ಶೇ.60 ಭಾರತೀಯರಿಗೆ ಸಾಂದರ್ಭಿಕ ನಿದ್ರಾಹೀನತೆ


Team Udayavani, Mar 26, 2023, 2:02 PM IST

tdy-10

ಬೆಂಗಳೂರು: ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ನಿದ್ರೆ ಅತ್ಯಗತ್ಯವಾದರೂ, ದೇಶದಲ್ಲಿ ಲಕ್ಷಾಂತರ ಜನ ಉತ್ತಮ ನಿದ್ದೆಯಿಂದ ವಂಚಿತರಾಗಿದ್ದಾರೆ.

ಒಬ್ಬ ವ್ಯಕ್ತಿ ತನ್ನ ಜೀವನದ ಸರಾಸರಿ ಅವಧಿಯಲ್ಲಿ 26 ವರ್ಷ(ಮೂರನೇ ಒಂದು ಭಾಗ)ಗಳನ್ನು ನಿದ್ರೆ ಯಲ್ಲಿ ಕಳೆಯುತ್ತಾನೆ. ನಿದ್ರೆಯಿಂದ ವಿಶ್ರಾಂತಿ ಪಡೆ ಯುವುದರೊಂದಿಗೆ ದೇಹವು ಸಮತೋಲನ ಹೊಂದುತ್ತದೆ. ಆದರೆ, ಬಹುತೇಕರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವುದನ್ನು ಕಂಡು ವೈಜ್ಞಾನಿಕವಾಗಿ ನಿದ್ರೆ ಮತ್ತು ನಿದ್ರಾಹೀನತೆಯ ಪ್ರಾಮುಖ್ಯಯನ್ನು ಸಾರ್ವಜನಿಕರಲ್ಲಿ ಅರಿವು ಮೂಡಿ ಸುವ ಉದ್ದೇಶದಿಂದ ವಿಶ್ವ ನಿದ್ರಾ ಸೊಸೈಟಿಯ ವಿಶ್ವ ನಿದ್ರಾ ದಿನ ಸಮಿತಿಯು 2008 ರಿಂದ ಮಾ.17ರಂದು “ವಿಶ್ವ ನಿದ್ರಾ ದಿನ’ವನ್ನಾಗಿ ಆಚರಿಸಲಾಗುತ್ತಿದೆ.

ಪಿ ಮತ್ತು ಜಿ ಸಹಯೋಗದಲ್ಲಿ ಕಾಂತರ್‌ ನಡೆಸಿದ “ಝ್ಕ್ವಿಟ್‌ ಇಂಡಿಯಾ ನ್ಯಾಷನಲ್‌ ಸ್ಲಿàಪ್‌ ಸಮೀಕ್ಷೆ’ ಪ್ರಕಾರ ಶೇ.60ರಷ್ಟು ಭಾರತೀಯರು ಸಾಂದರ್ಭಿಕ ನಿದ್ರಾಹೀನತೆಯನ್ನು ಎದುರಿಸುತ್ತಿದ್ದಾರೆ ಎಂದು ಬಹಿರಂಗವಾಗಿದೆ. ವಿಶ್ವ ನಿದ್ರಾ ದಿನವು ನಿದ್ರೆ, ನಿದ್ರೆ ಔಷಧ, ನಿದ್ರೆಯ ಬಗ್ಗೆ ಶಿಕ್ಷಣ ಮತ್ತು ದೈನಂದಿನ ಜೀವನದಲ್ಲಿ ನಿದ್ರೆಯ ಅಭಾವವು ಉಂಟುಮಾಡುವ ಸಾಮಾಜಿಕ ಪರಿಣಾಮಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಮೇಲೆ ಕೇಂದ್ರೀಕರಿಸಲಾಗಿದ್ದು, ನಿದ್ರೆಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ ಎಂದು ವೈದ್ಯಕೀಯ ಮತ್ತು ತಾಂತ್ರಿಕತೆಗಳ ಸಮೂಹ ವಿಜ್ಞಾನಿ ಡಾ. ಯಾಂಗ್‌ ಚಿಯಾತ್‌ ವಾಂಗ್‌ ತಿಳಿಸುತ್ತಾರೆ.

ಪ್ರತಿಯೊಬ್ಬರೂ ದಿನ ರಾತ್ರಿ ಕಡ್ಡಾಯವಾಗಿ 7ರಿಂದ 8 ಗಂಟೆಗಳ ಕಾಲ ನಿದ್ರೆ ಮಾಡಬೇಕು. ಇದರಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು, ರಕ್ತದೊತ್ತಡ, ತೂಕ ಹೆಚ್ಚಾಗುವುದು ಕಡಿಮೆಯಾಗುವುದರೊಂದಿಗೆ ನಾನಾ ರೀತಿಯ ಸಣ್ಣ ಕಾಯಿಲೆಗಳಿಗೆ ನಿದ್ರೆಯೇ ಉತ್ತಮ ಔಷಧಿ. ಕತ್ತಲಲ್ಲಿ ಪ್ರತಿಯೊಬ್ಬರ ಮೆದುಳಿನಲ್ಲಿ ಮೆಲೋಟನಿನ್‌ ಎಂಬ ರಸಾಯನಿಕ ಉತ್ಪತ್ತಿಯಿಂದ ನಿದ್ರೆಗೆ ಜರುಗುತ್ತಾರೆ. ಆದರೆ, ಮೊಬೈಲ್‌, ಟ್ಯಾಬ್‌, ಲ್ಯಾಪ್‌ಟಾಪ್‌, ಟಿವಿಗಳಂತಹ ಉಪಕರಣಗಳಿಂದ ಹೊರಸೂಸುವ ಬ್ಲೂಲೈಟ್‌ನಿಂದಾಗಿ ಮೆಲೋಟನಿನ್‌ ಉತ್ಪತ್ತಿಯು ತಡವಾಗುತ್ತದೆ. ಆಗ ನಿದ್ರೆಗೆ ಪ್ರಚೋದನೆ ಬದಲಾಗುವುದರಿಂದ ಮಲಗುವುದು ತಡವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ಭೌತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಕ್ಷೀಣಿಸಿದ್ದು, ಮೊಬೈಲ್‌ ಅಥವಾ ಲ್ಯಾಪ್‌ಟಾಪ್‌ನಲ್ಲಿ ಆಡುವ ಆನ್‌ಲೈನ್‌ ಗೇಮಿಂಗ್‌, ಸಾಮಾಜಿಕ ಜಾಲತಾಣಗಳನ್ನು ಹೆಚ್ಚಾಗಿ ಬಳಸುವುದರಿಂದ ಮಾನಸಿಕ ಚಂಚಲನ ಅಧಿಕವಾಗುತ್ತದೆ. ಇದರಿಂದ ಮಾನಸಿಕ ಒತ್ತಡ ಹೆಚ್ಚಾಗಿ ನಿದ್ರೆಗೆ ಭಂಗವಾಗುತ್ತದೆ ಎಂದು ನಿಮ್ಹಾನ್ಸ್‌ ಹೆಚ್ಚುವರಿ ಉಪನ್ಯಾಸಕ ಡಾ.ರೂಪೇಶ್‌ ತಿಳಿಸುತ್ತಾರೆ.

ಉತ್ತಮ ನಿದ್ದೆ ಮಾಡಲು ಸಲಹೆಗಳು :

 ನಿಯಮಿತ ನಿದ್ರೆಯ ಸಮಯಚಕ್ರವನ್ನು ಇಟ್ಟುಕೊಂಡು, ವಾರಾಂತ್ಯ ಸೇರಿದಂತೆ ಎಲ್ಲಾ ದಿನಗಳಲ್ಲಿಯೂ ಅದನ್ನು ಅನುಸರಿಸಬೇಕು.

 ಮಲಗುವ ಮುನ್ನ ಎಲೆಕ್ಟ್ರಾನಿಕ್‌ ಸಾಧನಗಳ ಬಳಕೆ ನಿಲ್ಲಿಸಿ ಮತ್ತು ಮೊಬೈಲ್‌ ಸೈಲೆಂಟ್‌ ಮಾಡಬೇಕು.  ರಾತ್ರಿ ವೇಳೆ ಕೆಫಿನ್‌ ಸೇವನೆ ಮಿತಗೊಳಿಸಿ.

 ವಿಟಮಿನ್‌ ಬಿ 6 ಹೊಂದಿರುವ ಪೂರಕಗಳು ನಿಮ್ಮ ಮನಸ್ಸನ್ನು ವಿಶ್ರಾಂತಿ ಮಾಡುತ್ತದೆ ಮತ್ತು ನಿದ್ರಿಸಲು ಸಹಾಯ ಮಾಡುತ್ತದೆ.

 ನಿಗದಿತ ಸಮಯ, ನಿರಂತರತೆ ಮತ್ತು ಆಳವಾದ ನಿದ್ರೆ ಅಭ್ಯಾಸ ಮಾಡಿಕೊಳ್ಳಿ.

 ಮಲಗುವ ಮುನ್ನ ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಿ.

ಶಾಲಾವಧಿ ಕಡಿತದಿಂದ ಪರೀಕ್ಷೆಯಲ್ಲಿ ಹೆಚ್ಚು ಅಂಕ : ಅಮೆರಿಕನ್‌ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್‌ ನಡೆಸಿದ ಸಮೀಕ್ಷೆ ಪ್ರಕಾರ ಬೆಳಗ್ಗೆ ಒಂದು ಗಂಟೆ ತಡವಾಗಿ ಶಾಲಾ ತರಗತಿಗಳನ್ನು ಪ್ರಾರಂಭಿಸಿದ್ದರಿಂದ, ಮಕ್ಕಳು ಪರೀಕ್ಷೆಯಲ್ಲಿ ಶೇ.15ರಷ್ಟು ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ ಎಂದು ವರದಿಯಾಗಿದೆ.

ನಿದ್ರೆಯು ನಮ್ಮ ದೇಹ ಮತ್ತು ಆರೋಗ್ಯಕ್ಕೆ ಅತ್ಯಗತ್ಯವಾಗಿದ್ದು, ಬಹುತೇಕರು ಇಂದಿನ ಕಳಪೆ ಜೀವನ ಶೈಲಿ, ಮಾನಸಿಕ ಒತ್ತಡವೇ ನಿದ್ರಾಹೀನತೆಗೆ ಪ್ರಮುಖ ಕಾರಣಗಳು. ಆದ್ದರಿಂದ ಉತ್ತಮ ಆಹಾರ ಮತ್ತು ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಅನಗತ್ಯ ವಿಚಾರಗಳಿಂದ ದೂರವಿರಬೇಕು. – ಡಾ. ವಸುನೇತ್ರ ಕಾಸರಗೋಡು, ಮಣಿಪಾಲ್‌ ಆಸ್ಪತ್ರೆಯ ಪಲ್ಮನಾಲಜಿ ಸಮಾಲೋಚಕರು

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.