ಅಡಿಕೆ: ಎಂ.ಎಸ್‌.ರಾಮಯ್ಯಗೆ ಸಂಶೋಧನೆ ಹೊಣೆ

ಸಂಸ್ಥೆಅನ್ವಯಿಕ ವಿಜ್ಞಾನಗಳ ತಜ್ಞರಿಂದ 15 ತಿಂಗಳಲ್ಲಿ ವರದಿ

Team Udayavani, Sep 26, 2020, 11:46 AM IST

bng-tdy-03

ಬೆಂಗಳೂರು: ಅಡಿಕೆ ಕುರಿತ ಸಂಶೋಧನೆ ಹಾಗೂ ಕ್ಲಿನಿಕಲ್‌ ಟ್ರಯಲ್‌ ಕೈಗೊಳ್ಳುವ ಹೊಣೆಯನ್ನು ಪ್ರತಿಷ್ಠಿತ ಎಂ.ಎಸ್‌. ರಾಮಯ್ಯ ಸಂಸ್ಥೆಯ ಅನ್ವಯಿಕ ವಿಜ್ಞಾನ ವಿಭಾಗಕ್ಕೆ ವಹಿಸಲು ಸರ್ಕಾರ ತೀರ್ಮಾನಿಸಿದೆ.

ಅಡಿಕೆ ಕಾರ್ಯಪಡೆ ಅಧ್ಯಕ್ಷ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರನೇತೃತ್ವದಲ್ಲಿ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿಈನಿರ್ಣಯಕೈಗೊಳ್ಳಲಾಯಿತು. ಅದರಂತೆ ಮುಂದಿನ 15 ತಿಂಗಳ ಅವಧಿಯಲ್ಲಿ ಎಂ.ಎಸ್‌. ರಾಮಯ್ಯ ಸಂಸ್ಥೆಯ ಅನ್ವಯಿಕ ವಿಜ್ಞಾನಗಳ ತಜ್ಞರು ವರದಿ ಸಲ್ಲಿಸಲಿದ್ದಾರೆ. ಈ ಸಂಬಂಧ ಅವರು ರಾಜ್ಯದಲ್ಲಿ ಅಡಿಕೆ ಬೆಳೆಯುವ ಎಲ್ಲ ಪ್ರದೇಶದಿಂದ ಮಾದರಿ ಸಂಗ್ರಹಿಸಲಿದ್ದಾರೆ.

ಸಂಶೋಧನಾ ಕೇಂದ್ರಕ್ಕೆ ಮನವಿ: ತೀರ್ಥಹಳ್ಳಿಯಲ್ಲಿ ಅಡಿಕೆ ಸಂಶೋಧನಾ ಕೇಂದ್ರ ಪ್ರಾರಂಭಿಸುವುದಾಗಿ ಕಳೆದ ಚುನಾವಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭರವಸೆ ನೀಡಿದ್ದರು. ಈ ಉದ್ದೇಶಕ್ಕೆ ಹತ್ತು ಕೋಟಿ ರೂ. ಒದಗಿಸುವುದಾಗಿ ಈ ಹಿಂದೆ ಕೇಂದ್ರ ಕೃಷಿ ಸಚಿವರಾಗಿದ್ದ ರಾಧಾ ಮೋಹನ್‌ ಸಿಂಗ್‌ ಕೂಡ ಹೇಳಿದ್ದರು. ಈ ಎರಡೂ ವಿಚಾರವಾಗಿ ಅಮಿತ್‌ ಶಾ ಅವರನ್ನು ಭೇಟಿಯಾಗಿ ಪ್ರಸ್ತಾವನೆ ಸಲ್ಲಿಸುವ ನಿರ್ಣಯಕೂಡ ಇದೇ ವೇಳೆ ಕೈಗೊಳ್ಳಲಾಯಿತು.

ಹಾಗೆಯೇ ಆಮದು ಅಡಿಕೆಯ ದರ ಕೆಜಿಗೆ 250 ರೂ.ರಿಂದ 350 ರೂ.ಗೆ ಹೆಚ್ಚಿಸಲು ಕೇಂದ್ರ ವಾಣಿಜ್ಯ ಸಚಿವರಿಗೆ ಮನವಿ ಸಲ್ಲಿಸಬೇಕು. ಸ್ವೀಟ್‌ ಸುಪಾರಿ ಮತ್ತುಸೆಂಟೆಡ್‌ ಸುಪಾರಿಗಳ ಮೇಲಿನ ಜಿಎಸ್‌ಟಿ ತೆರಿಗೆ ಪ್ರಮಾಣ ಶೇ. 18ರಿಂದ ಶೇ. 13ಕ್ಕೆ ಇಳಿಸಲು ಜಿಎಸ್‌ಟಿ ಪರಿಷತ್ತಿನ ರಾಜ್ಯದ ಪ್ರತಿನಿಧಿ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ನೀಡಬೇಕು. ಅಡಿಕೆಗೆ ಸಂಬಂಧಿಸಿದ ಸಂಶೋಧನೆ ಪೂರ್ಣಗೊಳ್ಳುವವರೆಗೆ ಸುಪ್ರೀಂಕೋರ್ಟ್‌ ವಿಚಾರಣೆಗೆ ತಡೆ ಕೋರಲು ನಿರ್ಧಾರ ಕೈಗೊಳ್ಳಲಾಯಿತು.

ತೋಟಗಾರಿಕೆ ಇಲಾಖೆ ನಿರ್ದೇಶಕ ಹಾಗೂ ಕಾರ್ಯಪಡೆ ಸದಸ್ಯಕಾರ್ಯದರ್ಶಿ ವೆಂಕಟೇಶ್‌, ಅಡಿಕೆ ಕಾರ್ಯಪಡೆ ಸದಸ್ಯರಾದ ಶಿವಕುಮಾರ್‌, ಸುಬ್ರಹ್ಮಣ್ಯ, ಹರಿಪ್ರಕಾಶ ಕೋಣೆಮನೆ ಮತ್ತಿತರರು ಸಭೆಯಲ್ಲಿದ್ದರು.

ಕಾರ್ಯಪಡೆ ರಚನೆ ಬಳಿಕ ನಡೆದ ಮೂರನೇ ಸಭೆ ಇದಾಗಿದ್ದು, ಎಂ.ಎಸ್‌. ರಾಮಯ್ಯ ಸಂಸ್ಥೆಯ ಸಂಶೋಧನಾ ತಜ್ಞರೂ ಭಾಗಿಯಾಗಿದ್ದರು. ಅಡಿಕೆಗೆ ಸಂಬಂಧಿಸಿದ ಸಂಶೋಧನಾ ಚಟುವಟಿಕೆಗೆ ಏನು ಮಾಡಬುಹುದು ಎಂಬ ಬಗ್ಗೆ ಇದೇ ಸಂದರ್ಭದಲ್ಲಿ ತಜ್ಞರು ಮಾಹಿತಿ ನೀಡಿದರು.

ಅಡಿಕೆ ಕುರಿತ ಸಂಶೋಧನೆಗೆ ಎಂ.ಎಸ್‌. ರಾಮಯ್ಯ ಸಂಸ್ಥೆಯ ತಜ್ಞರು ಪ್ರಸ್ತಾವನೆ ಸಲ್ಲಿಸಿದ್ದಾರೆ. 18 ತಿಂಗಳಲ್ಲಿ ವರದಿ ಬರಲಿದೆ. ಇದಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆರಗ ಜ್ಞಾನೇಂದ್ರ, ಅಡಿಕೆ ಕಾರ್ಯಪಡೆ ಅಧ್ಯಕ್ಷ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.