ನಟ ದುನಿಯಾ ವಿಜಯ್ಗೆ ನೋಟಿಸ್
Team Udayavani, Jan 21, 2020, 3:06 AM IST
ಬೆಂಗಳೂರು: ನಟ ದುನಿಯಾ ವಿಜಯ್ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ನಡುರಸ್ತೆಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಣೆ ಹಾಗೂ “ಸಲಗ’ ಚಿತ್ರದ ಟೀಸರ್ ಬಿಡುಗಡೆ ವೇಳೆ ನಟ ದುನಿಯಾ ವಿಜಯ್ ಉದ್ದದ ಕತ್ತಿಯಿಂದ ಕೇಕ್ ಕತ್ತರಿಸುವ ಮೂಲಕ ವಿವಾದಕ್ಕೀಡಾಗಿದ್ದಾರೆ.
ಈ ಸಂಬಂಧ ಗಿರಿನಗರ ಠಾಣೆ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆ ಮತ್ತು ಸಂಚಾರ ನಿಯಮ ಉಲ್ಲಂಘನೆ ಆರೋಪದಡಿ ನೋಟಿಸ್ ಜಾರಿ ಮಾಡಲಾಗಿದೆ. ಜ.20ರಂದು ದುನಿಯಾ ವಿಜಯ್ ಅವರು 46ನೇ ಹುಟ್ಟುಹಬ್ಬವಿತ್ತು. ಈ ವೇಳೆ ಅಭಿಮಾನಿಗಳು ಗಿರಿನಗರದ ಅವರ ನಿವಾಸದ ಬಳಿ ಭಾನುವಾರ ರಾತ್ರಿ ಸೇರಿದ್ದರು.
ವಿಜಯ್, ತಮ್ಮ ಪತ್ನಿ ಹಾಗೂ ಪೋಷಕರ ಸಮ್ಮುಖದಲ್ಲಿ ಬೃಹತ್ ಗಾತ್ರದ ಕೇಕ್ ಅನ್ನು ಉದ್ದದ ಕತ್ತಿ ಮೂಲಕ ಕತ್ತರಿಸಿ, “ಸಲಗ’ ಸಿನಿಮಾದ ಒಂದೂವರೆ ನಿಮಿಷದ ಟೀಸರ್ನ್ನು ಬಿಡುಗಡೆಗೊಳಿಸಿದ್ದರು. ಈ ಸಂಬಂಧ ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ಹೇಳಿದರು.
ನೋಟಿಸ್ನಲ್ಲಿ ಏನಿದೆ?: ಹುಟ್ಟುಹಬ್ಬವನ್ನು ರಸ್ತೆಯಲ್ಲಿ ಆಚರಿಸಿದರಿಂದ ವಾಹನಗಳು ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗಿದೆ. ಸಾರ್ವಜನಿಕರ ಎದುರು ಅಪಾಯಕಾರಿ ಆಯುಧ ತಲ್ವಾರ್ನಿಂದ ಕೇಕ್ ಕತ್ತರಿಸಿದ್ದೀರಾ.
ಇದು ಶಸ್ತ್ರಾಸ್ತ್ರಗಳ ಕಾಯ್ದೆ ಉಲ್ಲಂಘನೆಯಾಗಿದೆ. ಅಲ್ಲದೆ ಅನುಮತಿ ಪಡೆಯದೇ ಡಿಜೆ ಸೌಂಡ್ ಸಿಸ್ಟಂ ಬಳಸಿ ಸಾರ್ವಜನಿಕರಿಗೆ ತೊಂದರೆ ನೀಡಲಾಗಿದೆ. ಈ ಸಂಬಂಧ ನೋಟಿಸ್ ತಲುಪಿದ ಮೂರು ದಿನದೊಳಗೆ ವಿಚಾರಣೆಗೆ ಹಾಜರಾಗಬೇಕು ಎಂದು ಪೊಲೀಸರು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು