6 ತಿಂಗಳು ಓಲಾ ಪರವಾನಗಿ ಅಮಾನತು


Team Udayavani, Mar 23, 2019, 6:55 AM IST

6tingalu.jpg

ಬೆಂಗಳೂರು: ನಗರದಲ್ಲಿ ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆ ನೀಡುವ ಓಲಾ ಸಂಸ್ಥೆ, ಕರ್ನಾಟಕ ರಾಜ್ಯ ಬೇಡಿಕೆ ಆಧಾರಿತ ಸಂಚಾರ ತಂತ್ರಜ್ಞಾನ ನಿಯಮಾವಳಿಗಳನ್ನು ಉಲ್ಲಂ ಸಿದ ಹಿನ್ನೆಲೆಯಲ್ಲಿ ಆ ಸಂಸ್ಥೆಗೆ ನೀಡಿದ ಪರವಾನಗಿ ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.

ಇತ್ತೀಚಿನ ದಿನಗಳಲ್ಲಿ ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆಗೆ ನಗರದ ಜನರು ಹೆಚ್ಚು ಮಾರು ಹೋಗಿದ್ದು, ಪರಿಣಾಮ ತಮ್ಮ ಸೇವಾ ವ್ಯಾಪ್ತಿ ವಿಸ್ತರಿಸುವ ಭರದಲ್ಲಿ ಓಲಾ ಸಂಸ್ಥೆಯು ನಿಯಮಗಳನ್ನು ಗಾಳಿಗೆ ತೂರಿ, ಆ್ಯಪ್‌ ಆಧಾರಿತ ಬೈಕ್‌ ಸಂಚಾರ ಸೇವೆ ಆರಂಭಿಸಿದೆ. ಆ ಮೂಲಕ ನಿಯಮಗಳನ್ನು ಉಲ್ಲಂ ಸಿದ ಹಿನ್ನೆಲೆಯಲ್ಲಿ ರಾಜ್ಯ ಬೇಡಿಕೆ ಆಧಾರಿತ ಸಂಚಾರ ತಂತ್ರಜ್ಞಾನ ನಿಯಮಾವಳಿಗಳು -2018ರ 11 (1)ರ ರಂತೆ ಸಂಸ್ಥೆಗೆ ನೀಡಲಾಗಿದ್ದ ಪರವಾನಗಿ ಅಮಾನತುಗೊಳಿಸಿ, ತಕ್ಷಣದಿಂದಲೇ ಸೇವೆ ಸ್ಥಗಿತಗೊಳಿಸಬೇಕೆಂದು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಸಾರಿಗೆ ಇಲಾಖೆಯ ನಿಯಮಗಳಂತೆ ಅನಿ ಟೆಕ್ನಾಲಜಿಸ್‌ ಪ್ರೈವೇಟ್‌ ಲಿಮಿಟೆಡ್‌ ಹೆಸರಿನ ಓಲಾ ಸಂಸ್ಥೆಗೆ ಕೇವಲ ಆ್ಯಪ್‌ ಆಧಾರಿತ ಮೋಟರು ಕ್ಯಾಬ್ಸ್ ಸೇವೆ ಒದಗಿಸಲು ಮಾತ್ರ ಪರವಾನಗಿ ನೀಡಲಾಗಿದೆ. ಆದರೆ, ಇತ್ತೀಚೆಗೆ ಓಲಾ ಸಂಸ್ಥೆಯು ಆ್ಯಪ್‌ ಆಧಾರಿತ ಬೈಕ್‌ ಸೇವೆಯನ್ನು ಕಾನೂನು ಬಾಹಿರವಾಗಿ ಆರಂಭಿಸಿರುವುದು ತನಿಖೆಯಿಂದ ಬಯಲಾಗಿದೆ.

ಬೆಂಗಳೂರು ನಗರದಲ್ಲಿ ನಗರ ಸಾರಿಗೆ ಸಂಪೂರ್ಣ ರಾಷ್ಟ್ರೀಕರಣವಾಗಿರುವ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಆ್ಯಪ್‌ ಮೂಲಕ ಬೈಕ್‌ ಸೇವೆ ನೀಡುತ್ತಿರುವುದು ಪರಿಶೀಲನೆಯಿಂದ ದೃಢಪಟ್ಟಿದೆ. ಆ ಹಿನ್ನೆಲೆಯಲ್ಲಿ ನಿಯಮ ಉಲ್ಲಂ ಸಿದ ಸಂಸ್ಥೆಯ ಪರವಾನಗಿ ಏಕೆ ಅಮಾನತು ಅಥವಾ ರದ್ದುಗೊಳಿಸಬಾರದು ಎಂಬುದಕ್ಕೆ ಸ್ಪಷ್ಟನೆ ನೀಡುವಂತೆ ಸಾರಿಗೆ ಇಲಾಖೆ, ಓಲಾ ಸಂಸ್ಥೆಗೆ ನೋಟಿಸ್‌ ಜಾರಿಗೊಳಿಸಿತ್ತು.

ಸಂಸ್ಥೆಯು ವಾರದೊಳಗೆ ಉತ್ತರ ಬೇಕು. ತಪ್ಪಿದ್ದಲ್ಲಿ ನಿಮ್ಮ ವಿವರಣೆ ಏನೂ ಇರುವುದಿಲ್ಲ ಎಂದು ನಿರ್ಧರಿಸಿ,  ಪರವಾನಗಿ ಅಮಾನತು ಅಥವಾ ಏಕಪಕ್ಷೀಯವಾಗಿ ರದ್ದುಗೊಳಿಸಲು ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ಇಲಾಖೆ ನೀಡಿತ್ತು. ಆದರೆ, ಓಲಾ ಸಂಸ್ಥೆಯ ಆಡಳಿತ ವರ್ಗ ಸಮಪರ್ಕವಾಗಿ ಉತ್ತರ ನೀಡದ ಹಿನ್ನೆಲೆಯಲ್ಲಿ ಆರು ತಿಂಗಳ ಮಟ್ಟಿಗೆ ಸಂಸ್ಥೆಗೆ ನೀಡಿರುವ ಪರವಾನಗಿ ಅಮಾನತುಗೊಳಿಸಿದ್ದು, ತಕ್ಷಣದಿಂದಲೇ ಸೇವೆ ಸ್ಥಗಿತಗೊಳಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳು ನೋಟಿಸ್‌ ಜಾರಿಗೊಳಿಸಿದ್ದಾರೆ.

ಸರ್ಕಾರದ ಆದೇಶಕ್ಕೆ ಬೆಲೆಯಿಲ್ಲ: ಸಾರಿಗೆ ಇಲಾಖೆಯ ಆಯುಕ್ತರು ಓಲಾ ಸಂಸ್ಥೆಗೆ ತಕ್ಷಣದಿಂದಲೇ ಸೇವೆ ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿ ಮೂರು ದಿನಗಳು ಕಳೆದಿದೆ. ಆದರೆ, ಓಲಾ ಸಂಸ್ಥೆ ಮಾತ್ರ ಸರ್ಕಾರದ ಆದೇಶಕ್ಕೆ ಮನ್ನಣೆ ನೀಡಿಲ್ಲ. ಅದರಂತೆ ಇಲಾಖೆಯ ಆದೇಶದ ನಂತರವೂ ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆಯೊಂದಿಗೆ ಕಾನೂನು ಬಾಹಿರವಾಗಿ ಬೈಕ್‌ ಸೇವೆಯನ್ನು ಮುಂದುವರಿಸುವ ಮೂಲಕ ಸರ್ಕಾರದ ಆದೇಶವನ್ನು ದಿಕ್ಕಿಸಿದ್ದಾರೆ. 

ಮುಂದಿನ ನಡೆಯೇನು?: ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಓಲಾ ಸಂಸ್ಥೆಗೆ ನೀಡಿರುವ ಪರವಾನಗಿಯನ್ನು ವಾಪಸ್‌ ನೀಡುವಂತೆ ಸಾರಿಗೆ ಇಲಾಖೆ ನೋಟಿಸ್‌ನಲ್ಲಿ ತಿಳಿಸಿದೆ. ಅದರಂತೆ ಓಲಾ ಸಂಸ್ಥೆಯವರು ಮೂರು ದಿನಗಳಲ್ಲಿ ಪರವಾನಗಿಯನ್ನು ಸಾರಿಗೆ ಇಲಾಖೆಗೆ ಸಲ್ಲಿಸಬೇಕಾಗಿದೆ. ಒಂದೊಮ್ಮೆ ಸಲ್ಲಿಸದಿದ್ದರೆ ಅಂತಹ ಕಾರುಗಳನ್ನು ಹಿಡಿದು ಜಪ್ತಿ ಮಾಡಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. 

ಓಲಾ ಸಂಸ್ಥೆ ಸ್ಪಷ್ಟನೆ: ಬೈಕ್‌ ಸೇವೆ ಕೇವಲ ಪ್ರಾಯೋಗಿಕವಷ್ಟೇ!: ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಓಲಾ ಮೂಲಸೌಕರ್ಯ, ಉತ್ತಮ ಸಂಚಾರ ವ್ಯವಸ್ಥೆ, ಹೊಸ ತಂತ್ರಜ್ಞಾನಗಳ ಬಳಕೆಯಲ್ಲಿ ಮುಂದಿದೆ. ಬೇರೆ ಸಂಸ್ಥೆಗಳು ಅನಧಿಕೃತವಾಗಿ ಬೈಕ್‌ ಸೇವೆ ಮುಂದುವರಿಸುತ್ತಿವೆ.

ಆದರೆ, ಓಲಾ ಸಂಸ್ಥೆಯಿಂದ ಸಂಚಾರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಾಯೋಗಿಕವಾಗಿ ಆರಂಭಿಸಲಾಗಿತ್ತಾದರೂ, ಕೆಲವು ತಿಂಗಳ ಹಿಂದೆಯೇ ಬೈಕ್‌ ಸೇವೆ ಸ್ಥಗಿತಗೊಳಿಸಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ದಟ್ಟಣೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕುರಿತು ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದು. ಸರ್ಕಾರ ಹೊರಡಿಸಿರುವ ಅಮಾನತು ಆದೇಶದ ಕುರಿತು ನೇರವಾಗಿ ಸರ್ಕಾರದೊಂದಿಗೆ ಮಾತನಾಡಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 

ಓಲಾ ಸಂಸ್ಥೆಯವರು ನಿಯಮಗಳನ್ನು ಗಾಳಿಗೆ ತೂರಿ  ಬೈಕ್‌ ಸೇವೆ ಆರಂಭಿಸಿದ್ದರಿಂದ ಕ್ರಮಕೈಗೊಳ್ಳುವಂತೆ ಸಂಚಾರ ಇಲಾಖೆಗೆ ದೂರು ನೀಡಲಾಗಿತ್ತು. ಅದರಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು, ಕಾನೂನು ಬಾಹಿರವಾಗಿ ಬೈಕ್‌ ಸೇವೆ ಒದಗಿಸುತ್ತಿರುವುದನ್ನು ಪತ್ತೆ ಹಚ್ಚಿದ್ದು, ನಾಲ್ಕೈದು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. 
-ತನ್ವೀರ್‌ ಪಾಷ, ರಾಜ್ಯ ಓಲಾ, ಉಬರ್‌ ಚಾಲಕರು, ಮಾಲೀಕರ ಸಂಘ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.