ಆ್ಯಂಬಿಡೆಂಟ್, ಐಎಂಎ ವಂಚನೆ: ಸರ್ಕಾರಕ್ಕೆ ನೋಟಿಸ್
Team Udayavani, Jan 24, 2019, 6:36 AM IST
ಬೆಂಗಳೂರು: ಆ್ಯಂಬಿಡೆಂಟ್, ಐಎಂಎ ಗ್ರೂಪ್ ಆಫ್ ಕಂಪನೀಸ್ ಸೇರಿದಂತೆ ರಾಜ್ಯದ 12 ಖಾಸಗಿ ಹೂಡಿಕೆ ಕಂಪನಿಗಳು ಹೂಡಿಕೆದಾರರಿಂದ ಸಾವಿರಾರು ಕೋಟಿ ರೂ. ವಸೂಲಿ ಮಾಡಿ ವಂಚಿಸಿವೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬುಧವಾರ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್, ಈ ಬಗ್ಗೆ 10 ದಿನಗಳಲ್ಲಿ ಸಮಗ್ರ ಮಾಹಿತಿ ಒದಗಿಸುವಂತೆ ನಿರ್ದೇಶನ ನೀಡಿದೆ.
ಈ ಕುರಿತು ಬೆಂಗಳೂರಿನ ಇಮ್ರಾನ್ ಪಾಷಾ ಹಾಗೂ ನಾಜಿಯಾ ಬಾನು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ನೇತೃತ್ವದ ವಿಭಾಗೀಯ ನ್ಯಾಯಪೀಠ, ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಆದೇಶಿಸಿತು.
ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿರುವ 12 ಖಾಸಗಿ ಹೂಡಿಕೆ ಕಂಪನಿಗಳ ವಿರುದ್ಧ ರಾಜ್ಯದ ವಿವಿಧ ಕಡೆ ಈವರೆಗೆ ಎಷ್ಟು ಪೊಲೀಸ್ ದೂರುಗಳು ಬಂದಿವೆ. ಅದರಲ್ಲಿ ಎಷ್ಟು ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಎಷ್ಟು ಪ್ರಕರಣಗಳಲ್ಲಿ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಈ ಕಂಪನಿಗಳಲ್ಲಿ ಹೂಡಿಕೆ ಮಾಡಿರುವ ಒಟ್ಟು ಮೊತ್ತ ಎಷ್ಟು ಮತ್ತು ಎಷ್ಟು ಮಂದಿ ಹೂಡಿಕೆ ಮಾಡಿದ್ದಾರೆ ಎಂಬ ಬಗ್ಗೆ 10 ದಿನಗಳಲ್ಲಿ ಸಮಗ್ರವಾದ ಮಾಹಿತಿಯನ್ನು ನ್ಯಾಯಾಲಯದ ಮುಂದೆ ಮಂಡಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ