ಆಪ್ಟಿಕಲ್‌ ಕೇಬಲ್‌, ಯಂತ್ರ ಜಪ್ತಿ


Team Udayavani, Dec 13, 2018, 2:50 PM IST

blore-78.jpg

ಕೆ.ಆರ್‌.ಪುರ: ವಿಜಿನಾಪುರ ವಾರ್ಡ್‌ನ ರಾಮಮೂರ್ತಿನಗರ ಮುಖ್ಯರಸ್ತೆಯಲ್ಲಿ ಖಾಸಗಿ ಟೆಲಿಕಾಂ ಸಂಸ್ಥೆಯೊಂದರ ಅಂತರ್ಜಾಲ ಸಂಪರ್ಕಕ್ಕಾಗಿ ರಾತ್ರೋರಾತ್ರಿ ರಸ್ತೆ ಅಗೆದು, ಅನಧಿಕೃತವಾಗಿ ಒಎಫ್ಸಿ ಕೇಬಲ್‌ ಅಳವಡಿಸಲಾಗಿದೆ.

ಮುಖ್ಯರಸ್ತೆಯನ್ನು ಮಂಗಳವಾರ ರಾತ್ರಿ ಎಲ್ಲೆಂದರಲ್ಲಿ ಅಗೆದು ಒಎಫ್ಸಿ ಕೇಬಲ್‌ ಅಳವಡಿಸುತ್ತಿರುವುದನ್ನು ಕಂಡ ವಿಜಿನಾಪುರ ವಾರ್ಡ್‌ನ ಪಾಲಿಕೆ ಸದಸ್ಯ ಎಸ್‌. ರಾಜು, ಕಾಮಗಾರಿಗೆ ಪಾಲಿಕೆಯ ಅನುಮತಿ ಪಡೆದಿರುವ ಬಗ್ಗೆ ವಿಚಾರಿಸಿದ್ದಾರೆ. ಆದರೆ ಯಾರಿಂದಲೂ ಅನುಮತಿ ಪಡೆಯದೆ ಅನಧಿಕೃತವಾಗಿ ರಸ್ತೆ ಅಗೆದು ಕೇಬಲ್‌ ಅಳವಡಿಸುತ್ತಿರುವ ವಿಷಯ ತಿಳಿದು, ಕಾಮಗಾರಿ ತಡೆದ ರಾಜು, ಅಲ್ಲಿ ಬಳಸುತ್ತಿದ್ದ ಕೇಬಲ್‌ ಹಾಗೂ ಕಾಮಗಾರಿಗೆ ಬಳಸುತ್ತಿದ್ದ ಯಂತ್ರಗಳನ್ನು ಬಿಬಿಎಂಪಿ ವಶಕ್ಕೆ ಒಪ್ಪಿಸಿದ್ದಾರೆ.

“ವಿಜಿನಾಪುರ ವ್ಯಾಪ್ತಿಯಲ್ಲಿ ಬಿಬಿಎಂಪಿ ಅನುಮತಿ ಇಲ್ಲದೇ ಎಲ್ಲೆಂದರಲ್ಲಿ ಅನಧಿಕೃತವಾಗಿ ಒಎಫ್ಸಿ ಕೇಬಲ್‌ ಅಳವಡಿಸುತ್ತಿದ್ದು, ಇದನ್ನು ತಡೆಯುವಂತೆ ಅಧಿಕಾರಿಗಳಿಗೆ ಮತ್ತು ಸ್ಥಳೀಯ ಪೊಲೀಸ್‌ ಠಾಣೆಗೆ ಹಲವು ಬಾರಿ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಯಂತ್ರಗಳಿಂದ ಗುಂಡಿ ತೆಗೆದು, ಕೇಬಲ್‌ ಅಳವಡಿಸಿದ ನಂತರ ಆ ಗುಡಿಗಳನ್ನು ಮಣ್ಣಿನಿಂದ ಮುಚ್ಚುತ್ತಾರೆ. ಇದರಿಂದ ಕೋಟ್ಯಂತರ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ರಸ್ತೆಗಳು ಹಾಳಾಗುತ್ತಿವೆ. ವಾರ್ಡ್‌ ನಲ್ಲಿ ರಸ್ತೆ ಸರಿ ಇಲ್ಲ ಎಂದು ಸಾರ್ವಜನಿಕರು ನಮ್ಮನ್ನು ದೂರುತ್ತಾರೆ ಎಂದು ಪಾಲಿಕೆ ಸದಸ್ಯ ಎಸ್‌.ರಾಜು ಆರೋಪಿಸಿದ್ದಾರೆ. 

“ಹೈಕೋರ್ಟ್‌ ಆದೇಶದಂತೆ ಪಾಲಿಕೆಯು ನಗರದಲ್ಲಿ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದೆ. ಆದರೆ, ರಾಜಕೀಯ ಪ್ರಭಾವ ಹೊಂದಿರುವ ಕೆಲವರು, ಪಾಲಿಕೆಯಿಂದ ಅನುಮತಿ ಪಡೆಯದೆಯೇ ರಾತೋರಾತ್ರಿ ಅನಧಿಕೃತವಾಗಿ ಒಎಫ್ಸಿ ಕೇಬಲ್‌ ಅಳವಡಿಸುತ್ತಿದ್ದಾರೆ. ವಿಜಿನಾಪುರ ಕ್ಷೇತ್ರದಲ್ಲಂತೂ ಈ ಕೇಬಲ್‌ ಅಳವಡಿಸುವುದು ದೊಡ್ಡ ದಂಧೆಯಾಗಿ ಮಾರ್ಪಟ್ಟಿದೆ. ಅಕ್ರಮ ಎಸಗುತ್ತಿರುವವರನ್ನು ಪ್ರಶ್ನಿಸಲು ಅಧಿಕಾರಿಗಳಿಗೆ ಧೈರ್ಯವಿಲ್ಲ’ ಎಂದು ರಾಜು ದೂರಿದರು. 

ಮಂಗಳವಾರ ರಾತ್ರಿ ವಾರ್ಡ್‌ನ ರಾಮಮೂರ್ತಿ ನಗರದ ಮುಖ್ಯ ರಸ್ತೆಯಲ್ಲಿ ಅನಧಿಕೃತವಾಗಿ ಕೇಬಲ್‌ ಅಳವಡಿಸುತ್ತಿದ್ದ ಏಜೆನ್ಸಿ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಾಮಗಾರಿ ನಡೆಸಲು ಪಾಲಿಕೆಯಿಂದ ಅನುಮತಿ ಪಡೆದಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಏಜೆನ್ಸಿಗೆ ಸೂಚಿಸಲಾಗಿದೆ. ಕಾಮಗಾರಿಗೆ ಬಳಿಸುತ್ತಿದ್ದ ಯಂತ್ರಗಳನ್ನು ಜಪ್ತಿ ಮಾಡಿದ್ದು, ದಂಡ ವಸೂಲಿ ಮಾಡಲಾಗುವುದು ಎಂದು ಸಹಾಯಕ ಇಂಜಿನಿಯರ್‌ ಕೇಶವ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.