ನೆಲ, ಚಾವಣಿ ಮೇಲೆ ಹೋರ್ಡಿಂಗ್ಗೆ ಅವಕಾಶ?
ಜಾಹೀರಾತು ಮಾಫಿಯಾಗೆ ನಗರಾಭಿವೃದ್ಧಿ ಇಲಾಖೆ ಮಣಿದಿದೆ ಎಂಬ ಆರೋಪ
Team Udayavani, Jul 29, 2019, 7:48 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ನಗರದ ಸಾರ್ವಜನಿಕ ಪ್ರದೇಶಗಳನ್ನು ಜಾಹೀರಾತು ಮುಕ್ತಗೊಳಿಸುವ ಪ್ರಯತ್ನಕ್ಕೆ ಕಳೆದ ವರ್ಷ ಆಗಸ್ಟ್ನಲ್ಲಿ ಬಿಬಿಎಂಪಿ ಚಾಲನೆ ನೀಡಿತ್ತು. ಇದಾಗಿ ಒಂದು ವರ್ಷ ಪೂರ್ಣಗೊಳ್ಳುವ ಮುನ್ನವೇ ನಗರದಲ್ಲಿ ಮತ್ತೆ ಜಾಹೀರಾತುಗಳು ಕಾಣಿಸಿಕೊಳ್ಳುವ ಮುನ್ಸೂಚನೆ ಸಿಕ್ಕಿದೆ.
ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿ ಜಾಹೀರಾತು ನೀತಿ-2019ರ ಕರಡನ್ನು ಸಿದ್ಧಪಡಿಸಿದ್ದು, ಈ ನಿಟ್ಟಿನಲ್ಲಿ ಇಲಾಖೆಯು ಜಾಹೀರಾತು ಮಾಫಿಯಾಗೆ ಮಣಿದಿದೆ ಎಂಬ ಅನುಮಾನಕ್ಕೆ ಕಾರಣವಾಗಿದೆ.
2018ರಲ್ಲಿ ಸಾಯಿ ದತ್ತ ಮತ್ತು ಇತರರು ಅನಧಿಕೃತ ಜಾಹೀರಾತು ಮತ್ತು ಫ್ಲೆಕ್ಸ್ ಬ್ಯಾನರ್ಗಳ ಹಾವಳಿ ನಿಯಂತ್ರಣಕ್ಕೆ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್ನ ಅಂದಿನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರು ನಗರದ ಎಲ್ಲ ಅನಧಿಕೃತ ಜಾಹೀರಾತು ಮತ್ತು ಫ್ಲೆಕ್ಸ್ ಬ್ಯಾನರ್ ತೆರವುಗೊಳಿಸುವಂತೆ ಬಿಬಿಎಂಪಿಗೆ ನಿರ್ದೇ ಶನ ನೀಡಿದ್ದರು. ಇದರ ಅನ್ವಯ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಜಾಹೀರಾತು ನಿಷೇಧ ಜಾರಿಗೆ ನಿರ್ಣಯ ತೆಗೆದುಕೊಳ್ಳಲಾಗಿತ್ತು.
ಹೈಕೋರ್ಟ್ ಸೂಚನೆ ಮೇರೆಗೆ ಪಾಲಿಕೆ ಹೊರಾಂಗಣ ಸೈನೇಜ್ ಮತ್ತು ಸಾರ್ವಜನಿಕ ಸಂದೇಶ ನೀತಿ ಹಾಗೂ ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಬೈಲಾ-2018 ರೂಪಿಸಿತ್ತು. ಇದಕ್ಕೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಸೆ.11ರಂದು ಅನುಮೋದನೆ ನೀಡಿದ್ದರು. ಸೆ.25ರಂದು ಬೈಲಾ ಕರಡನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿತ್ತು. ನಂತರ, ಬಿಬಿಎಂಪಿ ಆಯುಕ್ತರು ಅಂತಿಮ ಅನುಮೋದನೆಗಾಗಿ ಬೈಲಾ ಕರಡನ್ನು ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಿದ್ದರು.
ನಗರಾಭಿವೃದ್ಧಿ ಇಲಾಖೆಯು ಈ ಬಗ್ಗೆ ಸಂಸದೀಯ ವ್ಯವಹಾರಗಳ ಇಲಾಖೆಯ ಸಲಹೆ ಕೇಳಿತ್ತು. ಬೈಲಾ ಕರಡು ದೋಷಪೂರಿತವಾಗಿದೆ, ಅದನ್ನು ಪರಿಷ್ಕರಿಸಿ ಮತ್ತೆ ಸಾರ್ವಜನಿಕರಿಂದ ಆಕ್ಷೇಪಣೆ ಹಾಗೂ ಸಲಹೆ ಆಹ್ವಾನಿಸಬೇಕು ಎಂದು ಸಂಸದೀಯ ವ್ಯವಹಾರಗಳ ಇಲಾಖೆ ಸಲಹೆ ನೀಡಿತ್ತು. ಆದರೆ, ಈ ನಡುವೆ ಪಾಲಿಕೆ ಸಲ್ಲಿಸಿದ್ದ ಕರಡು ಪ್ರತಿಯ ಪ್ರಮುಖ ಅಂಶಗಳನ್ನು ತಿರಸ್ಕರಿಸಿರುವ ನಗರಾಭಿವೃದ್ಧಿ ಇಲಾಖೆ ಹೊಸದಾಗಿ ಬಿಬಿಎಂಪಿ ಜಾಹೀರಾತು ನೀತಿ-2019ರ ಕರಡನ್ನು ರೂಪಿಸಿದೆ.
ಇದರ ಪ್ರಕಾರ, ನಗರದ ನೆಲದಲ್ಲಿ, ಚಾವಣಿಗಳ ಮೇಲೆ ಖಾಸಗಿ ಹೋರ್ಡಿಂಗ್ಗಳಿಗೆ ಹಾಗೂ ಬಿಲ್ಬೋರ್ಡ್ಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ. ಸಾರ್ವಜನಿಕರಿಗೆ ಸಮಸ್ಯೆಯಾಗುವ ಹಲವು ರೀತಿಯ ಜಾಹೀರಾತುಗಳನ್ನು ನಿಷೇಧಿಸಲು ಪಾಲಿಕೆ ನಿರ್ಣಯ ಕೈಗೊಂಡಿತ್ತು. ಆದರೆ, ಈ ನಿಷೇಧಗಳ ಬಗ್ಗೆ ನಗರಾಭಿವೃದ್ಧಿ ಇಲಾಖೆ ಪ್ರಕಟಿಸಿರುವ ಕರಡಿನಲ್ಲಿ ಯಾವುದೇ ಉಲ್ಲೇಖವಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ
ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!