ಎಚ್ಡಿಕೆ ಆರೋಪದ ಬಗ್ಗೆ ಏನನ್ನೂ ಹೇಳಲಾಗದು
Team Udayavani, Jan 9, 2018, 6:25 AM IST
ಬೆಂಗಳೂರು: ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಮಂಗಳೂರು ಬಿಜೆಪಿ ಕಾರ್ಪೋರೇಟರ್ ಪಾತ್ರವಿದೆ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪದ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಸಾಧ್ಯವಿಲ್ಲ ಎಂದು ಗೃಹ ಸಚಿವ
ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ಹೇಳಿಕೆಯನ್ನು ಗಮನಿಸಿದ್ದೇನೆ. ತನಿಖೆ ನಡೆಯುವಾಗ ಯಾವುದೇ ಆರೋಪ ಮಾಡುವುದು ಸರಿಯಲ್ಲ. ತನಿಖೆ ನಡೆಯುತ್ತಿದೆ. ಪೂರ್ಣ ಗೊಂಡ ನಂತರ ಸತ್ಯಾಂಶ ತಿಳಿಯಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ಪೈಕಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತಿಬ್ಬರು ಆಸ್ಪತ್ರೆಯಲ್ಲಿದ್ದಾರೆ. ತನಿಖೆ ನಂತರವಷ್ಟೇ ಸ್ಪಷ್ಟತೆ ಸಿಗಲಿದೆ ಎಂದರು.
ಮಂಗಳೂರು ವಿಭಾಗದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಅಧಿಕಾರಿಗಳನ್ನು ಗುರುತಿಸಿ ಬೇರೆಡೆಗೆ ವರ್ಗಾಯಿಸುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಐಜಿಪಿಯಿಂದ ವರದಿ ಕೇಳಲಾಗಿದೆ ಎಂದು ಹೇಳಿದರು.
ಶೋಭಾ ರಾಜಕೀಯದಲ್ಲಿರಲು ನಾಲಾಯಕ್: ಗೃಹ ಸಚಿವರಿಗೆ ನಿಮ್ಹಾನ್ಸ್ನಲ್ಲಿ ಚಿಕಿತ್ಸೆ ಕೊಡಿಸಬೇಕೆಂಬ ಸಂಸದೆ ಶೋಭಾ ಕರಂದ್ಲಾಜೆ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ರಾಮಲಿಂಗಾರೆಡ್ಡಿ, ಶೋಭಾ ಕರಂದ್ಲಾಜೆ ಅವರು ಬಂದಿರುವುದೇ ನಿಮ್ಹಾನ್ಸ್ನಿಂದ.ನಮ್ಮ ಮನೆ ಎದುರೇ ನಿಮ್ಹಾನ್ಸ್ ಇದೆ. ನನಗೆ ಅಲ್ಲಿಗೆ ಹೋಗುವ ಅಗತ್ಯವಿಲ್ಲ. ಇದೇ ರೀತಿ ಮಾತನಾಡುತ್ತಿದ್ದರೆ ಶೋಭಾ ಕರಂದ್ಲಾಜೆ ಅವರನ್ನು ಮತ್ತೆ ಅಲ್ಲಿಗೆ ಸೇರಿಸಬೇಕಾಗುತ್ತದೆ. ಸಾರ್ವಜನಿಕ ಜೀವನದಲ್ಲಿರುವವರು ಮಾತನಾಡುವಾಗ ಎಚ್ಚರಿಕೆ ವಹಿಸಬೇಕು. ಬಾಯಿಗೆ ಬಂದಂತೆ ಮಾತನಾಡಬಾರದು. ಅವರು ರಾಜಕೀಯದಲ್ಲಿ ಇರಲು ನಾಲಾಯಕ್ ಎಂದು ತಿಳಿಸಿದರು.
ಸವಣೂರು ಗ್ರಾಮ ಪಂಚಾಯಿತಿಯಲ್ಲಿ ಎಸ್ಡಿಪಿಐ ಬೆಂಬಲ ಪಡೆದು ಬಿಜೆಪಿ ಅಧಿಕಾರ ಹಿಡಿದಿರುವುದು ಸತ್ಯ. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಸ್ಡಿಪಿಐ ಅಭ್ಯರ್ಥಿ ದೌರಾಬಿಗೆ ಬಿಜೆಪಿ ಬೆಂಬಲ ನೀಡಿದ್ದರಿಂದ 10 ಮತ ಬಂದಿತ್ತು ಎಂದು ಪತ್ರಿಕೆಯೊಂದರ ವರದಿಯನ್ನು ಸಚಿವರು ತೋರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ