ಎರಡನೇ ದಿನ 17 ಸಾವಿರ ಮಂದಿ ಭೇಟಿ
Team Udayavani, Jan 19, 2020, 3:06 AM IST
ಬೆಂಗಳೂರು: ಲಾಲ್ಬಾಗ್ನಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಶನಿವಾರ 17000 ಜನರು ಕಣ್ತುಂಬಿಕೊಂಡರು.
ಮೈಸೂರಿನ ರಾಮಕೃಷ್ಣ ಮಠದ ಮುಕ್ತಿದಾನಂದ ಸ್ವಾಮೀಜಿ, ನಟಿ ಅರುಂಧತಿ ನಾಗ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಶನಿವಾರ ಲಾಲ್ಬಾಗ್ನ ಗಾಜಿನಮನೆಗೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದ ಕುರಿತ ಜೀವನ ಚರಿತ್ರೆ ಮತ್ತು ನಡೆದುಬಂದ ಹಾದಿ ಬಗ್ಗೆ ಹಾಕಲಾಗಿದ್ದ ಫಲಕಗಳು, ಹೂದೋಟ, ವಿವೇಕ ಕುಟೀರ, 16 ಅಡಿಯ ವಿವೇಕಾನಂದರ ಪ್ರತಿಮೆ, ಸ್ಮಾರಕ ಮಾದರಿಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಕ್ತಿದಾನಂದ ಸ್ವಾಮೀಜಿ, ಫಲಪುಷ್ಪ ಪ್ರದರ್ಶನವನ್ನು ತೋಟಗಾರಿಕೆ ಇಲಾಖೆ ಅಚ್ಚುಕಟ್ಟಾಗಿ ಆಯೋಜಿಸಿದೆ. ಗಾಜಿನಮನೆಯ ಸುತ್ತಲು ಅಳವಡಿ ಸಲಾಗಿರುವ ಫಲಕಗಳಲ್ಲಿ ಸ್ವಾಮಿ ವಿವೇಕಾನಂದರ ತತ್ವಗಳನ್ನು ತಿಳಿಸಲಾಗಿದೆ. ಯುವಜನತೆ ಸೇರಿದಂತೆ ಎಲ್ಲರೂ ಲಾಲ್ಬಾಗ್ಗೆ ಭೇಟಿ ನೀಡಬೇಕು ಎಂದು ಮನವಿ ಮಾಡಿದರು.
ಭಾನುವಾರ ಹೆಚ್ಚಿನ ಜನರು ಬರುವ ನಿರೀಕ್ಷೆ: ವಾರಾಂತ್ಯ, ರಜಾದಿನವಾಗಿರು ವುದರಿಂದ ಭಾನುವಾರ ಹೆಚ್ಚಿನ ಜನರು ಬರುವ ನಿರೀಕ್ಷೆ ಇದೆ. ಜನರಿಗೆ ಮೂಲ ಸೌಕರ್ಯ ಕಲ್ಪಿಸಲಾಗಿದ್ದು, ಪೊಲೀಸರ ಭದ್ರತೆ ಮತ್ತು ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
16 ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆ ಆಕರ್ಷಣಿಯವಾಗಿದ್ದು, ಗಾಜಿನಮನೆಯಲ್ಲಿ ಅಧ್ಯಾತ್ಮ ಮತ್ತು ಸಂದೇಶಗಳ ಫಲಕಗಳು ರಾರಾಜಿಸುತ್ತಿವೆ. ಬೆಂಗಳೂರು ಸೇರಿ ಸುತ್ತಲ ಊರುಗಳ ಜನ ಭೇಟಿ ನೀಡಿ, ವಿವೇಕಾನಂದರ ಬಗ್ಗೆ ತಿಳಿದುಕೊಳ್ಳಬೇಕು.
-ಅರುಂಧತಿ ನಾಗ್, ನಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ