸರ್ಕಾರಕ್ಕೇ ದಂಡ ಒಳ್ಳೆಯ ಬೆಳವಣಿಗೆ ಅಲ್ಲ; ಡಾ.ಪರಮೇಶ್ವರ
Team Udayavani, Dec 8, 2018, 6:00 AM IST
ಬೆಂಗಳೂರು: “ಕೆರೆಗಳ ರಕ್ಷಣೆ ವಿಚಾರದಲ್ಲಿ ನೀಡಿರುವ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್ಜಿಟಿ)ದ ಪರಿಮಿತಿಯನ್ನು ಪರಿಶೀಲಿಸಬೇಕಿದೆ’ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದರು.
ನಗರದ ನಿಸರ್ಗ ಭವನದಲ್ಲಿ ಶುಕ್ರವಾರ ಜಲ ಪರೀಕ್ಷಾ ಪ್ರಯೋಗಾಲಯ ಉದ್ಘಾಟನೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ನೀಡಿದ ತೀರ್ಪಿನ ಹಿಂದಿನ ಉದ್ದೇಶ ಒಳ್ಳೆಯದಿರಬಹುದು. ಆದರೆ, ಸರ್ಕಾರಕ್ಕೇ ದಂಡ ಹಾಕುವಂತಹದ್ದು ಉತ್ತಮ ಬೆಳವಣಿಗೆ ಅಲ್ಲ. ಅಷ್ಟಕ್ಕೂ ಸರ್ಕಾರ ಕೆರೆಗಳ ಸಂರಕ್ಷಣೆ ವಿಚಾರದಲ್ಲಿ ಕೈಕಟ್ಟಿ ಕುಳಿತಿಲ್ಲ. ಬಜೆಟ್ನಲ್ಲಿ 50 ಕೋಟಿ ರೂ. ಅನುದಾನ ನೀಡಿದ್ದು, ಪುನರುಜ್ಜೀವಗೊಳಿಸುವ ಕಾರ್ಯದಲ್ಲಿ ತೊಡಗಿದೆ. ಇಂತಹ ಸಂದರ್ಭದಲ್ಲಿ ಈ ರೀತಿಯ ಆದೇಶ ಬೇಸರ ತಂದಿದೆ ಎಂದು ಹೇಳಿದರು.
ಯಾವ ಉದ್ದೇಶ ಮತ್ತು ಆಧಾರದ ಮೇಲೆ ಎನ್ಜಿಟಿ ಆದೇಶ ನೀಡಿದೆ? ಅದರ ಪರಿಮಿತಿಗಳು ಏನು? ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕೆ ಎನ್ನುವುದು ಸೇರಿದಂತೆ ಎಲ್ಲ ಅಂಶಗಳ ಬಗ್ಗೆ ತೀರ್ಪಿನ ಪ್ರತಿ ಕೈಸೇರಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದ ಡಾ.ಪರಮೇಶ್ವರ, ನ್ಯಾಯಾಧೀಕರಣ ಸೂಚಿಸಿದ ಪ್ರಕಾರ ತಿಂಗಳಲ್ಲಿ ಪರಿಹಾರ ಅಸಾಧ್ಯ ಎಂದು ಸ್ಪಷ್ಟಪಡಿಸಿದರು.
ಬೆಳ್ಳಂದೂರು ಸೇರಿದಂತೆ ಕೆರೆಗಳು ಮಲೀನ ಆಗಿರುವುದು ಈಗ ಅಲ್ಲ; ಸುಮಾರು ದಿನಗಳಿಂದ ನಡೆಯುತ್ತಿದೆ. ಹಾಗೂ ಸ್ಥಳೀಯ ಸಂಸ್ಥೆಗಳ ಸಮನ್ವಯದ ಕೊರತೆಯಿಂದ ಮಾಲಿನ್ಯ ಹೆಚ್ಚುತ್ತಿಲ್ಲ. ಬದಲಿಗೆ ಸ್ಥಳೀಯ ನಿವಾಸಿಗಳು ಶುದ್ಧೀಕರಿಸದೆ, ನೀರನ್ನು ನೇರವಾಗಿ ಕೆರೆಗಳಿಗೆ ಬಿಡುತ್ತಿರುವುದರಿಂದ ಸಮಸ್ಯೆ ಉಂಟಾಗುತ್ತಿದೆ. ಆದ್ದರಿಂದ ಜನ ಕೂಡ ಸಹಕರಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ