ಒಂದು ಎಕರೆದಲ್ಲಿ ಬೆಳೆಯುವ ಬೆಳೆ 30×40 ಸೈಟ್‌ನಲ್ಲಿ!


Team Udayavani, Nov 16, 2018, 11:38 AM IST

ondu-ekare.jpg

ಬೆಂಗಳೂರು: ಗ್ರಾಮೀಣ ಭಾಗಗಳಲ್ಲಿ ಎಕರೆಗಟ್ಟಲೆ ಜಾಗದಲ್ಲಿ ಬೆಳೆಯುವ ಬೆಳೆಗಳನ್ನು ಬೆಂಗಳೂರಿನಂತಹ ನಗರದಲ್ಲಿ ಕೇವಲ 30×40 ನಿವೇಶನದಲ್ಲೇ ಬೆಳೆದು, ಹೆಚ್ಚು ಲಾಭ ಗಳಿಸಬಹುದು! ಇದು ಏರೋಫೋನಿಕ್‌ ತಂತ್ರಜ್ಞಾನದ ಚಮತ್ಕಾರ.

ಸೆನ್ಸರ್‌ ಆಧಾರಿತ ಸಂಪೂರ್ಣ ಅಟೋಮೆಟಿಕ್‌ ಆಗಿರುವ ಈ ಏರೋಫೋನಿಕ್‌ ವ್ಯವಸ್ಥೆ ಅಡಿ ಸಣ್ಣ ನಿವೇಶನದಲ್ಲಿ ತರಕಾರಿ, ಹೂವು, ಹಣ್ಣು ಸೇರಿದಂತೆ 30ರಿಂದ 40 ಪ್ರಕಾರದ ಬೆಳೆಗಳನ್ನು ಬೆಳೆಯುವಂತಹ ತಂತ್ರಜ್ಞಾನವನ್ನು ಹೈಡ್ರೋಪೊರ್‌ ಸ್ಟಾರ್ಟ್‌ಅಪ್‌ ಕಂಪನಿ ಅಭಿವೃದ್ಧಿಪಡಿಸುತ್ತಿದೆ.

“ಈಗಾಗಲೇ ಕೃಷಿಯಲ್ಲಿ ಏರೋಫೋನಿಕ್‌ ಚಾಲ್ತಿಯಲ್ಲಿದೆ. ಆದರೆ, ಕೆಲವೇ ಕೆಲವು ಬೆಳೆಗಳಿಗೆ ಸೀಮಿತವಾಗಿದೆ. ಈಗ ಅದರ ಮುಂದುವರಿದ ಭಾಗವಾಗಿ ವಿವಿಧ ಬೆಳೆಗಳ ಜತೆ ಟೊಮೆಟೊ ಬೆಳೆಸುವ ಪ್ರಯೋಗ ಕೂಡ ನಡೆಯುತ್ತಿದೆ. ಒಂದು ಚದರ ಮೀಟರ್‌ ಯೂನಿಟ್‌ (ಕಂಬದ ಆಕಾರದಲ್ಲಿರುತ್ತದೆ)ನಲ್ಲಿ 120 ಗಿಡಗಳನ್ನು ಬೆಳೆಸಬಹುದು.

ಇದರಲ್ಲಿ 350 ಲೀ. ಸಾಮರ್ಥ್ಯದ ಟ್ಯಾಂಕರ್‌ ಇರುತ್ತದೆ. ಈ ನೀರು ಮೂರು ತಿಂಗಳಾಗುತ್ತದೆ. ಇಲ್ಲಿ ನಿರ್ವಹಣೆಗೆ ಯಾವೊಬ್ಬ ವ್ಯಕ್ತಿಯ ಅವಶ್ಯಕತೆ ಇರುವುದಿಲ್ಲ. ಯೂನಿಟ್‌ನಲ್ಲಿ ಅಳವಡಿಸಿರುವ ಸೆನ್ಸರ್‌ ಸ್ವತಃ ನೀರಿನ ಅವಶ್ಯಕತೆಯನ್ನು ನಿರ್ಧರಿಸುತ್ತದೆ’ ಎಂದು ಸ್ಮಾರ್ಟ್‌ ಅಟೋಮಸ್‌ ಫಾರ್ಮಿಂಗ್‌ ಸಲ್ಯುಷನ್ಸ್‌ನ, ಬಿ.ಮಥಿ ತುಮಿಲನ್‌ ಮಾಹಿತಿ ನೀಡಿದರು.

“ನಾವು ಇದೇ ಬೆಳೆಯನ್ನು ಪಾಲಿಹೌಸ್‌ನಲ್ಲಿ ಎಕರೆಗಟ್ಟಲೆ ಬೆಳೆಸಲು ಕನಿಷ್ಠ 35 ಲಕ್ಷ ರೂ. ಖರ್ಚಾಗುತ್ತದೆ. ಹೆಚ್ಚು ನೀರು ಕೂಡ ಬೇಕಾಗುತ್ತದೆ. ಏರೋಫೋನಿಕ್‌ ವ್ಯವಸ್ಥೆಯಲ್ಲಿ ಪ್ರತಿ ಯೂನಿಟ್‌ಗೆ 12 ಸಾವಿರ ರೂ. ಖರ್ಚಾಗುತ್ತದೆ.

ಯೂನಿಟ್‌ ಒಳಗೇ ಗಿಡಗಳ ಬೇರುಗಳಿಗೆ ಅಗತ್ಯ ಜಾಗ ಬಿಡಲಾಗಿರುತ್ತದೆ. ಈ ವಿಧಾನದಿಂದ ಪಾಲಿಹೌಸ್‌ಗೆ ಹೋಲಿಸಿದರೆ, ಇಳುವರಿ ಒಂದೂವರೆಪಟ್ಟು ಹೆಚ್ಚು ಬರುತ್ತದೆ. ಇದು ಇನ್ನೂ ಪ್ರಯೋಗ ಹಂತದಲ್ಲಿದ್ದು, ಅನುದಾನಕ್ಕಾಗಿ ಸರ್ಕಾರದ ಮೊರೆಹೋಗುತ್ತಿದ್ದೇವೆ’ ಎಂದು ಅವರು ಹೇಳಿದರು. 

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.