ನೋಟಾ ಮತವೂ ಪರಿಣಾಮ ಬೀರುತ್ತೆ
Team Udayavani, Apr 17, 2019, 3:00 AM IST
ಬೆಂಗಳೂರು: ಬೆಂಗಳೂರಿನ ನೂರಾರು ವಿದ್ಯಾರ್ಥಿಗಳು ವಿಭಿನ್ನ ರೀತಿಯಲ್ಲಿ ಮತದಾನ ಜಾಗೃತಿ ಮೂಡಿಸುತ್ತಿದ್ದಾರೆ. ಇದಕ್ಕೆ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ವಿಭಾಗದ ವಿದ್ಯಾರ್ಥಿಗಳೂ ಕೈಜೋಡಿಸಿದ್ದು, ಬೀದಿ ನಾಟಕಗಳನ್ನು ಮಾಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯ, ರಾಜಾಜಿನಗರ, ಜಯನಗರದ ಕಾಲೇಜು ಮತ್ತು ಜನನಿಬಿಡ ಪ್ರದೇಶಗಳಲ್ಲಿ ವಿದ್ಯುನ್ಮಾನ ವಿಭಾಗದ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ. ವಿದ್ಯಾರ್ಥಿಗಳು ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅದನ್ನು ನಾಟಕದ ವಿಷಯವಸ್ತುವನ್ನಾಗಿಸಿಕೊಂಡಿದ್ದಾರೆ. 40 ವಿದ್ಯಾರ್ಥಿಗಳು 5 ತಂಡಗಳ ಮೂಲಕ ಬೀದಿ ನಾಟಕಗಳನ್ನು ಮಾಡಿದ್ದಾರೆ.
ನೋಟಾ ಕೂಡ ಹಕ್ಕು ಚಲಾವಣೆ: ನೋಟಾ ಚಲಾವಣೆಯೂ ನಿಮ್ಮ ಹಕ್ಕು ಚಲಾವಣೆಯ ಒಂದು ಭಾಗ ಎಂದು ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ನೋಟಾ ಚಲಾವಣೆಯ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. “ನೋಟಾ ಚಲಾವಣೆ ಮಾಡುವುದರಿಂದ ಯಾವುದೇ ಲಾಭ ಇಲ್ಲ ಎಂದು ಬಹಳಷ್ಟು ಜನ ಭಾವಿಸಿದ್ದಾರೆ. ಹೀಗಾಗಿ, ನೋಟಾ ಚಲಾವಣೆಯ ಆಯ್ಕೆಯನ್ನು ಸಾರ್ವಜನಿಕರು ಮಾಡುತ್ತಿಲ್ಲ’ ಎನ್ನುತ್ತಾರೆ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ವಿಭಾಗದ 2ನೇ ಸೆಮಿಸ್ಟರ್ ವಿದ್ಯಾರ್ಥಿ ಅರುಣ್.
“ಜನರಲ್ಲಿ ನೋಟಾ ಚಲಾವಣೆಯ ಬಗ್ಗೆ ನಿರಾಸಕ್ತಿ ಇದೆ. ನೋಟಾ ಚಲಾವಣೆ ಮಾಡಿದರೂ ತಮಗೆ ಬೇಡವಾದ ಅಭ್ಯರ್ಥಿ ಆಯ್ಕೆಯಾಗುತ್ತಾರೆ ಎಂದು ಮತದಾರರು ಭಾವಿಸುತ್ತಾರೆ. ಆದರೆ, ಅತೀ ಹೆಚ್ಚು ನೋಟಾ ಚಲಾವಣೆಯಾದಾಗಲೂ ಪಕ್ಷಗಳು ತಮ್ಮ ನಿಲುವು ಮತ್ತು ಅಭ್ಯರ್ಥಿಗಳನ್ನು ಬದಲಾಯಿಸಬೇಕಾಗುತ್ತದೆ’ ಎಂದು ಮತದಾರರಲ್ಲಿ ಅರಿವು ಮೂಡಿಸಲಾಗುತ್ತಿದೆ ಎನ್ನುತ್ತಾರೆ ಅರುಣ್.
“ಈ ರೀತಿ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿರುವುದರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೊಸ ಚಿಂತನೆ ಅಭಿಪ್ರಾಯಗಳನ್ನು ಸಾರ್ವಜನಿಕರು ಬೆಂಬಲಿಸಿದ್ದಾರೆ’ ಎನ್ನುತ್ತಾರೆ ವಿಭಾಗದ ಪ್ರಾಧ್ಯಾಪಕರು. ಆಮಿಷಗಳಿಗೆ ಬಲಿಯಾಗಬೇಡಿ, ಈ ಹಿಂದೆ ಗೆಲುವು ಸಾಧಿಸಿದ್ದರೂ ಯಾವುದೇ ಕೆಲಸ ಮಾಡದ ನಾಯಕರಿಗೂ ಮತ ನೀಡಬೇಡಿ ಎನ್ನುವ ವಿಷಯಗಳನ್ನು ಇಟ್ಟುಕೊಂಡು ಜಾಗೃತಿ ಮೂಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ