ಉಪ ಚುನಾವಣೆಗೆ ಆನ್‌ಲೈನ್‌ ಸ್ಪರ್ಶ

ಬಿಬಿಎಂಪಿಗೆ ಕೋವಿಡ್ ಸೋಂಕಿನ ಸವಾಲು

Team Udayavani, Sep 30, 2020, 11:23 AM IST

bng-tdy-1

ಬೆಂಗಳೂರು: ಕೋವಿಡ್ ಸೋಂಕು ಭೀತಿ ಇರುವ ಹಿನ್ನೆಲೆಯಲ್ಲಿ ಒಂದು ಮತಗಟ್ಟೆಗೆ ಒಂದು ಸಾವಿರ ಜನ ಮಾತ್ರ ಮತದಾನ ಮಾಡಬಹುದಾಗಿದೆ. ಹೀಗಾಗಿ, ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಹಾಗೂ ಚುನಾವಣಾಧಿಕಾರಿ ಎನ್‌. ಮಂಜುನಾಥ್‌ ಪ್ರಸಾದ್‌ ತಿಳಿಸಿದರು.

ರಾಜರಾಜೇಶ್ವರಿ ನಗರ ಉಪ ಚುನಾವಣೆ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆಯುಕ್ತರು, ಆರ್‌.ಆರ್‌ ನಗರದಲ್ಲಿ 381 ಮತಗಟ್ಟೆಗಳಿವೆ. ಇದರಲ್ಲಿ 307 ಮತಗಟ್ಟೆಗಳಲ್ಲಿ ಸಾವಿರಕ್ಕೂ ಹೆಚ್ಚು ಮತದಾರರಿದ್ದಾರೆ. ಕೋವಿಡ್ ಭೀತಿಹಿನ್ನೆಲೆಯಲ್ಲಿಕೇಂದ್ರ ಚುನಾವಣಾ ಆಯೋಗವು ಈ ಬಾರಿ ಕೆಲವು ನಿರ್ದಿಷ್ಟ ಸೂಚನೆಗಳನ್ನು ನೀಡಿದೆ.

ಪ್ರತಿ ಮತಗಟ್ಟೆಗೂ ಒಂದು ಸಾವಿರ ಮತದಾರರು ಮಾತ್ರ ಮತದಾನ ಮಾಡಬಹುದು ಎಂದು ನಿರ್ಬಂಧ ಹೇರಿದೆ. ಹೀಗಾಗಿ, ಈ ಭಾಗದಲ್ಲಿ ಹೆಚ್ಚು ಮತದಾರರು ಇರುವ ಮತಗಟ್ಟೆಗಳಿಗೆ ಅನುಗುಣವಾಗಿ ಮತಗಟ್ಟೆ ಸಂಖ್ಯೆ ಹೆಚ್ಚಿಸಲಾಗುವುದು ಒಟ್ಟು 688 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಸಾಧ್ಯವಾದಷ್ಟು ಸ್ಥಳಾವಕಾಶವಿರುವ ಮತಗಟ್ಟೆ ನಿರ್ಮಿಸುವುದಕ್ಕೆ ಸೂಚನೆ ನೀಡಲಾಗಿದೆ. ಕೊರೊನಾ ತಡೆಗೆ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಲು ಒಬ್ಬ ಆರೋಗ್ಯ ಅಧಿಕಾರಿ ನೇಮಕ ಹಾಗೂ ಮತದಾನದ ವೇಳೆ ಪ್ರತಿಯೊಬ್ಬ ಮತದಾರರಿಗೆ ಥರ್ಮಲ್‌ ಸ್ಕ್ಯಾನಿಂಗ್‌, ಗ್ಲೌಸ್‌ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ನಾಮಪತ್ರ ಸಲ್ಲಿಕೆ ಇಬ್ಬರಿಗೆ ಅವಕಾಶ: ಕೋವಿಡ್‌ ಭೀತಿಯಿಂದಾಗಿ ಈ ಬಾರಿ ಅಭ್ಯರ್ಥಿಯೊಂದಿಗೆ ನಾಮ ಪತ್ರ ಸಲ್ಲಿಸಲು ಇಬ್ಬರಿಗೆ ಮಾತ್ರ ಅವಕಾಶವಿದೆ. ಈ ಹಿಂದೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಐದು ಜನರಿಗೆ ಅವಕಾಶ ನೀಡಲಾಗುತ್ತಿತ್ತು. ಸಾರ್ವಜನಿಕ ಸಭೆ, ಪ್ರಚಾರ ಕಾರ್ಯಗಳಿಗೆ ನಿರ್ಬಂಧವಿಧಿಸಲಾಗಿದೆ. ಸಾರ್ವಜನಿಕ ಸಭೆಗೆ ಅನುಮತಿ ಪಡೆಯಬೇಕು ಎಂದರು. ಆನ್‌ಲೈನ್‌ನಲ್ಲಿ ನಾಮಪತ್ರ: ಅಭ್ಯರ್ಥಿಗಳು ನಾಮಪತ್ರ,ಪ್ರಮಾಣ ಪತ್ರ (ಅಫಿಡವಿಟ್‌) ಹಾಗೂ ಠೇವಣಿ ಮೊತ್ತವನ್ನು ಆನ್‌ಲೈನ್‌ನಲ್ಲಿಯೇ ಸಲ್ಲಿಸುವುದಕ್ಕೆ ಅವಕಾಶ ನೀಡಲಾಗಿದೆ. ಆದರೆ, ಅಫಿಡವಿಟ್‌ ಅನ್ನು ನೋಡಲ್‌ ಅಧಿಕಾರಿಗಳಿಗೆ ನೇರವಾಗಿ ಸಲ್ಲಿಕೆ ಮಾಡಬೇಕು ಎಂದರು.

ಪ್ರತಿ ಮತಗಟ್ಟೆಯಲ್ಲಿ ಸಹಾಯ ಕೇಂದ್ರ ಸ್ಥಾಪಿಸಲಾಗುವುದು. ಮತದಾನದ ವೇಳೆ ಜನದಟ್ಟಣೆ ಉಂಟಾದರೆ ಟೋಕನ್‌ ವ್ಯವಸ್ಥೆ ಕಲ್ಪಿಸಲಾಗುವುದು. ಟೋಕನ್‌ ಪಡೆದವರಿಗೆ ಹಾಗೂ ಥರ್ಮಲ್‌ ಸ್ಕ್ಯಾನಿಂಗ್‌ನಲ್ಲಿ ಉಷ್ಣಾಂಶ ಹೆಚ್ಚು ಕಂಡು ಬಂದ ಮತದಾರರಿಗೆ ಮತದಾನ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು.ಚುನಾವಣಾಕಾರ್ಯಕ್ಕೆಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು10 ಸಾವಿರ ಮಂದಿ ಬೇಕಾಗಲಿದೆ. ಅವರಿಗೆ ಮಾಸ್ಕ್, ಗ್ಲೌಸ್‌, ಫೇಸ್‌ ಶೀಲ್ಡ್‌, ಸ್ಯಾನಿಟೈಸರ್‌ ನೀಡಲಾಗುವುದು ಎಂದರು.

ಸೋಂಕಿತರಿಗೆ ಅಂಚೆ ಮತದಾನಕ್ಕೆ ಅವಕಾಶ : ಆರ್‌.ಆರ್‌ ನಗರ ವ್ಯಾಪ್ತಿ ಕೋವಿಡ್ ದೃಢಪಟ್ಟಿರುವ,ಕ್ಯಾರಂಟೈನ್‌ನಲ್ಲಿರುವ, ಸೋಂಕಿನ ಲಕ್ಷ ಇರುವ, ಪ್ರಥಮ, ದ್ವಿತೀಯ ಸಂಪರ್ಕಿತ ಮತದಾರರು ಹಾಗೂ 80 ವರ್ಷ ಮೇಲ್ಪಟ್ಟ ಹಿರಿಯ ಮತದಾರರಿಗೆಈಬಾರಿ ಫೋಸ್ಟಲ್‌ ಬ್ಯಾಲೆಟ್‌ (ಅಂಚೆ ಮತದಾನಕ್ಕೆ) ಮೊದಲ ಬಾರಿಗೆ ಅವಕಾಶ ನೀಡಲಾಗುತ್ತಿದೆ. ಈ ಹಿಂದೆ ಚುನಾವಣಾ ಕಾರ್ಯದಲ್ಲಿ ಭಾಗಿಯಾಗುತ್ತಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗೆ ಮಾತ್ರ ಈ ಆಯ್ಕೆ ಇತ್ತು. ಮತದಾನಕ್ಕೆ ಅಗತ್ಯ ಮುಂಜಾಗ್ರತಾಕ್ರಮಗಳ ಜತೆಗೆ ಮತಗಟ್ಟೆ ಬೂತ್‌ ಒಳಗೆ ಒಬ್ಬ ಮತದಾರರಿಗೆ ಮಾತ್ರ ಅವಕಾಶ. ಪ್ರತಿ ಮತದಾರರಿಗೆ ಸಹಿ ಮತ್ತು ಇವಿಎಂನಲ್ಲಿ ಮತದಾನ ಮಾಡುವಾಗ ಗ್ಲೌಸ್‌ ಬಳಕೆಕಡ್ಡಾಯವಾಗಿದೆ. ಮರು ಬಳಕೆಯ ಗ್ಲೌಸ್‌ ವ್ಯವಸ್ಥೆಯನ್ನು ಮತಗಟ್ಟೆಯಲ್ಲಿ ಮಾಡಲಾಗುವುದು. ಸಾಮಾಜಿಕ ಅಂತರಕ್ಕೆ ಆರು ಅಡಿ ದೂರಕ್ಕೆ ವೃತ್ತಾಕಾರದ ಗುರುತು ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.