ಡಬ್ಬಿಂಗ್‌ ವಿರೋಧಿಸಿ 9ರಂದು ಪ್ರತಿಭಟನೆ


Team Udayavani, Mar 4, 2017, 3:50 AM IST

Vatala.jpg

ಬೆಂಗಳೂರು: ತಮಿಳಿನ ಸತ್ಯದೇವ್‌ ಐಪಿಎಸ್‌ ಚಲನಚಿತ್ರಕ್ಕೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶುಕ್ರವಾರ ಬಿಡುಗಡೆಗೊಂಡ ಚಿತ್ರದ ವಿರುದ್ಧ ಹಲವೆಡೆ ಆಕ್ರೋಶ ವ್ಯಕ್ತವಾಗಿದೆ.

ಡಬ್ಬಿಂಗ್‌ ವಿರೋಧಿಸಿ ಮಾ. 9ರಂದು ಕನ್ನಡ ಒಕ್ಕೂಟದಿಂದ ಬೃಹತ್‌ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಸಿನಿಮಾ ಹಾಗೂ ಕಿರುತೆರೆಯ ಕಲಾವಿದರು ಪ್ರತಿಭಟನೆಯಲ್ಲಿ ತಪ್ಪದೆ ಪಾಲ್ಗೊಳ್ಳಬೇಕೆಂದು ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್‌ ಮನವಿ ಮಾಡಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಹಿಂದೆ ಡಬ್ಬಿಂಗ್‌ ವಿರೋಧಿಸಿ ಮಾ.11 ರಂದು ಪ್ರತಿಭಟನೆ ನಡೆಸುವುದಾಗಿ ಹೇಳಲಾಗಿತ್ತು. ಆದರೆ, ಅಂದು ಐದು ರಾಜ್ಯಗಳ ಚುನಾವಣೆ ಫ‌ಲಿತಾಂಶ ಹೊರಬೀಳುವ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಮಾ. 9ರಂದು ಹಮ್ಮಿಕೊಳ್ಳಲಾಗಿದೆ. ಅಂದು ಮೈಸೂರು ಬ್ಯಾಂಕ್‌ ವೃತ್ತದಿಂದ ಫ್ರೀಡಂ ಪಾರ್ಕ್‌ವರೆಗೂ ಮೆರವಣಿಗೆ ನಡೆಯಲಿದೆ. ಆ ಬೃಹತ್‌ ಪ್ರತಿಭಟನಾ ಮೆರವಣಿಗೆಯಲ್ಲಿ ಕನ್ನಡ ಚಿತ್ರರಂಗದ ನಟ, ನಟಿಯರು, ಕಿರುತೆರೆಯ ಕಲಾವಿದರು, ತಂತ್ರಜ್ಞರು ಕನ್ನಡ ಸಂಘಟನೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಡಬ್ಬಿಂಗ್‌ ಸಂಸ್ಕೃತಿ ಬೇಡವೆಂದು ಆಗ್ರಹಿಸಿ ಉರಗ ತಜ್ಞ ಹಾಗೂ ಮೈಸೂರು ನಗರಪಾಲಿಕೆ ಸದಸ್ಯ ಸ್ನೇಕ್‌ ಶ್ಯಾಂ ಶುಕ್ರವಾರ ಮೈಸೂರಿನ ಡಾ.ರಾಜ್‌ಕುಮಾರ್‌ ಉದ್ಯಾನದಲ್ಲಿರುವ ಡಾ.ರಾಜ್‌ಕುಮಾರ್‌ ಪ್ರತಿಮೆ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು. ಮಂಗಳೂರಿನಲ್ಲೂ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹುಬ್ಬಳ್ಳಿಯ ರೂಪಂ ಥಿಯೇಟರ್‌ನಲ್ಲಿ ಬ್ಯಾನರ್‌ ಹರಿದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ದಾವಣಗೆರೆಯಲ್ಲಿ ಸಾರ್ವಜನಿಕರು ಆಗಮಿಸದ ಹಿನ್ನೆಲೆಯಲ್ಲಿ ಚಲನಚಿತ್ರವನ್ನು ಅರ್ಧ ತಾಸು ಮುಂದೂಡಿದರು.

ಡಬ್ಬಿಂಗ್‌ ಸಿನಿಮಾ ವೀಕ್ಷಣೆ ಬೇಡ: ಶೃತಿ
ಯಾದಗಿರಿ:
ಡಬ್ಬಿಂಗ್‌ ಸಿನಿಮಾಗಳಿಂದ ಕನ್ನಡ ಸಂಸ್ಕೃತಿ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ ಡಬ್ಬಿಂಗ್‌ ಸಿನಿಮಾ ವೀಕ್ಷಿಸಬೇಡಿ ಎಂದು ನಟಿ ಶೃತಿ ಹೇಳಿದರು. ತಾಲೂಕಿನ ಅಬ್ಬೆತುಮಕೂರಿನಲ್ಲಿ ಸಿದ್ಧಿಪುರುಷ ಶ್ರೀ ವಿಶ್ವಾರಾಧ್ಯರು ಚಲನಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಡಬ್ಬಿಂಗ್‌ ಭೂತದ ವಿರುದ್ಧ ಚಲನಚಿತ್ರ ರಂಗ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದೆ. ಆದರೂ ಸಮಸ್ಯೆ ನಿವಾರಣೆ ಆಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. 

ರಾಜ್ಯದ ಕೆಲವು ಚಿತ್ರಮಂದಿರದಲ್ಲಿ ಡಬ್ಬಿಂಗ್‌ ಸಿನಿಮಾ ಬಿಡುಗಡೆಯಾಗಿದೆ. ಚಿತ್ರಮಂದಿರದಲ್ಲಿ ಪ್ರೇಕ್ಷಕರಿಲ್ಲ. ಈ ಮೂಲಕ ಜನತೆ ಡಬ್ಬಿಂಗ್‌ ಸಿನಿಮಾ ವಿರೋಧಿಧಿಸಿದ್ದಾರೆ. ಕನ್ನಡಿಗರು ಡಬ್ಬಿಂಗ್‌ ಸಿನಿಮಾ ನೋಡದೆ ಅದರ ವಿರುದ್ಧ ಹೋರಾಟ ನಡೆಸಬೇಕೆಂದು ಸಲಹೆ ನೀಡಿದ ಅವರು, ಡಬ್ಬಿಂಗ್‌ ಸಿನಿಮಾ ವಿರೋಧಿಧಿಸಲು ದೊಡ್ಡ ಮಟ್ಟದ ಧ್ವನಿ ಎತ್ತಬೇಕಿದೆ. ನಮ್ಮ ಭಾಷೆ, ಚಿತ್ರರಂಗದ ಉಳಿವಿಗೆ ಶ್ರಮಿಸಬೇಕು. ಹೀಗಾಗಿ ಕನ್ನಡಿಗರು ಡಬ್ಬಿಂಗ್‌ ಸಿನಿಮಾಗಳನ್ನು ತಿರಸ್ಕರಿಸಬೇಕು ಎಂದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.