ಮಕ್ಕಳಲ್ಲಿ ಕ್ರಿಯಾಶೀಲತೆ ಹೆಚ್ಚಿಸಲು ತೆರೆದ ಪುಸ್ತಕ ಪರೀಕ್ಷೆ ಪೂರಕ


Team Udayavani, Aug 3, 2018, 7:00 AM IST

nm.jpg

ಬೆಂಗಳೂರು: ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಎಲ್ಲವನ್ನೂ ಮಕ್ಕಳ ಮೇಲೆ ಹೇರುವಂತಹ ಪರಿಸ್ಥಿತಿಯಿದ್ದು, ಮಕ್ಕಳಲ್ಲಿ ಕ್ರಿಯಾಶೀಲತೆ ಹೆಚ್ಚಿಸಬೇಕೆಂಬ ಉದ್ದೇಶದಿಂದ ತೆರೆದ ಪುಸ್ತಕ ಪರೀಕ್ಷೆ ನಡೆಸುವ ಚಿಂತನೆ ಹೊಂದಿದ್ದೆವು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಎನ್‌.ಮಹೇಶ್‌ ಹೇಳಿದ್ದಾರೆ.

ಕರ್ನಾಟಕ ರಂಗಶಿಕ್ಷಣ ಪದವೀಧರರ ಸಂಘದ ವತಿಯಿಂದ ಗುರುವಾರ ನಗರದ ತರಳಬಾಳು ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಲೆಗಳನ್ನು ದೇವಾಲಯಗಳೆಂದು ಕರೆಯುತ್ತಾರೆ. ಆದರೆ, ಇವತ್ತಿನ ಶಿಕ್ಷಣ ವ್ಯವಸ್ಥೆಯಲ್ಲಿ ಶಾಲೆಗಳಲ್ಲಿ ಮಕ್ಕಳಿಗೆ ಪೈಶಾಚಿಕ ವಿಚಾರಗಳನ್ನು ತಲೆಗೆ ತುಂಬಲಾಗುತ್ತಿದ್ದು, ಸಂಜೆ ವೇಳೆಗೆ ಮಕ್ಕಳು ಶಾಲೆಯಿಂದ ಹೊರಗೆ ಬರುವಾಗ ಜೈಲಿನಿಂದ ಹೊರಗೆ ಬರುವಂತಿರುತ್ತಾರೆ ಎಂದು ತಿಳಿಸಿದರು.

ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಯಾವ ಪ್ರಶ್ನೆಗಳಿಗೆ ಯಾವ ಉತ್ತರ ಬರೆಯಬೇಕು ಎಂಬ ನೋಟ್ಸ್‌ ನೀಡುತ್ತಾರೆ. ಇನ್ನು ಕೆಲವು ಕಡೆಗಳಲ್ಲಿ ಪ್ರಶ್ನೆಗಳಿಗೆ ಉತ್ತರವನ್ನು ಬೋಧಿಸಲಾಗುತ್ತದ್ದು, ಇತ್ತೀಚಿನ ದಿನಗಳಲ್ಲಿ ಪಠ್ಯ ಪುಸ್ತಕಗಳಲ್ಲಿಯೇ ಇಂತಹ ಪ್ರಶ್ನೆಗೆ ಇದೇ ಉತ್ತರ ಎಂದು ಮಾರ್ಕ್‌ ಮಾಡಿಕೊಡಲಾಗುತ್ತಿದೆ. ಪಠ್ಯ ಪುಸ್ತಕದಲ್ಲಿರುವುದು ಯಥಾವತ್ತಾಗಿ ಬರೆಯುವುದರಿಂದ ಮಕ್ಕಳಲ್ಲಿ ಕ್ರಿಯಾಶೀಲತೆ ಬೆಳೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ತಿಂಗಳಿಗೊಮ್ಮೆ ನಡೆಸುವಂತಹ ತರಗತಿ ಪರೀಕ್ಷೆಗಳಲ್ಲಿ ಮಾತ್ರ ತೆರೆದ ಪುಸ್ತಕ ಪರೀಕ್ಷಾ ವಿಧಾನ ಜಾರಿಗೊಳಸಬೇಕೆಂಬ ಚಿಂತನೆಯಿತ್ತು. ಶಿಕ್ಷಕರು ಮಕ್ಕಳಿಗೆ ಗೊಂದಲಮಯ ಪ್ರಶ್ನೆಗಳನ್ನು ಕೊಟ್ಟು ಪಠ್ಯ ಪುಸ್ತಕ ನೋಡಿ ಉತ್ತರ ಬರೆಯಿರಿ ಎಂದು ಹೇಳಿದಾಗ, ಮಕ್ಕಳು ಪಠ್ಯವನ್ನು ಸಂಪೂರ್ಣವಾಗಿ ಓದಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತಾರೆ. ಒಂದೊಮ್ಮೆ ತಿಳಿಯದಿದ್ದರೆ, ಪಕ್ಕದ ವಿದ್ಯಾರ್ಥಿಗಳನ್ನು ಕೇಳಿ ಬರೆಯಲು ಅವಕಾಶ ನೀಡಿದರೆ, ಇಬ್ಬರಿಗೂ ವಿಷಯವನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಲು ಮಕ್ಕಳಿಗೆ ಸಾಧ್ಯವಾಗುತ್ತದೆ ಎಂಬುದು ಇದರ ಉದ್ದೇಶವಾಗಿದೆ ಎಂದು ಮಹೇಶ್‌ ಹೇಳಿದರು.

ಕನ್ನಡ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ
ಜಾಗತಿಕ ಮಟ್ಟದಲ್ಲಿ ಉದ್ಯೋಗ ಪಡೆಯಲು ಇಂಗ್ಲಿಷ್‌ ಅಗತ್ಯವಾದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೂ ನ್ಪೋಕನ್‌ ಇಂಗ್ಲಿಷ್‌ ತರಬೇತಿ ಕೊಡಿಸಬೇಕೆಂಬ ಚಿಂತನೆ ಸರ್ಕಾರದ ಮುಂದಿದೆಯೇ ಹೊರತು, ಸಂಪೂರ್ಣ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಬೇಕೆಂಬ ಚಿಂತನೆಯಿಲ್ಲ ಹಾಗೂ ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಸಚಿವ ಎನ್‌.ಮಹೇಶ್‌ ಸ್ಪಷ್ಟನೆ ನೀಡಿದರು.

ದೇಶದಲ್ಲಿ ಒಂದು ದೇಶ-ಒಂದು ಕಾನೂನು, ಒಂದು ದೇಶ-ಒಂದು ತೆರಿಗೆ ಎಂಬ ವ್ಯವಸ್ಥೆ ಜಾರಿಯಲ್ಲಿದೆ. ಆದರೆ, ಒಂದು ದೇಶ-ಒಂದು ಶಿಕ್ಷಣ ವ್ಯವಸ್ಥೆ ಎಂಬುದು ಜಾರಿಯಾಗಿಲ್ಲ. ಸಮಾಜದ ಆರ್ಥಿಕ ಹಾಗೂ ಸಾಮಾಜಿಕ ವ್ಯವಸ್ಥೆಗೆ ಅನುಗುಣವಾದ ಶಿಕ್ಷಣ ವ್ಯವಸ್ಥೆ ರೂಪಿಸಲಾಗಿದ್ದು, ಬಡವರಿಗೊಂದು ರೀತಿಯ ಶಿಕ್ಷಣ ಹಾಗೂ ಶ್ರೀಮಂತರಿಗೊಂದು ರೀತಿಯ ಶಿಕ್ಷಣ ದೊರೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಗೌತಮ ಬುದ್ಧ ಹಾಗೂ ಬಸವಣ್ಣನವರು ಜನರು ಮಾತನಾಡುವ ಭಾಷೆಯಲ್ಲಿ ಬೋಧನೆ ಮಾಡುತ್ತಿದ್ದರು. ಅದೇ ರೀತಿ ಮಕ್ಕಳು ಮಾತೃ ಭಾಷೆಯಲ್ಲಿ ಶಿಕ್ಷಣ ಕಲಿತರೆ ಮಾತ್ರ ಅವರಲ್ಲಿ ಜ್ಞಾನ ವಿಕಸನಗೊಂಡು, ಕ್ರಿಯಾಶೀಲ ಚಿಂತನೆ, ಅಭಿವ್ಯಕ್ತಿ ಹಾಗೂ ಸ್ವಸಾಮರ್ಥಯ ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

1-wewqeqwe

NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.