ಈಗ ಬಿಜೆಪಿ ಆಪರೇಶನ್‌ ಎಂಎಲ್‌ಸಿ


Team Udayavani, Sep 23, 2018, 6:00 AM IST

bjp-con-jds-opertiona.jpg

ಬೆಂಗಳೂರು: ರಾಜ್ಯದಲ್ಲಿ ಆಪರೇಷನ್‌ ಕಮಲ ಕಾರ್ಯಾಚರಣೆ ಪ್ರಯತ್ನ ನಡೆಯುತ್ತಿರುವುದು ಸಮ್ಮಿಶ್ರ ಸರ್ಕಾರ ಉರುಳಿಸಿ ಪರ್ಯಾಯ ಸರ್ಕಾರ ರಚನೆಗಲ್ಲ. ವಿಧಾನಪರಿಷತ್‌ ಚುನಾವಣೆಯಲ್ಲಿ ಮೂರೂ ಸ್ಥಾನ ಗೆಲ್ಲಲು…

ಇಂಥದೊಂದು ಮಾಹಿತಿ ಹೊರಬಿದ್ದಿದ್ದು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ 5 ಶಾಸಕರು ತಲಾ ಐದು ಕೋಟಿ ರೂ. ಅಡ್ವಾನ್ಸ್‌ ಸಹ ಪಡೆದಿದ್ದು ಇನ್ನೂ ಮೂರರಿಂದ ಐವರು ಶಾಸಕರಿಗೆ ಬಿಜೆಪಿ ಗಾಳ ಹಾಕಿದೆ.

ಪ್ರಸ್ತುತ ವಿಧಾನಸಭೆಯಲ್ಲಿ ಬಿಜೆಪಿ 104 ಸಂಖ್ಯಾಬಲ ಹೊಂದಿದ್ದು ಎಂಟು ಶಾಸಕರ ಬಲ ಬಿಜೆಪಿಗೆ ದೊರೆತರೆ 112 ಆಗಲಿದ್ದು ಸುಲಭವಾಗಿ ಮೂರು ವಿಧಾನಪರಿಷತ್‌ ಸೀಟು ಗೆಲ್ಲಬಹುದು. ಇದಕ್ಕಾಗಿಯೇ ಕಾರ್ಯತಂತ್ರ ರೂಪಿಸಲಾಗಿದೆ. ಇದು ಯಶಸ್ವಿಯಾದ ಬಳಿಕ ಸಮ್ಮಿಶ್ರ ಸರ್ಕಾರ  ಉರುಳಿಸುವ ಮಾಸ್ಟರ್‌ಪ್ಲ್ರಾನ್‌ ಸಿದ್ಧಪಡಿಸಲಾಗಿದೆ.

224 ಸಂಖ್ಯಾಬಲದ ವಿಧಾನಸಭೆಯಲ್ಲಿ ರಾಮನಗರ, ಜಮಖಂಡಿ ಕ್ಷೇತ್ರ ತೆರವಾಗಿದ್ದು 222 ಸದಸ್ಯರಿದ್ದಾರೆ. ಬಿಜೆಪಿಯ ಸಂಖ್ಯಾಬಲ 112 ತಲುಪಿದರೆ, ಕಾಂಗ್ರೆಸ್‌-ಜೆಡಿಎಸ್‌ನದು 110 ಕ್ಕೆ ಇಳಿಯಲಿದೆ. ಆಗ ಬಿಜೆಪಿ ಮೂರೂ ಸ್ಥಾನ ಸುಲಭವಾಗಿ ಗೆಲ್ಲಬಹುದು ಎಂಬ ಲೆಕ್ಕಾಚಾರ ಇದರ ಹಿಂದಿದೆ.

ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆ ರಹಸ್ಯ ಮತದಾನ (ಸೀಕ್ರೆಟ್‌ ಬ್ಯಾಲೆಟ್‌) ಹೀಗಾಗಿ, ಕಾಂಗ್ರೆಸ್‌-ಜೆಡಿಎಸ್‌ ಶಾಸಕರು ಬಿಜೆಪಿಯವರಿಗೆ ಕ್ರಾಸ್‌ ಓಟ್‌ ಮಾಡಿದರೂ ಗೊತ್ತಾಗುವುದಿಲ್ಲ. ಸದಸ್ಯತ್ವಕ್ಕೂ ಕುತ್ತು ಬರುವುದಿಲ್ಲ. ಹೀಗಾಗಿ, ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ವೇದಿಕೆ ಸಿದ್ಧವಾಗಿದೆ. ಈಗಾಗಲೇ ಐದು ಕೋಟಿ ರೂ. ಅಡ್ವಾನ್ಸ್‌ ಪಡೆದಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರು ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕುವ ಭರವಸೆ ನೀಡಿದ್ದು, ತಮ್ಮ ಹೆಸರು ಬಹಿರಂಗಪಡಿಸಬಾರದು ಎಂದು ಬಿಜೆಪಿ ನಾಯಕರಿಗೆ ದುಂಬಾಲು ಬಿದ್ದಿದ್ದಾರೆ. ಕೆಲವರು ದೇವರ ಮತ್ತು ಕುಟುಂಬದವರ ಮೇಲೆ ಆಣೆ ಪ್ರಮಾಣ ಸಹ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಮೂರು ಸ್ಥಾನಗಳ ಭರ್ತಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಿರುವುದರಿಂದ ಒಬ್ಬ ಅಭ್ಯರ್ಥಿಗೆ 111 ರಿಂದ 112 ಮತ ಬೇಕಾಗಬಹುದು. ಹೀಗಾಗಿ, ಬಿಜೆಪಿ 112 ಟಾರ್ಗೆಟ್‌ ಇಟ್ಟುಕೊಂಡಿದೆ. ಒರ್ವ ಸಚಿವ ಸೇರಿದಂತೆ 10 ಶಾಸಕರನ್ನು ಸಂಪರ್ಕಿಸಿದೆ ಎಂದು ಹೇಳಲಾಗಿದೆ.

ಬಿಜೆಪಿಯಿಂದ ವಿಧಾನಪರಿಷತ್‌ ಸದಸ್ಯರಾಗಲು ಬಯಸಿರುವವರು “ಬಂಡವಾಳ’ ಹಾಕಿದ್ದು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರಿಗೆ ಅಡ್ವಾನ್ಸ್‌ ನೀಡಿದ್ದಾರೆ. ಆಪರೇಷನ್‌ ಎಂಎಲ್‌ಸಿ ಕಾರ್ಯಾಚರಣೆ ನಡೆಸಿ ಆ ಮೂಲಕ ಗಾಳಕ್ಕೆ ಸಿಕ್ಕವರನ್ನು ಬಿಜೆಪಿಯತ್ತ ಸೆಳೆಯುವುದು ನಾಯಕರ ಗುರಿ ಎಂದು ತಿಳಿದು ಬಂದಿದೆ.ಆದರೆ, ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ ನಡೆದು ಅಧಿಕೃತ ಅಭ್ಯರ್ಥಿಗಳು ಸೋಲು ಅನುಭವಿಸಿದರೆ ಸಮ್ಮಿಶ್ರ ಸರ್ಕಾರಕ್ಕೂ ಆಪತ್ತು ತಪ್ಪದು ಎಂಬ ಕಾರಣಕ್ಕೆ ಕಾಂಗ್ರೆಸ್‌-ಜೆಡಿಎಸ್‌ ನಾಯಕರು ತಮ್ಮ ತಮ್ಮ ಶಾಸಕರನ್ನು ಬಂದೋಬಸ್ತ್ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

ಅ.4 ರಂದು ನಿಗದಿಯಾಗಿರುವ ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ ಮೂರು ಸ್ಥಾನಗಳಿಗೆ ನಡೆಯುವ  ಉಪ ಚುನಾವಣೆ ರಹಸ್ಯ ಮತದಾನ (ಸೀಕ್ರೆಟ್‌ ಬ್ಯಾಲೆಟ್‌) ಇರುತ್ತದೆ.
– ಎಂ.ಎಸ್‌. ಕುಮಾರಸ್ವಾಮಿ, ಜಂಟಿ ಕಾರ್ಯದರ್ಶಿ, ರಾಜ್ಯ ವಿಧಾನಸಭೆ

ಒಟ್ಟು ಶಾಸಕರು- 222
ಬಿಜೆಪಿ-104
ಕಾಂಗ್ರೆಸ್‌-79
ಜೆಡಿಎಸ್‌ ಮತ್ತು ಬಿಎಸ್‌ಪಿ- 37
ಪಕ್ಷೇತರ-2
ಚುನಾವಣೆ ನಡೆಯುವ ವಿಧಾನ ಪರಿಷತ್‌ ಸ್ಥಾನಗಳು-3
ಪ್ರತಿ ಅಭ್ಯರ್ಥಿಗೆ ಬೇಕಾದ ಮತ-111-112
ಬಿಜೆಪಿಗೆ ಬೇಕಾದ ಸಂಖ್ಯಾಬಲ-112
ಪ್ರಸ್ತುತ ಬಿಜೆಪಿ ಬಲ-104
ಆಪರೇಷನ್‌ ಎಂಎಲ್‌ಸಿಗೆ ಬೇಕಾದ ಹೆಚ್ಚುವರಿ ಶಾಸಕರ ಸಂಖ್ಯೆ-8

– ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.