ಉಪನ್ಯಾಸಕರಿಗೆ ಕೋವಿಡ್ ಪರೀಕ್ಷೆಗೆ ಸೂಚನೆ

ಕಾಲೇಜು, ಹಾಸ್ಟೆಲ್‌ ಆರಂಭ ಹಿನ್ನೆಲೆ ಆರ್‌ಟಿಪಿಸಿಆರ್‌ ಮಾದರಿಯಲ್ಲಿ ಪರೀಕ್ಷೆಗೆ ಆದೇಶ

Team Udayavani, Nov 14, 2020, 2:07 PM IST

ಉಪನ್ಯಾಸಕರಿಗೆ ಕೋವಿಡ್ ಪರೀಕ್ಷೆಗೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಆರ್‌ ಟಿಪಿಸಿಆರ್‌ ಮಾದರಿಯಲ್ಲಿ ಸೋಂಕು ಪರೀಕ್ಷೆ ನಡೆಸಬೇಕು ಎಂದು ಆರೋಗ್ಯ ಇಲಾಖೆ ಆದೇಶಿಸಿದೆ.

ನ.17ರ ನಂತರ ರಾಜ್ಯದಲ್ಲಿ ಪದವಿ ಕಾಲೇಜುಗಳು ಹಾಗೂ ಹಾಸ್ಟೆಲ್‌ಗ‌ಳು ಪ್ರಾರಂಭವಾಗಲಿವೆ. ಸರ್ಕಾರದ ಸೂಚನೆ ಮೇರೆಗೆ ಉಪನ್ಯಾಸಕರು,ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಪರೀಕ್ಷೆ ನಡೆಸಿ 72 ಗಂಟೆಯೊಳಗೆ ಸೋಂಕು ಕುರಿತು ವರದಿ ಸಲ್ಲಿಸಬೇಕು. ಇದಕ್ಕಾಗಿ ಜಿಲ್ಲಾಧಿಕಾರಿಗಳು, ವಿಶೇಷ ಆಯುಕ್ತರು, ಬಿಬಿಎಂಪಿ ಆಯುಕ್ತರು ಸ್ಥಳೀಯಮಟ್ಟದ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ಪರೀಕ್ಷೆ ನಡೆಸಲು ಕ್ರಮಕೈಗೊಳ್ಳಬೇಕು. ಅಗತ್ಯ ಆರೋಗ್ಯ ಸಿಬ್ಬಂದಿ, ಪರೀಕ್ಷಾ ಕಿಟ್‌ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಸೋಂಕು ಪರೀಕ್ಷೆಗೆ ಬಂದವರ ಮೂಗು ಮತ್ತು ಗಂಟಲು ದ್ರವದ ಮಾದರಿ ಸಂಗ್ರಹಿಸಿ, ಪ್ರಯೋಗಾಲಯಗಳಿಗೆ ರವಾನಿಸಬೇಕು. ವರದಿಯ ಫಲಿತಾಂಶವನ್ನು ವ್ಯಕ್ತಿಯ ದೂರವಾಣಿ ಸಂಖ್ಯೆಗೂ ಕಳಿಸಬೇಕು. ಕಡ್ಡಾಯವಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ (ಐಸಿಎಂಆರ್‌) ಪೋರ್ಟಲ್‌ನಲ್ಲಿ ದಾಖಲಿಸಬೇಕು ಎಂದು ತಿಳಿಸಲಾಗಿದೆ.

ಪೂಲ್‌ ವಿಧಾನದಲ್ಲಿ ಪರೀಕ್ಷೆ :  ಸಂಗ್ರಹಿಸಿದ ಮೂಗು ಮತ್ತು ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಗಳು 1:5 ಪೂಲ್‌ ವಿಧಾನದಲ್ಲಿ ಪರೀಕ್ಷೆಗೊಳಪಡಿಸ ಬೇಕು. ಅಂದರೆ, ಐದು ಮಾದರಿ ಸೇರಿಸಿ ಒಮ್ಮೆಗೆ ಪರೀಕ್ಷೆ ನಡೆಸುವುದು. ಈ ರೀತಿ ಪರೀಕ್ಷೆ ನಡೆಸಿದಾಗ ವರದಿ ನೆಗೆಟಿವ್‌ ಬಂದರೆ ಎಲ್ಲಾ ಮಾದರಿಗಳ ವರದಿಯೂ ನೆಗೆಟಿವ್‌ ಆಗಿರುತ್ತದೆ. ಒಂದು ವೇಳೆ ಪಾಸಿಟಿವ್‌ ಬಂದರೆ ಮತ್ತೂಮ್ಮೆ ಪ್ರತ್ಯೇಕವಾಗಿ ಆ ಐದು ಮಾದರಿಗಳನ್ನು ಪರೀಕ್ಷೆಗೊಳಪಡಿಸಿ ನಿಖರವಾಗಿ ಯಾವ ವ್ಯಕ್ತಿಗೆ ಸೋಂಕು ತಗುಲಿದೆ ಎಂಬುದನ್ನು ಖಚಿತಪಡಿಸಿಕೊಳ್ಳ ಲಾಗುತ್ತದೆ. ಸೋಂಕಿನ ಪಾಸಿಟಿವಿಟಿ ದರ ಕಡಿಮೆ ಇದ್ದ ಪ್ರದೇಶದಲ್ಲಿ ಈ ರೀತಿ ಪೂಲ್‌ ವಿಧಾನದಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಇದರಿಂದ ಪರೀಕ್ಷೆಗಳು ವೇಗವಾಗುವ ಜತೆಗೆ ವೆಚ್ಚವೂಕಡಿಮೆಯಾಗಲಿದೆ ಎಂದು ಆರೋಗ್ಯ ಇಲಾಖೆ ನಿರ್ದೇಶಕ ಡಾ.ಓಂ ಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.