ಒಂದು ಲಕ್ಷ ಗುಂಪು ಮನೆ ನಿರ್ಮಾಣ


Team Udayavani, Mar 1, 2019, 6:11 AM IST

ondu-laksha.jpg

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನ ಬಳಸಿ ನಗರ ವ್ಯಾಪ್ತಿಯಲ್ಲಿ ಒಂದು ಲಕ್ಷ ಗುಂಪು ಮನೆಗಳ ನಿರ್ಮಿಸಲು ರಾಜೀವ್‌ಗಾಂಧಿ ವಸತಿ ನಿಮಗಕ್ಕೆ 1,600 ಎಕರೆ ಭೂಮಿ ನೀಡಿರುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ನಗರದ ಅರಮನೆ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅರ್ಹ ಫ‌ಲಾನುಭವಿಗಳಿಗೆ ನಿವೇಶನದ ಹಕ್ಕುಪತ್ರ ವಿತರಿಸಿ ಮಾತನಾಡಿದರು.

ಬಡವರು, ರಿಕ್ಷಾ ಚಾಲಕರು, ಗಾರ್ಮೆಂಟ್ಸ್‌ ಉದ್ಯೋಗಿಗ ಅನುಕೂಲಕ್ಕಾಗಿ ಗುಂಪು ಮನೆಗಳನ್ನು ನಿರ್ಮಿಸುತ್ತಿದ್ದೇವೆ. ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು, ಈಗಾಗಲೇ 48 ಸಾವಿರ ಅರ್ಜಿ ಬಂದಿದೆ. ಟೆಂಡರ್‌ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಆದಷ್ಟು ಬೇಗ ಭೂಮಿ ಪೂಜೆ ನೆರವೇರಿಸಲಿದ್ದೇವೆ ಎಂದರು.

ಗುಂಪು ಮನೆಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಜಂಟಿಯಾಗಿ ತಲಾ 1.50 ಲಕ್ಷ ರೂ. ಒದಗಿಸಲಿದ್ದು, ಮನೆ ಮಾಲೀಕರು 1.50 ಲಕ್ಷ ರೂ. ನೀಡಬೇಕು. ಉಳಿದ ಮೂರ್‍ನಾಲ್ಕು ಲಕ್ಷ ರೂ.ಗಳನ್ನು ಸರ್ಕಾರವೇ ಭದ್ರತೆ ನೀಡಿ ಬ್ಯಾಂಕ್‌ ಸಾಲ ಸೌಲಭ್ಯ ಒದಗಿಸುತ್ತದೆ. ನಾಡಿನ ಪ್ರತಿ ಕುಟುಂಬಕ್ಕೂ ಮನೆ ಅಥವಾ ನಿವೇಶನ ಒದಗಿಸುವ ಉದ್ದೇಶದಿಂದ ನಿಯಮದಲ್ಲೂ ಬದಲಾವಣೆ ತಂದಿದ್ದೇವೆ ಎಂದು ಹೇಳಿದರು.

2006-07ರಲ್ಲಿ ಮುಖ್ಯಮಂತ್ರಿ ಆಗಿದ್ದಾಗಲೂ ಬಡವರಿಗೆ ನಿವೇಶದ ಹಕ್ಕುಪತ್ರ ಒದಗಿಸಲು ಚಾಲನೆ ನೀಡಲಾಗಿತ್ತು. ಹಿಂದಿನ ಸರ್ಕಾರ ಗುರುತಿಸಿದ್ದ ಎಲ್ಲ ನಿವೇಶನಗಳ ಹಕ್ಕು ಪತ್ರವನ್ನು ಈಗ ವಿತರಿಸುತ್ತಿದ್ದೇವೆ. 94-ಸಿ ಹಾಗೂ 94-ಸಿಸಿ ಅಡಿಯಲ್ಲಿ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಅಕ್ರಮ-ಸಕ್ರಮ ಮಾಡುತ್ತಿದ್ದೇವೆ. ಇಲ್ಲಿ ಜಾತಿ ಪ್ರಶ್ನೆಯೇ ಇಲ್ಲ ಎಂದು ವಿವರಿಸಿದರು.

ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಮಾತನಾಡಿ, 94-ಸಿ ಅಡಿಯಲ್ಲಿ 1,11,800 ಜನರಿಗೆ ಈವರೆಗೆ ಹಕ್ಕುಪತ್ರ ನೀಡಿದ್ದೇವೆ. 81,385 ಜನರಿಗೆ ಹಕ್ಕು ಪತ್ರ ನೀಡಲು ಬಾಕಿ ಇದೆ. 94-ಸಿಸಿ ಅಡಿಯಲ್ಲಿ 45,193 ಫ‌ಲಾನುಭವಿಗಳಿಗೆ ಹಕ್ಕು ಪತ್ರ ಹಂಚಿಕೆ ಮಾಡಿದ್ದು, 36,140 ಫ‌ಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಬಾಕಿ ಇದೆ ಎಂದರು.

ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದ್ದು, ಮಾ.31ರವರೆಗೂ ಅರ್ಜಿ ಸಲ್ಲುಸಲು ಅವಕಾಶವಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಂದಿರುವ ಅರ್ಜಿಗಳನ್ನು ನೋಂದಣಿ ಮಾಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇವೆ. ನಿವೇಶನದಲ್ಲೇ ಮೂಲ ಸೌಕರ್ಯ ಒದಗಿಸಲು ಚಿಂತನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ಸಂಸದ ಡಾ.ಎಂ.ವೀರಪ್ಪ ಮೊಯ್ಲಿ ಮಾತನಾಡಿ, ಅಂದು ಇಂದಿರಾ ಗಾಂಧಿಯವರು ತೆಗೆದುಕೊಂಡು ಕ್ರಾಂತಿಕಾರಿ ನಿರ್ಧಾರದಿಂದ ಬಡವರಿಗೆ ಸೂರು, ನಿವೇಶನ ಸಿಗುವಂತಾಗಿದೆ ಎಂದರು. ಮೇಯರ್‌ ಗಂಗಾಬಿಂಕೆ ಮಲ್ಲಿಕಾರ್ಜುನ್‌, ಶಾಸಕರಾದ ರೋಷನ್‌ ಬೇಗ್‌, ಬಿ.ಎನ್‌.ಸುರೇಶ್‌, ಮುನಿರತ್ನ, ವಿಧಾನ ಪರಿಷತ್‌ ಸದಸ್ಯ ರಿಜ್ವಾನ್‌ ಹರ್ಷದ್‌ ಮೊದಲಾದವರು ಇದ್ದರು. ಹತ್ತು ಸಾವಿರ ಫ‌ಲಾನುಭವಿಗಳಲ್ಲಿ ಕೆಲವರಿಗೆ ಮಾತ್ರ ಸಾಂಕೇತಿಕವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಕ್ಕುಪತ್ರ ವಿತರಣೆ ಮಾಡಿದರು.

ಸಿಎಂ ಪರಿಹಾರ ನಿಧಿಗೆ ದೇಣಿಗೆ: ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮವು ತನ್ನ 12 ಕೋಟಿ ರೂ.ಗಿಂತ ಅಧಿಕ ನಿವ್ವಳ ಲಾಭಾಂಶದಲ್ಲಿ 5 ಕೋಟಿ ರೂ.ಗಳನ್ನು ಸರ್ಕಾರಕ್ಕೆ ನೀಡಿದೆ. ಇದರಲ್ಲಿ 2.50 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಾಗೂ ಉಳಿದ 2.50 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರಕ್ಕೆ ನೀಡಿದ್ದು, ನಿಗಮದ ಅಧ್ಯಕ್ಷ ಬಿ.ಎನ್‌.ಸುರೇಶ್‌ ಚೆಕ್‌ ಅನ್ನು ಮುಖ್ಯಮಂತ್ರಿಯವರಿಗೆ ಹಸ್ತಾಂತರಿಸಿದರು.

ಟಾಪ್ ನ್ಯೂಸ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.